Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆ ಮಾಡಿದ ಯುವಕ: 4 ದಿನ ಶವದ ಜತೆ ಇದ್ದು ಆರೋಪಿ ಮುಂದೆ ಮಾಡಿದ್ದೇನು? ಇಲ್ಲಿದೆ ಇಂಟ್ರೆಸ್ಟಿಂಗ್​ ಸ್ಟೋರಿ

ಐಫೋನ್ ಆಸೆಗಾಗಿ ಕೊರಿಯರ್​ ಬಾಯ್​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ.

ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆ ಮಾಡಿದ ಯುವಕ: 4 ದಿನ ಶವದ ಜತೆ ಇದ್ದು ಆರೋಪಿ ಮುಂದೆ ಮಾಡಿದ್ದೇನು? ಇಲ್ಲಿದೆ ಇಂಟ್ರೆಸ್ಟಿಂಗ್​ ಸ್ಟೋರಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Feb 19, 2023 | 12:48 PM

ಹಾಸನ: ಐಫೋನ್ ಆಸೆಗಾಗಿ ಕೊರಿಯರ್​ ಬಾಯ್​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಹೇಮಂತ್ ನಾಯಕ್ (23) ಕೊಲೆಯಾದ ಕೊರಿಯರ್​ ಬಾಯ್. ಹೇಮಂತ್​ ದತ್ತ (20) ಕೊಲೆ ಮಾಡಿದ ಆರೋಪಿ. ಸದ್ಯ ಪೊಲೀಸರು ಆರೋಪಿ ಹೇಮಂತ ದತ್ತನನ್ನು ಬಂಧಿಸಿದ್ದಾರೆ.

ಕೊರಿಯರ್​ ಬಾಯ್ ಕೊಲೆಯಾಗಿದ್ದು ಹೇಗೆ?

ಮೂಲತಃ ಹಳೆಕಲ್ಲನಾಯಕನಹಳ್ಳಿ ಗ್ರಾಮದ ಆರೋಪಿ ಹೇಮಂತ್​ ದತ್ತ ಕೂಡ ಡೆಲವರಿ ಬಾಯ್ ಆಗಿದ್ದನು. ಈತನು ಫೆಬ್ರವರಿ 7 ರಂದು 46 ಸಾವಿರಕ್ಕೆ ಆನ್​​ಲೈನ್​ನಲ್ಲಿ ಸೆಕೆಂಡ್ ಹ್ಯಾಂಡ್​ ಐಫೋನ್ ಬುಕ್​ ಮಾಡಿದ್ದನು. ಈ ಹಿನ್ನೆಲೆ ಫೆ.10 ರಂದು ಲಕ್ಷ್ನಿಪುರ ಬಡಾವಣೆಯಲ್ಲಿರುವ ಹೇಮಂತ ದತ್ತ ಮೆನೆಗೆ ಐಫೋನ್​​​ ಡೆಲಿವರಿ ಮಾಡಲೆಂದು ಹೇಮಂತ್ ನಾಯಕ್ ಬಂದಿದ್ದನು. ಈ ವೇಳೆ ಹೇಮಂತ್​ ದತ್ತ ನನ್ನ ಬಳಿ ಹೆಚ್ಚಿನ ಹಣ ಇಲ್ಲ ಎಂದು ಹೇಳಿದ್ದು, ಹಾಗೇ ಐಫೋನ್ ಬಾಕ್ಸ್​​​​ ಓಪನ್​ ಮಾಡಲು ಹೇಳಿದ್ದಾನೆ. ಆಗ ಹೇಮಂತ್​ ನಾಯಕ್​ ಹಣ ನೀಡದೆ ಬಾಕ್ಸ್ ಓಪನ್ ಮಾಡಲ್ಲ ಎಂದಿದ್ದಾನೆ.

ಇದರಿಂದ ಕೋಪಗೊಂಡಿದ್ದ ಆರೋಪಿ ಹೇಮಂತ್​ ದತ್ತ, ಹೇಮಂತ್​ ನಾಯಕನನ್ನು ಮನೆ ಒಳಗೆ ಕರೆಸಿ ಕೂಡಿಸಿದ್ದಾನೆ. ನಂತರ ನನ್ನ ಸ್ನೇಹಿತ ಹಣ ತರುತ್ತಿದ್ದಾನೆ ಸ್ವಲ್ಪ ಹೊತ್ತು ಕಾಯುವಂತೆ ಹೇಳಿದ್ದಾನೆ. ಈ ವೇಳೆ ಹೇಮಂತ್ ನಾಯಕ್ ಮೊಬೈಲ್​​ ನೋಡುತ್ತಾ ಕುಳಿತಿದ್ದನು. ಆಗ ಹೇಮಂತ್​ ದತ್ತ ಹಿಂದಿನಿಂದ ಬಂದು ಚಾಕುವಿನಿಂದ ಇರಿದು ಹೇಮಂತ್​ ನಾಯಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಸುತ್ತಿ 4 ದಿನ ಮನೆಯಲ್ಲಿಟ್ಟಿದ್ದನು.

ಬಳಿಕ ಫೆಬ್ರವರಿ 10 ರ ರಾತ್ರಿ ಬೈಕ್​ನಲ್ಲಿ ಶವ ಹೊತ್ತೊಯ್ದು ಅರಸೀಕೆರೆ ನಗರದ ಅಂಚೆಕೊಪ್ಪಲು ಸಮೀಪದ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟಿರುವ ಆರೋಪ ಕೇಳಿಬಂದಿದೆ. ನಂತರ ಈ ವಿಷಯ ಪೊಲೀಸರಿಗೆ ತಿಳಿದಿದ್ದು, ಅರಸೀಕೆರೆ ನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ