AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ನೆತ್ತರು ಸುರಿಸುತ್ತಾ ಜನರಲ್ಲಿ ಸಹಾಯ ಕೇಳಿದ ಅತ್ಯಾಚಾರ ಸಂತ್ರಸ್ತೆ; ದೂರ ಓಡಿಸಿದ ಜನ

"ಪ್ರಕರಣ ದಾಖಲಿಸಲಾಗಿದೆ. ಅಪರಾಧಿಗಳನ್ನು ಶೀಘ್ರದಲ್ಲೇ ಗುರುತಿಸಲು ಮತ್ತು ಹಿಡಿಯಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯು ದೃಢಪಟ್ಟಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಚಿನ್ ಶರ್ಮಾ ತಿಳಿಸಿದ್ದಾರೆ.

ಮಧ್ಯಪ್ರದೇಶ: ನೆತ್ತರು ಸುರಿಸುತ್ತಾ ಜನರಲ್ಲಿ ಸಹಾಯ ಕೇಳಿದ ಅತ್ಯಾಚಾರ ಸಂತ್ರಸ್ತೆ; ದೂರ ಓಡಿಸಿದ ಜನ
ಅತ್ಯಾಚಾರ ಸಂತ್ರಸ್ತೆ
ರಶ್ಮಿ ಕಲ್ಲಕಟ್ಟ
|

Updated on:Sep 27, 2023 | 7:25 PM

Share

ಉಜ್ಜಯಿನಿ ಸೆಪ್ಟೆಂಬರ್ 27: ಮಧ್ಯಪ್ರದೇಶದ (Madhya Pradesh) ಉಜ್ಜಯಿನಿಯಲ್ಲಿ (Ujjain) ಸೋಮವಾರ 12 ವರ್ಷದ ಬಾಲಕಿಯೊಬ್ಬಳು ಅರೆಬೆತ್ತಲೆಯಾಗಿ ಬೀದಿಯಲ್ಲಿ ಸಹಾಯಕ್ಕಾಗಿ ಓಡಾಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಆಕೆಗೆ ರಕ್ತಸ್ರಾವವಾಗುತ್ತಿತ್ತು. ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರ ಎಸಗಿ ನಗರದ ದಂಡಿ ಆಶ್ರಮದ ಬಳಿ ಎಸೆದಿದ್ದಾರೆ ಎನ್ನಲಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳಲ್ಲಿ, ಹುಡುಗಿ ವಸತಿ ಪ್ರದೇಶದಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಒಂದು ಚಿಂದಿ ಬಟ್ಟೆಯನ್ನು ಮೈಗೆ ಹೊದ್ದು ಆಕೆ ನಡೆಯುತ್ತಾ ಬರುತ್ತಿರುವುದು ವಿಡಿಯೊದಲ್ಲಿದೆ. ಹಾಗೆ ನಡೆದು ಬರುತ್ತಿರುವಾಗ ಮನೆಯೊಂದರ ಹೊರಗೆ ನಿಂತಿರುವ ಒಬ್ಬ ವ್ಯಕ್ತಿಯಲ್ಲಿ ಆಕೆ ಸಹಾಯ ಬೇಡುತ್ತಾಳೆ. ಆತ ಆಕೆಯಲ್ಲಿ ಹೋಗು ಹೋಗು ಎಂದು ಕೈಸನ್ನೆ ಮಾಡುತ್ತಿರುವುದು ವಿಡಿಯೊದಲ್ಲಿದೆ.

ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗಾಗಿ ಇಂದೋರ್‌ಗೆ ಕಳುಹಿಸಲಾಗಿದೆ.

“ಪ್ರಕರಣ ದಾಖಲಿಸಲಾಗಿದೆ. ಅಪರಾಧಿಗಳನ್ನು ಶೀಘ್ರದಲ್ಲೇ ಗುರುತಿಸಲು ಮತ್ತು ಹಿಡಿಯಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯು ದೃಢಪಟ್ಟಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಚಿನ್ ಶರ್ಮಾ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಹುಡುಗಿ ಎಲ್ಲಿಂದ ಬಂದಿದ್ದಾಳೆಂದು ನಮಗೆ ನಿಖರವಾಗಿ ಹೇಳಲು ಸಾಧ್ಯವಾಗಲಿಲ್ಲ. ಆದರೆ ಆಕೆಯ ಉಚ್ಚಾರಣೆಯು ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನವರು ಎಂದು ಸೂಚಿಸುತ್ತದೆ ಎಂದು ಅವರು ಹೇಳಿದರು.

ಅಪ್ರಾಪ್ತ ಬಾಲಕಿಯ ಅತ್ಯಾಚಾರದ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಉಜ್ಜಯಿನಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಸಮಿತಿಯು ಪೊಲೀಸರು ಸಲ್ಲಿಸಿದ ಆರಂಭಿಕ ವರದಿಯ ವಿವರಗಳನ್ನು ಕೇಳಿದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಲ್ಲಿ ಉಲ್ಲೇಖಿಸಲಾದ ಮಾರ್ಗಸೂಚಿಗಳನ್ನು ಅನುಸರಿಸಲು ಅವರನ್ನು ಕೇಳಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಮುಖ್ಯಮಂತ್ರಿ ಚೌಹಾಣ್​ರನ್ನು ಬಿಜೆಪಿ ಕಡೆಗಣಿಸುತ್ತಿದೆಯೇ? ಅಚ್ಚರಿ ಮೂಡಿಸಿದ ಸಿಎಂ ನಡೆ

ಆಕೆ ಸಹಾಯಕ್ಕೆ ಅಂಗಲಾಚುತ್ತಿದ್ದರೂ ಯಾರೂ ಆ ಬಾಲಕಿಗೆ ಸಹಾಯ ಮಾಡಲು ಮುಂದಾಗಲಿಲ್ಲ. ಇದು ಸಮಾಜದ ಕರಾಳ ಮುಖವನ್ನು ಬಹಿರಂಗಪಡಿಸುತ್ತದೆ ಎಂದು ಎನ್‌ಸಿಪಿಸಿಆರ್ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Wed, 27 September 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ