AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನೇ ಸಲಹೆ ಕೊಟ್ಟು ಒಡಹುಟ್ಟಿದ ಅಕ್ಕನಿಗೆ ಮೋಸ ಮಾಡಿದ ತಮ್ಮ

ಹಣಕ್ಕೆ ಸತ್ತ ಹೆಣವೂ ಬಾಯಿ ತೆರೆಯುತ್ತೆ ಎನ್ನುವ ಗಾದೆಯಂತೆ, ಸ್ವತಃ ತಮ್ಮನೇ ತನ್ನ ಒಡಹುಟ್ಟಿದ ಅಕ್ಕನಿಗೆ ಸಲಹೆ ಕೊಟ್ಟು ಆಕೆಯ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ್ದಾನೆ. ಮಗಳ ವಿದ್ಯಾಭ್ಯಾಸಕ್ಕೆಂದು ಬಾಂಕ್​ ನಲ್ಲಿ ಡಿಪಾಸಿಟ್ ಇಡುವ ಸಲಹೆ ನೀಡಿ ಬಳಿಕ ಹಣವನ್ನು ಎಗರಿಸಿದ್ದಾನೆ. ಈ ಸಂಬಂಧ ಇದೀಗ ಅಕ್ಕ, ತನ್ನ ತಮ್ಮನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ತಾನೇ ಸಲಹೆ ಕೊಟ್ಟು ಒಡಹುಟ್ಟಿದ ಅಕ್ಕನಿಗೆ ಮೋಸ ಮಾಡಿದ ತಮ್ಮ
Nelamangala Police Sation
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jul 15, 2025 | 5:40 PM

Share

ಬೆಂಗಳೂರು, (ಜುಲೈ 15): ಅಕ್ಕನಿಗೆ ಸಹೋರದನೇ ಸಲಹೆಕೊಟ್ಟು ಬಳಿಕ ಆಕೆಗೆ ಮೋಸ ಮಾಡಿರುವ ಘಟನೆ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿಪಾಸಿಟ್ ಮಾಡುವಂತೆ ಅಕ್ಕ ಕೊಟ್ಟಿದ್ದ ಹಣವನ್ನು ಸಹೋದರ ಬಳಸಿಕೊಂಡು ಮೋಸ ಮಾಡಿದ್ದಾನೆ. ಹೌದು..ಶ್ರೀಧರ್ ಎನ್ನುವಾತ ಹಣ ಪಡೆದು ಬ್ಯಾಂಕ್ ನಲ್ಲಿ ಡಿಪಾಸಿಟ್ ಇಡದೇ ಸ್ವಂತಕ್ಕೆ ಬಳಕೆ ಮಾಡಿಕೊಂಡಿರುವುದಾಗಿ ಅಕ್ಕ ಶೋಭಾ ಆರೋಪ ಮಾಡಿದ್ದು, ಈ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ನೆಲಮಂಗಲದ ನಿವಾಸಿಯಾಗಿರುವ ಶೋಭಾ,ತನ್ನ ಮಗಳ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಹಣ ಕೂಡಿಟ್ಟಿದ್ದಳು. ಈ ಹಣವನ್ನು ಬ್ಯಾಂಕಿನಲ್ಲಿ ಡಿಪಾಸಿಟ್ ಮಾಡುವಂತೆ ಅಕ್ಕನಿಗೆ ಶ್ರೀಧರ್ ಸಲಹೆ ನೀಡಿದ್ದ. ಹಣ ಬ್ಯಾಂಕ್ ನಲ್ಲಿ ಡಿಪಾಸಿಟ್ ಮಾಡು ಮುಂದಿನ ದಿನಗಳಲ್ಲಿ ಬೇಕಾಗುತ್ತದೆ ಎಂದು ಹೇಳಿದ್ದ. ಇದನ್ನು ನಂಬಿದ್ದ ಅಕ್ಕ ಶೋಭಾ, ಹೇಗೋ ನೀನೇ ಬ್ಯಾಂಕ್​​ ಕ್ಯಾಷಿಯರ್ ಅಲ್ವಾ ಹೋಗಿ ಡಿಪಾಸಿಟ್ ಮಾಡಿಕೋ ಎಂದು 8 ಲಕ್ಷ ರೂ. ಹಣ ನೀಡಿದ್ದಾಳೆ. ಆದ್ರೆ, ಶ್ರೀಧರ್, ಹಣ ಡಿಪಾಸಿಟ್ ಮಾಡದೇ ಬಳಸಿಕೊಂಡಿದ್ದಾನೆ.

ಹೀಗೆ ಶೋಭಾ ಒಂದು ದಿನ ಬ್ಯಾಂಕ್​ ಗೆ ಹೋಗಿ ವಿಚಾರಿಸಿದಾಗ ಸಹೋದರ ಹಣ ಡಿಪಾಸಿಟ್ ಮಾಡದೇ 8 ಲಕ್ಷ ರೂ ಹಣ ಬಳಸಿಕೊಂಡು ವಂಚನೆ ಮಾಡುವುದು ಬೆಳಕಿಗೆ ಬಂದಿದೆ. ಬಳಿಕ ಶೋಭಾ ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ್ದಾಳೆ. ಆದ್ರೆ ಶ್ರೀಧರ್ ಹಣ ಕೊಡದಿದ್ದರಿಂದ ಶೋಭಾ, ನೆಲಮಂಗಲ ಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ