AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹೆಂಡತಿ ಎದುರು ಗಂಡನಿಗೆ ಆವಾಜ್​; ರೌಡಿಶೀಟರ್​ನಿಂದ ಬಾಲಕನ ಕೊಲೆ

ಕ್ಷುಲ್ಲಕ ಕಾರಣಕ್ಕೆ ರೌಡಿಶೀಟರ್​ನಿಂದ ಬಾಲಕ ವಿನಯ್ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್​ನಲ್ಲಿ ಗುಂಡ್ಯ ಮೀಸಲು ಅರಣ್ಯದಲ್ಲಿ ವಿನಯ್ ಶವ ಪತ್ತೆಯಾಗಿದೆ.

Crime News: ಹೆಂಡತಿ ಎದುರು ಗಂಡನಿಗೆ ಆವಾಜ್​; ರೌಡಿಶೀಟರ್​ನಿಂದ ಬಾಲಕನ ಕೊಲೆ
ಸಾಂಕೇತಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Jul 12, 2022 | 9:31 PM

Share

ಹಾಸನ: ಕ್ಷುಲ್ಲಕ ಕಾರಣಕ್ಕೆ ರೌಡಿಶೀಟರ್​ನಿಂದ ಬಾಲಕ ವಿನಯ್ ಕೊಲೆಯಾದ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ (Hassan) ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಶಿರಾಡಿಘಾಟ್​ನಲ್ಲಿ (Shiradi Ghat) ಗುಂಡ್ಯ ಮೀಸಲು ಅರಣ್ಯದಲ್ಲಿ ವಿನಯ್ ಶವ ಪತ್ತೆಯಾಗಿದೆ. ಹಾಸನದಲ್ಲಿ ಬಾಲಕನನ್ನು ಕೊಲೆಗೈದು 80 ಕಿ.ಮೀ. ದೂರ ಸಾಗಿಸಿ ಶಿರಾಡಿಘಾಟ್​ನ ಜಲಪಾತದಲ್ಲಿ ವಿನಯ್​ ಶವ ಹಂತಕರು ಎಸೆದಿದ್ದರು. ಈ ಸಂಬಂಧ ನಿನ್ನೆಯಿಂದ (ಜುಲೈ 11) ಶೋಧ ನಡೆಸುತ್ತಿದ್ದು, ಇಂದು ಪೊಲೀಸರಿಗೆ ವಿನಯ್ ಶವ ಸಿಕ್ಕಿದೆ.

ಶವ ಪತ್ತೆಯಾದ ಸ್ಥಳಕ್ಕೆ ಎಸ್​ಪಿ ಹರಿರಾಂ ಶಂಕರ್​ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಪಬ್​ನ ​ಲಿಫ್ಟ್​ನಲ್ಲಿ ಕೆಳಗಿಳಿಯುವ ವಿಚಾರಕ್ಕೆ ರೌಡಿಶೀಟರ್ ರಾಕೇಶ್, ವಿನಯ್​ ನಡುವೆ ಜಗಳವಾಗಿತ್ತು. ಹೆಂಡತಿ ಎದುರೇ ವಿನಯ್  (17)  ಆವಾಜ್​ ಹಾಕಿದನೆಂದು ಮರುದಿನ ಹಲ್ಲೆ ನಡೆಸಿ ಕೊಲೆಗೈದು ಎಸೆದಿದ್ದರು. ವಿನಯ್​ ಕಾಣೆಯಾಗಿದ್ದಾನೆಂದು ವಿನಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಪಬ್​ನಲ್ಲಿ ಗಲಾಟೆ ಮಾಡಿದ್ದವರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು. ರೌಡಿಶೀಟರ್​ ರಾಕೇಶ್ ಸೇರಿ 8 ಆರೋಪಿಗಳು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ವಿನಯ್ ಕೊಲೆ ಬಗ್ಗೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ದಿನಸಿ  ಖರೀದಿಸಲು ಬಂದು ಅಂಗಡಿಯಲ್ಲಿದ್ದ ಮಹಿಳೆಯ  ಮಾಂಗಲ್ಯಸರ ಕದ್ದ ದುಷ್ಕರ್ಮಿಗಳು

ತುಮಕೂರು: ದಿನಸಿ ಖರೀದಿಸುವ ಸೋಗಿನಲ್ಲಿ ಬಂದು ಮೂವರು ಅಂಗಡಿಯಲ್ಲಿದ್ದ ರೂಪಾ ಎಂಬುವರ ಮುಖಕ್ಕೆ ಖಾರದಪುಡಿ ಎರಚಿ ಮಾಂಗಲ್ಯಸರ ಕದ್ದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ  ಕಟ್ಟೆಗೊಲ್ಲಳ್ಳಿ ಗ್ರಾಮದಲ್ಲಿ ನಡೆದಿದೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಾಜಿ ಶಾಸಕನ ಮನೆ ಹಿಂದಿನ ಖಾಲಿ ಸೈಟ್​ನಲ್ಲಿ ಗಾಂಜಾ ಗಿಡ ಪತ್ತೆ

ಬೆಂಗಳೂರು: ಬೆಂಗಳೂರಿನ ಆರ್.ಟಿ.ನಗರದ ಖಾಲಿ ನಿವೇಶನದಲ್ಲಿ ಗಾಂಜಾ ಗಿಡ ಪತ್ತೆಯಾಗಿದೆ. ಕಿಡಿಗೇಡಿಗಳು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮನೆಯ ಹಿಂಭಾಗ  ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದರು. ಈ ಬಗ್ಗೆ ಬೇಳೂರು ಗೋಪಾಲಕೃಷ್ಣ  ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಆರ್.ಟಿ.ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಂಜಾ ಗಿಡಗಳನ್ನು ತೆರವುಗೊಳಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಖಾಲಿ ನಿವೇಶನದ ಮಾಲೀಕರ ಮಾಹಿತಿ ಕಲೆಹಾಕುತ್ತಿದ್ದಾರೆ. ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾವೇರಿ ನದಿಗೆ‌ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಮಂಡ್ಯ: ಕಾವೇರಿ ನದಿಗೆ‌ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂ ಬಳಿ ನಡೆದಿದೆ. ಬಿಕಾಂ ವಿದ್ಯಾರ್ಥಿ ಸೃಜನ್ (20) ಮೃತ ಯುವಕ. ಮೈಸೂರಿನ ಪಡುವಾರಹಳ್ಳಿ ಬಡಾವಣೆ ಸೃಜನ್ ಸ್ನೇಹಿತರೊಂದಿಗೆ KRS ಜಲಾಶಯ ಹಾಗೂ ಕಾವೇರಿ ನದಿ ನೋಡಲು ಬಂದಿದ್ದನು.

ಭೋರ್ಗರೆಯುತ್ತಿರುವ ಕಾವೇರಿ ನದಿ ನೋಡುತ್ತಿದ್ದಂತೆ ಸೃಜನ್ ನದಿಗೆ ಹಾರಿದ್ದಾನೆ. ಸೃಜನ್ ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ. ಬಳಿಕ ಸ್ನೇಹಿತರು ಸೃಜನ್ ಪೋಷಕರಿಗೆ ವಿಷಯ ಮುಟ್ಟಿಸಿದ್ದಾರೆ.  KRS ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಸವಾರಿ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬೆಂಗಳೂರು: ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಸವಾರಿ ಮಾಡುತ್ತಿದ್ದ  ವ್ಯಕ್ತಿಯನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಸಯ್ಯದ್ ಅಬ್ತಾಬ್ ಬಂಧಿತ ಆರೋಪಿ. ಬೈಕ್ EMI ಪಾವತಿಸದೆ, ಟ್ರಾಫಿಕ್ ಉಲ್ಲಂಘನೆಯ ದಂಡದಿಂದ ತಪ್ಪಿಸಿಕೊಳ್ಳಲು ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಓಡಾಟ ಮಾಡುತ್ತಿದ್ದನು.

ಘಟನೆ ಸಂಬಂಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನ್ಯಾಯಾಲಯದಿಂದ ಆರೋಪಿಯನ್ನ 14 ದಿನ ಪೊಲೀಸ್ ಕಸ್ಟಡಿಗೆ ಪಡೆದು ಪೊಲೀಸರು ತನಿಖೆ ಮುಂದುವರೆಸುತ್ತಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ