AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ನೀರಾವರಿ ಕಾಲುವೆಗೆ ಬಿದ್ದು 6 ವರ್ಷದ ಬಾಲಕಿ ಸಾವು

ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ಸಂಜೆ ಆರು ವರ್ಷದ ಬಾಲಕಿ ನೀರು ತುಂಬಿದ ನೀರಾವರಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದಾಳೆ.

Tamil Nadu: ನೀರಾವರಿ ಕಾಲುವೆಗೆ ಬಿದ್ದು 6 ವರ್ಷದ ಬಾಲಕಿ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 14, 2022 | 6:15 PM

Share

ಮೈಲಾಡುತುರೈ: 6 ವರ್ಷದ ಬಾಲಕಿಯೊಬ್ಬಳು ನೀರು ತುಂಬಿದ ನೀರಾವರಿ ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ಸಂಜೆ ನಡೆದಿದೆ.

ನವೆಂಬರ್ 12ರ ಶನಿವಾರದಂದು ಮೈಲಾಡುತುರೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಮಳೆಯಾಗಿದೆ, ಸಿರ್ಕಾಲಿ ಪಟ್ಟಣದಲ್ಲಿ ಮಾತ್ರ 43 ಸೆಂ.ಮೀ ಮಳೆಯಾಗಿದೆ. ಇದರಿಂದಾಗಿ ಈ ಪ್ರದೇಶದಲ್ಲಿ ವ್ಯಾಪಕ ಪ್ರವಾಹ ಉಂಟಾಗಿದೆ.

ಭಾನುವಾರ ಸಂಜೆ ಎರುಕ್ಕೂರು ಗ್ರಾಮದ ರಾಮನ್ ಎಂಬುವರ ಪುತ್ರಿ 6 ವರ್ಷದ ಹರ್ಷಿತಾ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ವೇಳೆ ಮನೆಯ ಹಿಂದಿನ ನೀರಾವರಿ ಕಾಲುವೆಗೆ ಬಿದ್ದಿದ್ದಾಳೆ. ಆ ಪ್ರದೇಶದ ಗ್ರಾಮಸ್ಥರು ಆಕೆಯನ್ನು ರಕ್ಷಿಸಲು ಪ್ರಯತ್ನಪಟ್ಟಿದ್ದಾರೆ, ಆದರೆ ಅವಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಆದರೆ ಆಕೆಯ ಮೃತದೇಹವನ್ನು ಮಾತ್ರ ಹೊರತೆಗೆದಿದ್ದಾರೆ.

ಪೊಲೀಸರು ಶವವನ್ನು ಹೊರತೆಗೆದು ಶವಪರೀಕ್ಷೆಗೆ ಕಳುಹಿಸಿದರೆ, ದ್ರಾವಿಡ ಮುನ್ನೇತ್ರ ಕಳಗಂ ಸಚಿವ ಮೆಯ್ಯನಾಥನ್ ಶಿವ ಮತ್ತು ಇತರ ಹಿರಿಯ ಮುಖಂಡರು ಹರ್ಷಿತಾ ಅವರ ಕುಟುಂಬವನ್ನು ಭೇಟಿ ಮಾಡಿ 50,000 ರೂಪಾಯಿಗಳನ್ನು ಪರಿಹಾರವಾಗಿ ನೀಡಿದರು.