AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆ ಮಾಡಿದ ಯುವಕ: 4 ದಿನ ಶವದ ಜತೆ ಇದ್ದು ಆರೋಪಿ ಮುಂದೆ ಮಾಡಿದ್ದೇನು? ಇಲ್ಲಿದೆ ಇಂಟ್ರೆಸ್ಟಿಂಗ್​ ಸ್ಟೋರಿ

ಐಫೋನ್ ಆಸೆಗಾಗಿ ಕೊರಿಯರ್​ ಬಾಯ್​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ.

ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆ ಮಾಡಿದ ಯುವಕ: 4 ದಿನ ಶವದ ಜತೆ ಇದ್ದು ಆರೋಪಿ ಮುಂದೆ ಮಾಡಿದ್ದೇನು? ಇಲ್ಲಿದೆ ಇಂಟ್ರೆಸ್ಟಿಂಗ್​ ಸ್ಟೋರಿ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Feb 19, 2023 | 12:48 PM

Share

ಹಾಸನ: ಐಫೋನ್ ಆಸೆಗಾಗಿ ಕೊರಿಯರ್​ ಬಾಯ್​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಹೇಮಂತ್ ನಾಯಕ್ (23) ಕೊಲೆಯಾದ ಕೊರಿಯರ್​ ಬಾಯ್. ಹೇಮಂತ್​ ದತ್ತ (20) ಕೊಲೆ ಮಾಡಿದ ಆರೋಪಿ. ಸದ್ಯ ಪೊಲೀಸರು ಆರೋಪಿ ಹೇಮಂತ ದತ್ತನನ್ನು ಬಂಧಿಸಿದ್ದಾರೆ.

ಕೊರಿಯರ್​ ಬಾಯ್ ಕೊಲೆಯಾಗಿದ್ದು ಹೇಗೆ?

ಮೂಲತಃ ಹಳೆಕಲ್ಲನಾಯಕನಹಳ್ಳಿ ಗ್ರಾಮದ ಆರೋಪಿ ಹೇಮಂತ್​ ದತ್ತ ಕೂಡ ಡೆಲವರಿ ಬಾಯ್ ಆಗಿದ್ದನು. ಈತನು ಫೆಬ್ರವರಿ 7 ರಂದು 46 ಸಾವಿರಕ್ಕೆ ಆನ್​​ಲೈನ್​ನಲ್ಲಿ ಸೆಕೆಂಡ್ ಹ್ಯಾಂಡ್​ ಐಫೋನ್ ಬುಕ್​ ಮಾಡಿದ್ದನು. ಈ ಹಿನ್ನೆಲೆ ಫೆ.10 ರಂದು ಲಕ್ಷ್ನಿಪುರ ಬಡಾವಣೆಯಲ್ಲಿರುವ ಹೇಮಂತ ದತ್ತ ಮೆನೆಗೆ ಐಫೋನ್​​​ ಡೆಲಿವರಿ ಮಾಡಲೆಂದು ಹೇಮಂತ್ ನಾಯಕ್ ಬಂದಿದ್ದನು. ಈ ವೇಳೆ ಹೇಮಂತ್​ ದತ್ತ ನನ್ನ ಬಳಿ ಹೆಚ್ಚಿನ ಹಣ ಇಲ್ಲ ಎಂದು ಹೇಳಿದ್ದು, ಹಾಗೇ ಐಫೋನ್ ಬಾಕ್ಸ್​​​​ ಓಪನ್​ ಮಾಡಲು ಹೇಳಿದ್ದಾನೆ. ಆಗ ಹೇಮಂತ್​ ನಾಯಕ್​ ಹಣ ನೀಡದೆ ಬಾಕ್ಸ್ ಓಪನ್ ಮಾಡಲ್ಲ ಎಂದಿದ್ದಾನೆ.

ಇದರಿಂದ ಕೋಪಗೊಂಡಿದ್ದ ಆರೋಪಿ ಹೇಮಂತ್​ ದತ್ತ, ಹೇಮಂತ್​ ನಾಯಕನನ್ನು ಮನೆ ಒಳಗೆ ಕರೆಸಿ ಕೂಡಿಸಿದ್ದಾನೆ. ನಂತರ ನನ್ನ ಸ್ನೇಹಿತ ಹಣ ತರುತ್ತಿದ್ದಾನೆ ಸ್ವಲ್ಪ ಹೊತ್ತು ಕಾಯುವಂತೆ ಹೇಳಿದ್ದಾನೆ. ಈ ವೇಳೆ ಹೇಮಂತ್ ನಾಯಕ್ ಮೊಬೈಲ್​​ ನೋಡುತ್ತಾ ಕುಳಿತಿದ್ದನು. ಆಗ ಹೇಮಂತ್​ ದತ್ತ ಹಿಂದಿನಿಂದ ಬಂದು ಚಾಕುವಿನಿಂದ ಇರಿದು ಹೇಮಂತ್​ ನಾಯಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಸುತ್ತಿ 4 ದಿನ ಮನೆಯಲ್ಲಿಟ್ಟಿದ್ದನು.

ಬಳಿಕ ಫೆಬ್ರವರಿ 10 ರ ರಾತ್ರಿ ಬೈಕ್​ನಲ್ಲಿ ಶವ ಹೊತ್ತೊಯ್ದು ಅರಸೀಕೆರೆ ನಗರದ ಅಂಚೆಕೊಪ್ಪಲು ಸಮೀಪದ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟಿರುವ ಆರೋಪ ಕೇಳಿಬಂದಿದೆ. ನಂತರ ಈ ವಿಷಯ ಪೊಲೀಸರಿಗೆ ತಿಳಿದಿದ್ದು, ಅರಸೀಕೆರೆ ನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ