AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆ ಮಾಡಿದ ಯುವಕ: 4 ದಿನ ಶವದ ಜತೆ ಇದ್ದು ಆರೋಪಿ ಮುಂದೆ ಮಾಡಿದ್ದೇನು? ಇಲ್ಲಿದೆ ಇಂಟ್ರೆಸ್ಟಿಂಗ್​ ಸ್ಟೋರಿ

ಐಫೋನ್ ಆಸೆಗಾಗಿ ಕೊರಿಯರ್​ ಬಾಯ್​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ.

ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆ ಮಾಡಿದ ಯುವಕ: 4 ದಿನ ಶವದ ಜತೆ ಇದ್ದು ಆರೋಪಿ ಮುಂದೆ ಮಾಡಿದ್ದೇನು? ಇಲ್ಲಿದೆ ಇಂಟ್ರೆಸ್ಟಿಂಗ್​ ಸ್ಟೋರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 19, 2023 | 12:48 PM

Share

ಹಾಸನ: ಐಫೋನ್ ಆಸೆಗಾಗಿ ಕೊರಿಯರ್​ ಬಾಯ್​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಹೇಮಂತ್ ನಾಯಕ್ (23) ಕೊಲೆಯಾದ ಕೊರಿಯರ್​ ಬಾಯ್. ಹೇಮಂತ್​ ದತ್ತ (20) ಕೊಲೆ ಮಾಡಿದ ಆರೋಪಿ. ಸದ್ಯ ಪೊಲೀಸರು ಆರೋಪಿ ಹೇಮಂತ ದತ್ತನನ್ನು ಬಂಧಿಸಿದ್ದಾರೆ.

ಕೊರಿಯರ್​ ಬಾಯ್ ಕೊಲೆಯಾಗಿದ್ದು ಹೇಗೆ?

ಮೂಲತಃ ಹಳೆಕಲ್ಲನಾಯಕನಹಳ್ಳಿ ಗ್ರಾಮದ ಆರೋಪಿ ಹೇಮಂತ್​ ದತ್ತ ಕೂಡ ಡೆಲವರಿ ಬಾಯ್ ಆಗಿದ್ದನು. ಈತನು ಫೆಬ್ರವರಿ 7 ರಂದು 46 ಸಾವಿರಕ್ಕೆ ಆನ್​​ಲೈನ್​ನಲ್ಲಿ ಸೆಕೆಂಡ್ ಹ್ಯಾಂಡ್​ ಐಫೋನ್ ಬುಕ್​ ಮಾಡಿದ್ದನು. ಈ ಹಿನ್ನೆಲೆ ಫೆ.10 ರಂದು ಲಕ್ಷ್ನಿಪುರ ಬಡಾವಣೆಯಲ್ಲಿರುವ ಹೇಮಂತ ದತ್ತ ಮೆನೆಗೆ ಐಫೋನ್​​​ ಡೆಲಿವರಿ ಮಾಡಲೆಂದು ಹೇಮಂತ್ ನಾಯಕ್ ಬಂದಿದ್ದನು. ಈ ವೇಳೆ ಹೇಮಂತ್​ ದತ್ತ ನನ್ನ ಬಳಿ ಹೆಚ್ಚಿನ ಹಣ ಇಲ್ಲ ಎಂದು ಹೇಳಿದ್ದು, ಹಾಗೇ ಐಫೋನ್ ಬಾಕ್ಸ್​​​​ ಓಪನ್​ ಮಾಡಲು ಹೇಳಿದ್ದಾನೆ. ಆಗ ಹೇಮಂತ್​ ನಾಯಕ್​ ಹಣ ನೀಡದೆ ಬಾಕ್ಸ್ ಓಪನ್ ಮಾಡಲ್ಲ ಎಂದಿದ್ದಾನೆ.

ಇದರಿಂದ ಕೋಪಗೊಂಡಿದ್ದ ಆರೋಪಿ ಹೇಮಂತ್​ ದತ್ತ, ಹೇಮಂತ್​ ನಾಯಕನನ್ನು ಮನೆ ಒಳಗೆ ಕರೆಸಿ ಕೂಡಿಸಿದ್ದಾನೆ. ನಂತರ ನನ್ನ ಸ್ನೇಹಿತ ಹಣ ತರುತ್ತಿದ್ದಾನೆ ಸ್ವಲ್ಪ ಹೊತ್ತು ಕಾಯುವಂತೆ ಹೇಳಿದ್ದಾನೆ. ಈ ವೇಳೆ ಹೇಮಂತ್ ನಾಯಕ್ ಮೊಬೈಲ್​​ ನೋಡುತ್ತಾ ಕುಳಿತಿದ್ದನು. ಆಗ ಹೇಮಂತ್​ ದತ್ತ ಹಿಂದಿನಿಂದ ಬಂದು ಚಾಕುವಿನಿಂದ ಇರಿದು ಹೇಮಂತ್​ ನಾಯಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಸುತ್ತಿ 4 ದಿನ ಮನೆಯಲ್ಲಿಟ್ಟಿದ್ದನು.

ಬಳಿಕ ಫೆಬ್ರವರಿ 10 ರ ರಾತ್ರಿ ಬೈಕ್​ನಲ್ಲಿ ಶವ ಹೊತ್ತೊಯ್ದು ಅರಸೀಕೆರೆ ನಗರದ ಅಂಚೆಕೊಪ್ಪಲು ಸಮೀಪದ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟಿರುವ ಆರೋಪ ಕೇಳಿಬಂದಿದೆ. ನಂತರ ಈ ವಿಷಯ ಪೊಲೀಸರಿಗೆ ತಿಳಿದಿದ್ದು, ಅರಸೀಕೆರೆ ನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ