AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಡು ತೀರಿಸಿಕೊಳ್ಳಲು ಎಂಟು ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ 13 ವರ್ಷದ ದೆಹಲಿ ಹುಡುಗ

ತಮ್ಮ ಮಗ ತನ್ನ ಸ್ನೇಹಿತನೊಂದಿಗೆ ಮನೆಯ ಹೊರಗೆ ಆಟವಾಡುತ್ತಿರುವುದನ್ನು ಕುಟುಂಬದವರು ಕೊನೆಯದಾಗಿ ನೋಡಿದ್ದರು. ಆರಂಭದಲ್ಲಿ, ತನಿಖಾಧಿಕಾರಿಗಳು ಹುಡುಗನನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.

ಸೇಡು ತೀರಿಸಿಕೊಳ್ಳಲು ಎಂಟು ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ 13 ವರ್ಷದ ದೆಹಲಿ ಹುಡುಗ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 05, 2022 | 10:49 AM

Share

ನವ ದೆಹಲಿ: ದೆಹಲಿಯ ರೋಹಿಣಿಯಲ್ಲಿ ಎಂಟು ವರ್ಷದ ಬಾಲಕನನ್ನು ಅವನ 13 ವರ್ಷದ ಸ್ನೇಹಿತನು ಜಗಳ ಮಾಡಿ, ನಂತರ ಅಪಹರಿಸಿ (Kidnap) ಕೊಂದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸದ್ಯ ಆರೋಪಿ ಯುವಕನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಆರೋಪಿ ಮತ್ತು ಆತನ ಸ್ನೇಹಿತ ಇಬ್ಬರೂ ಜಗಳವಾಡಿದ್ದಾರೆ. ಆ ಘಟನೆಯಿಂದ ಆರೋಪಿಗಳು ಸೇಡು ತೀರಿಸಿಕೊಳ್ಳಲು ಬಯಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ ನಾಪತ್ತೆಯಾದ ನಂತರ ಬಾಲಕನ ಕುಟುಂಬದವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ತಮ್ಮ ಮಗ ತನ್ನ ಸ್ನೇಹಿತನೊಂದಿಗೆ ಮನೆಯ ಹೊರಗೆ ಆಟವಾಡುತ್ತಿರುವುದನ್ನು ಕುಟುಂಬದವರು ಕೊನೆಯದಾಗಿ ನೋಡಿದ್ದರು. ಆರಂಭದಲ್ಲಿ, ತನಿಖಾಧಿಕಾರಿಗಳು ಹುಡುಗನನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಆದರೆ ಆತನ 13 ವರ್ಷದ ಸ್ನೇಹಿತನನ್ನು ವಿಚಾರಿಸಿದಾಗ, ಕಾಡಿಗೆ ಕರೆದೊಯ್ದು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಡುಗನ ತಾಯಿಯ ಹೇಳಿಕೆಯನ್ನು ಆಧರಿಸಿ, ಪ್ರಕರಣವನ್ನು ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದ್ದು, 13 ವರ್ಷದ ಬಾಲಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹುಡುಗನನ್ನು ಕಲ್ಲಿನಿಂದ ಹೊಡೆದು ಕೊಂದಿದ್ದು, ಮತ್ತು ಆತನ ಫೋನ್ ಕಿತ್ತುಕೊಂಡಿದ್ದಾನೆ ಎಂದು ಬಾಲಾಪರಾಧಿ ಬಹಿರಂಗಪಡಿಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ರೋಹಿಣಿ) ಪ್ರಣವ್ ತಾಯಲ್ ಹೇಳಿದ್ದಾರೆ.

ಹುಡುಗನ ದೇಹ ಮತ್ತು ಮೊಬೈಲ್ ಫೋನ್​ನ್ನು ಸೊಹಾಟಿ ಗ್ರಾಮದ ಕಾಡಿನ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಆರೋಪಿಯನ್ನು ಕೊಲೆಯ ಮೊಕದ್ದಮೆ ಹೂಡಲಾಗಿದೆ. ಬಾಲಾಪರಾಧಿ ಸೇಡು ತೀರಿಸಿಕೊಳ್ಳಲು ಹಲ್ಲೆ ಮಾಡಲು ಯೋಜಿಸಿದ್ದ ಎಂದು ನಮ್ಮ ತನಿಖೆಯಿಂದ ತಿಳಿದುಬಂದಿದೆ. ಹಲ್ಲೆಯ ನಂತರ ಬಾಲಾಪರಾಧಿ ಪರಾರಿಯಾಗಿದ್ದಾನೆ ಎಂದು ಅವರು ಹೇಳಿದರು.

ಘಟನೆಗೂ ಮುನ್ನ ಬಾಲಕ ಮತ್ತು ಬಾಲಾಪರಾಧಿ ಪರಸ್ಪರ ಜಗಳವಾಡಿದ್ದಾರೆ. ಹಾಗಾಗಿ ಸೇಡು ತೀರಿಸಿಕೊಳ್ಳಲು ಯೋಜಿಸಿ, ಆತನನ್ನು ಕಲ್ಲಿನಿಂದ ಹೊಡೆದಿದ್ದಾನೆ ಎಂದು ಶ್ರೀ ತಯಾಲ್ ಹೇಳಿದ್ದಾರೆ. ಸದ್ಯ ನಾವು ಹುಡುಗನನ್ನು ಬಂಧಿಸಿದ್ದೇವೆ ಮತ್ತು ಅವನ ಕುಟುಂಬ ಸದಸ್ಯರೊಂದಿಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಸೂಕ್ತ ಕೌನ್ಸೆಲಿಂಗ್ ಮಾಡಲಾಗುತ್ತಿದೆ ಎಂದು ಡಿಸಿಪಿ ಹೇಳಿದ್ದಾರೆ.

ಇದನ್ನೂ ಓದಿ:

ಹಾಸನ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ ಬೆಳಕಿಗೆ! 55 ಜನ ಕಾರ್ಮಿಕರನ್ನು ಕೂಡಿ ಹಾಕಿ ಬಲವಂತದಿಂದ ದುಡಿಸಿದ ವ್ಯಕ್ತಿ

ಪೊಲೀಸರು ಮೊಬೈಲ್ ಫೋನ್ ಕೇಳುವಂತಿಲ್ಲ: ಜನಾಕ್ರೋಶಕ್ಕೆ ಪೊಲೀಸ್ ಆಯುಕ್ತ ಕಮಲ್​ ಪಂತ್ ಉತ್ತರ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್