AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ನೀರಾವರಿ ಕಾಲುವೆಗೆ ಬಿದ್ದು 6 ವರ್ಷದ ಬಾಲಕಿ ಸಾವು

ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ಸಂಜೆ ಆರು ವರ್ಷದ ಬಾಲಕಿ ನೀರು ತುಂಬಿದ ನೀರಾವರಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದಾಳೆ.

Tamil Nadu: ನೀರಾವರಿ ಕಾಲುವೆಗೆ ಬಿದ್ದು 6 ವರ್ಷದ ಬಾಲಕಿ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 14, 2022 | 6:15 PM

Share

ಮೈಲಾಡುತುರೈ: 6 ವರ್ಷದ ಬಾಲಕಿಯೊಬ್ಬಳು ನೀರು ತುಂಬಿದ ನೀರಾವರಿ ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ಸಂಜೆ ನಡೆದಿದೆ.

ನವೆಂಬರ್ 12ರ ಶನಿವಾರದಂದು ಮೈಲಾಡುತುರೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಮಳೆಯಾಗಿದೆ, ಸಿರ್ಕಾಲಿ ಪಟ್ಟಣದಲ್ಲಿ ಮಾತ್ರ 43 ಸೆಂ.ಮೀ ಮಳೆಯಾಗಿದೆ. ಇದರಿಂದಾಗಿ ಈ ಪ್ರದೇಶದಲ್ಲಿ ವ್ಯಾಪಕ ಪ್ರವಾಹ ಉಂಟಾಗಿದೆ.

ಭಾನುವಾರ ಸಂಜೆ ಎರುಕ್ಕೂರು ಗ್ರಾಮದ ರಾಮನ್ ಎಂಬುವರ ಪುತ್ರಿ 6 ವರ್ಷದ ಹರ್ಷಿತಾ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ವೇಳೆ ಮನೆಯ ಹಿಂದಿನ ನೀರಾವರಿ ಕಾಲುವೆಗೆ ಬಿದ್ದಿದ್ದಾಳೆ. ಆ ಪ್ರದೇಶದ ಗ್ರಾಮಸ್ಥರು ಆಕೆಯನ್ನು ರಕ್ಷಿಸಲು ಪ್ರಯತ್ನಪಟ್ಟಿದ್ದಾರೆ, ಆದರೆ ಅವಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಆದರೆ ಆಕೆಯ ಮೃತದೇಹವನ್ನು ಮಾತ್ರ ಹೊರತೆಗೆದಿದ್ದಾರೆ.

ಪೊಲೀಸರು ಶವವನ್ನು ಹೊರತೆಗೆದು ಶವಪರೀಕ್ಷೆಗೆ ಕಳುಹಿಸಿದರೆ, ದ್ರಾವಿಡ ಮುನ್ನೇತ್ರ ಕಳಗಂ ಸಚಿವ ಮೆಯ್ಯನಾಥನ್ ಶಿವ ಮತ್ತು ಇತರ ಹಿರಿಯ ಮುಖಂಡರು ಹರ್ಷಿತಾ ಅವರ ಕುಟುಂಬವನ್ನು ಭೇಟಿ ಮಾಡಿ 50,000 ರೂಪಾಯಿಗಳನ್ನು ಪರಿಹಾರವಾಗಿ ನೀಡಿದರು.

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ