AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಡು ತೀರಿಸಿಕೊಳ್ಳಲು ಎಂಟು ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ 13 ವರ್ಷದ ದೆಹಲಿ ಹುಡುಗ

ತಮ್ಮ ಮಗ ತನ್ನ ಸ್ನೇಹಿತನೊಂದಿಗೆ ಮನೆಯ ಹೊರಗೆ ಆಟವಾಡುತ್ತಿರುವುದನ್ನು ಕುಟುಂಬದವರು ಕೊನೆಯದಾಗಿ ನೋಡಿದ್ದರು. ಆರಂಭದಲ್ಲಿ, ತನಿಖಾಧಿಕಾರಿಗಳು ಹುಡುಗನನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.

ಸೇಡು ತೀರಿಸಿಕೊಳ್ಳಲು ಎಂಟು ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ 13 ವರ್ಷದ ದೆಹಲಿ ಹುಡುಗ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 05, 2022 | 10:49 AM

ನವ ದೆಹಲಿ: ದೆಹಲಿಯ ರೋಹಿಣಿಯಲ್ಲಿ ಎಂಟು ವರ್ಷದ ಬಾಲಕನನ್ನು ಅವನ 13 ವರ್ಷದ ಸ್ನೇಹಿತನು ಜಗಳ ಮಾಡಿ, ನಂತರ ಅಪಹರಿಸಿ (Kidnap) ಕೊಂದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸದ್ಯ ಆರೋಪಿ ಯುವಕನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಆರೋಪಿ ಮತ್ತು ಆತನ ಸ್ನೇಹಿತ ಇಬ್ಬರೂ ಜಗಳವಾಡಿದ್ದಾರೆ. ಆ ಘಟನೆಯಿಂದ ಆರೋಪಿಗಳು ಸೇಡು ತೀರಿಸಿಕೊಳ್ಳಲು ಬಯಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ ನಾಪತ್ತೆಯಾದ ನಂತರ ಬಾಲಕನ ಕುಟುಂಬದವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ತಮ್ಮ ಮಗ ತನ್ನ ಸ್ನೇಹಿತನೊಂದಿಗೆ ಮನೆಯ ಹೊರಗೆ ಆಟವಾಡುತ್ತಿರುವುದನ್ನು ಕುಟುಂಬದವರು ಕೊನೆಯದಾಗಿ ನೋಡಿದ್ದರು. ಆರಂಭದಲ್ಲಿ, ತನಿಖಾಧಿಕಾರಿಗಳು ಹುಡುಗನನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಆದರೆ ಆತನ 13 ವರ್ಷದ ಸ್ನೇಹಿತನನ್ನು ವಿಚಾರಿಸಿದಾಗ, ಕಾಡಿಗೆ ಕರೆದೊಯ್ದು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಡುಗನ ತಾಯಿಯ ಹೇಳಿಕೆಯನ್ನು ಆಧರಿಸಿ, ಪ್ರಕರಣವನ್ನು ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದ್ದು, 13 ವರ್ಷದ ಬಾಲಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹುಡುಗನನ್ನು ಕಲ್ಲಿನಿಂದ ಹೊಡೆದು ಕೊಂದಿದ್ದು, ಮತ್ತು ಆತನ ಫೋನ್ ಕಿತ್ತುಕೊಂಡಿದ್ದಾನೆ ಎಂದು ಬಾಲಾಪರಾಧಿ ಬಹಿರಂಗಪಡಿಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ರೋಹಿಣಿ) ಪ್ರಣವ್ ತಾಯಲ್ ಹೇಳಿದ್ದಾರೆ.

ಹುಡುಗನ ದೇಹ ಮತ್ತು ಮೊಬೈಲ್ ಫೋನ್​ನ್ನು ಸೊಹಾಟಿ ಗ್ರಾಮದ ಕಾಡಿನ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಆರೋಪಿಯನ್ನು ಕೊಲೆಯ ಮೊಕದ್ದಮೆ ಹೂಡಲಾಗಿದೆ. ಬಾಲಾಪರಾಧಿ ಸೇಡು ತೀರಿಸಿಕೊಳ್ಳಲು ಹಲ್ಲೆ ಮಾಡಲು ಯೋಜಿಸಿದ್ದ ಎಂದು ನಮ್ಮ ತನಿಖೆಯಿಂದ ತಿಳಿದುಬಂದಿದೆ. ಹಲ್ಲೆಯ ನಂತರ ಬಾಲಾಪರಾಧಿ ಪರಾರಿಯಾಗಿದ್ದಾನೆ ಎಂದು ಅವರು ಹೇಳಿದರು.

ಘಟನೆಗೂ ಮುನ್ನ ಬಾಲಕ ಮತ್ತು ಬಾಲಾಪರಾಧಿ ಪರಸ್ಪರ ಜಗಳವಾಡಿದ್ದಾರೆ. ಹಾಗಾಗಿ ಸೇಡು ತೀರಿಸಿಕೊಳ್ಳಲು ಯೋಜಿಸಿ, ಆತನನ್ನು ಕಲ್ಲಿನಿಂದ ಹೊಡೆದಿದ್ದಾನೆ ಎಂದು ಶ್ರೀ ತಯಾಲ್ ಹೇಳಿದ್ದಾರೆ. ಸದ್ಯ ನಾವು ಹುಡುಗನನ್ನು ಬಂಧಿಸಿದ್ದೇವೆ ಮತ್ತು ಅವನ ಕುಟುಂಬ ಸದಸ್ಯರೊಂದಿಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಸೂಕ್ತ ಕೌನ್ಸೆಲಿಂಗ್ ಮಾಡಲಾಗುತ್ತಿದೆ ಎಂದು ಡಿಸಿಪಿ ಹೇಳಿದ್ದಾರೆ.

ಇದನ್ನೂ ಓದಿ:

ಹಾಸನ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ ಬೆಳಕಿಗೆ! 55 ಜನ ಕಾರ್ಮಿಕರನ್ನು ಕೂಡಿ ಹಾಕಿ ಬಲವಂತದಿಂದ ದುಡಿಸಿದ ವ್ಯಕ್ತಿ

ಪೊಲೀಸರು ಮೊಬೈಲ್ ಫೋನ್ ಕೇಳುವಂತಿಲ್ಲ: ಜನಾಕ್ರೋಶಕ್ಕೆ ಪೊಲೀಸ್ ಆಯುಕ್ತ ಕಮಲ್​ ಪಂತ್ ಉತ್ತರ

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ