AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನೇ ಸಲಹೆ ಕೊಟ್ಟು ಒಡಹುಟ್ಟಿದ ಅಕ್ಕನಿಗೆ ಮೋಸ ಮಾಡಿದ ತಮ್ಮ

ಹಣಕ್ಕೆ ಸತ್ತ ಹೆಣವೂ ಬಾಯಿ ತೆರೆಯುತ್ತೆ ಎನ್ನುವ ಗಾದೆಯಂತೆ, ಸ್ವತಃ ತಮ್ಮನೇ ತನ್ನ ಒಡಹುಟ್ಟಿದ ಅಕ್ಕನಿಗೆ ಸಲಹೆ ಕೊಟ್ಟು ಆಕೆಯ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ್ದಾನೆ. ಮಗಳ ವಿದ್ಯಾಭ್ಯಾಸಕ್ಕೆಂದು ಬಾಂಕ್​ ನಲ್ಲಿ ಡಿಪಾಸಿಟ್ ಇಡುವ ಸಲಹೆ ನೀಡಿ ಬಳಿಕ ಹಣವನ್ನು ಎಗರಿಸಿದ್ದಾನೆ. ಈ ಸಂಬಂಧ ಇದೀಗ ಅಕ್ಕ, ತನ್ನ ತಮ್ಮನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ತಾನೇ ಸಲಹೆ ಕೊಟ್ಟು ಒಡಹುಟ್ಟಿದ ಅಕ್ಕನಿಗೆ ಮೋಸ ಮಾಡಿದ ತಮ್ಮ
Nelamangala Police Sation
TV9 Web
| Edited By: |

Updated on: Jul 15, 2025 | 5:40 PM

Share

ಬೆಂಗಳೂರು, (ಜುಲೈ 15): ಅಕ್ಕನಿಗೆ ಸಹೋರದನೇ ಸಲಹೆಕೊಟ್ಟು ಬಳಿಕ ಆಕೆಗೆ ಮೋಸ ಮಾಡಿರುವ ಘಟನೆ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿಪಾಸಿಟ್ ಮಾಡುವಂತೆ ಅಕ್ಕ ಕೊಟ್ಟಿದ್ದ ಹಣವನ್ನು ಸಹೋದರ ಬಳಸಿಕೊಂಡು ಮೋಸ ಮಾಡಿದ್ದಾನೆ. ಹೌದು..ಶ್ರೀಧರ್ ಎನ್ನುವಾತ ಹಣ ಪಡೆದು ಬ್ಯಾಂಕ್ ನಲ್ಲಿ ಡಿಪಾಸಿಟ್ ಇಡದೇ ಸ್ವಂತಕ್ಕೆ ಬಳಕೆ ಮಾಡಿಕೊಂಡಿರುವುದಾಗಿ ಅಕ್ಕ ಶೋಭಾ ಆರೋಪ ಮಾಡಿದ್ದು, ಈ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ನೆಲಮಂಗಲದ ನಿವಾಸಿಯಾಗಿರುವ ಶೋಭಾ,ತನ್ನ ಮಗಳ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಹಣ ಕೂಡಿಟ್ಟಿದ್ದಳು. ಈ ಹಣವನ್ನು ಬ್ಯಾಂಕಿನಲ್ಲಿ ಡಿಪಾಸಿಟ್ ಮಾಡುವಂತೆ ಅಕ್ಕನಿಗೆ ಶ್ರೀಧರ್ ಸಲಹೆ ನೀಡಿದ್ದ. ಹಣ ಬ್ಯಾಂಕ್ ನಲ್ಲಿ ಡಿಪಾಸಿಟ್ ಮಾಡು ಮುಂದಿನ ದಿನಗಳಲ್ಲಿ ಬೇಕಾಗುತ್ತದೆ ಎಂದು ಹೇಳಿದ್ದ. ಇದನ್ನು ನಂಬಿದ್ದ ಅಕ್ಕ ಶೋಭಾ, ಹೇಗೋ ನೀನೇ ಬ್ಯಾಂಕ್​​ ಕ್ಯಾಷಿಯರ್ ಅಲ್ವಾ ಹೋಗಿ ಡಿಪಾಸಿಟ್ ಮಾಡಿಕೋ ಎಂದು 8 ಲಕ್ಷ ರೂ. ಹಣ ನೀಡಿದ್ದಾಳೆ. ಆದ್ರೆ, ಶ್ರೀಧರ್, ಹಣ ಡಿಪಾಸಿಟ್ ಮಾಡದೇ ಬಳಸಿಕೊಂಡಿದ್ದಾನೆ.

ಹೀಗೆ ಶೋಭಾ ಒಂದು ದಿನ ಬ್ಯಾಂಕ್​ ಗೆ ಹೋಗಿ ವಿಚಾರಿಸಿದಾಗ ಸಹೋದರ ಹಣ ಡಿಪಾಸಿಟ್ ಮಾಡದೇ 8 ಲಕ್ಷ ರೂ ಹಣ ಬಳಸಿಕೊಂಡು ವಂಚನೆ ಮಾಡುವುದು ಬೆಳಕಿಗೆ ಬಂದಿದೆ. ಬಳಿಕ ಶೋಭಾ ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ್ದಾಳೆ. ಆದ್ರೆ ಶ್ರೀಧರ್ ಹಣ ಕೊಡದಿದ್ದರಿಂದ ಶೋಭಾ, ನೆಲಮಂಗಲ ಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ