AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನೇ ಸಲಹೆ ಕೊಟ್ಟು ಒಡಹುಟ್ಟಿದ ಅಕ್ಕನಿಗೆ ಮೋಸ ಮಾಡಿದ ತಮ್ಮ

ಹಣಕ್ಕೆ ಸತ್ತ ಹೆಣವೂ ಬಾಯಿ ತೆರೆಯುತ್ತೆ ಎನ್ನುವ ಗಾದೆಯಂತೆ, ಸ್ವತಃ ತಮ್ಮನೇ ತನ್ನ ಒಡಹುಟ್ಟಿದ ಅಕ್ಕನಿಗೆ ಸಲಹೆ ಕೊಟ್ಟು ಆಕೆಯ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ್ದಾನೆ. ಮಗಳ ವಿದ್ಯಾಭ್ಯಾಸಕ್ಕೆಂದು ಬಾಂಕ್​ ನಲ್ಲಿ ಡಿಪಾಸಿಟ್ ಇಡುವ ಸಲಹೆ ನೀಡಿ ಬಳಿಕ ಹಣವನ್ನು ಎಗರಿಸಿದ್ದಾನೆ. ಈ ಸಂಬಂಧ ಇದೀಗ ಅಕ್ಕ, ತನ್ನ ತಮ್ಮನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ತಾನೇ ಸಲಹೆ ಕೊಟ್ಟು ಒಡಹುಟ್ಟಿದ ಅಕ್ಕನಿಗೆ ಮೋಸ ಮಾಡಿದ ತಮ್ಮ
Nelamangala Police Sation
TV9 Web
| Edited By: |

Updated on: Jul 15, 2025 | 5:40 PM

Share

ಬೆಂಗಳೂರು, (ಜುಲೈ 15): ಅಕ್ಕನಿಗೆ ಸಹೋರದನೇ ಸಲಹೆಕೊಟ್ಟು ಬಳಿಕ ಆಕೆಗೆ ಮೋಸ ಮಾಡಿರುವ ಘಟನೆ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿಪಾಸಿಟ್ ಮಾಡುವಂತೆ ಅಕ್ಕ ಕೊಟ್ಟಿದ್ದ ಹಣವನ್ನು ಸಹೋದರ ಬಳಸಿಕೊಂಡು ಮೋಸ ಮಾಡಿದ್ದಾನೆ. ಹೌದು..ಶ್ರೀಧರ್ ಎನ್ನುವಾತ ಹಣ ಪಡೆದು ಬ್ಯಾಂಕ್ ನಲ್ಲಿ ಡಿಪಾಸಿಟ್ ಇಡದೇ ಸ್ವಂತಕ್ಕೆ ಬಳಕೆ ಮಾಡಿಕೊಂಡಿರುವುದಾಗಿ ಅಕ್ಕ ಶೋಭಾ ಆರೋಪ ಮಾಡಿದ್ದು, ಈ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ನೆಲಮಂಗಲದ ನಿವಾಸಿಯಾಗಿರುವ ಶೋಭಾ,ತನ್ನ ಮಗಳ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಹಣ ಕೂಡಿಟ್ಟಿದ್ದಳು. ಈ ಹಣವನ್ನು ಬ್ಯಾಂಕಿನಲ್ಲಿ ಡಿಪಾಸಿಟ್ ಮಾಡುವಂತೆ ಅಕ್ಕನಿಗೆ ಶ್ರೀಧರ್ ಸಲಹೆ ನೀಡಿದ್ದ. ಹಣ ಬ್ಯಾಂಕ್ ನಲ್ಲಿ ಡಿಪಾಸಿಟ್ ಮಾಡು ಮುಂದಿನ ದಿನಗಳಲ್ಲಿ ಬೇಕಾಗುತ್ತದೆ ಎಂದು ಹೇಳಿದ್ದ. ಇದನ್ನು ನಂಬಿದ್ದ ಅಕ್ಕ ಶೋಭಾ, ಹೇಗೋ ನೀನೇ ಬ್ಯಾಂಕ್​​ ಕ್ಯಾಷಿಯರ್ ಅಲ್ವಾ ಹೋಗಿ ಡಿಪಾಸಿಟ್ ಮಾಡಿಕೋ ಎಂದು 8 ಲಕ್ಷ ರೂ. ಹಣ ನೀಡಿದ್ದಾಳೆ. ಆದ್ರೆ, ಶ್ರೀಧರ್, ಹಣ ಡಿಪಾಸಿಟ್ ಮಾಡದೇ ಬಳಸಿಕೊಂಡಿದ್ದಾನೆ.

ಹೀಗೆ ಶೋಭಾ ಒಂದು ದಿನ ಬ್ಯಾಂಕ್​ ಗೆ ಹೋಗಿ ವಿಚಾರಿಸಿದಾಗ ಸಹೋದರ ಹಣ ಡಿಪಾಸಿಟ್ ಮಾಡದೇ 8 ಲಕ್ಷ ರೂ ಹಣ ಬಳಸಿಕೊಂಡು ವಂಚನೆ ಮಾಡುವುದು ಬೆಳಕಿಗೆ ಬಂದಿದೆ. ಬಳಿಕ ಶೋಭಾ ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ್ದಾಳೆ. ಆದ್ರೆ ಶ್ರೀಧರ್ ಹಣ ಕೊಡದಿದ್ದರಿಂದ ಶೋಭಾ, ನೆಲಮಂಗಲ ಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ