AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟ ಮಾಡಿ ಮಲಗಿದ್ದ ವ್ಯಕ್ತಿಯ ಭೀಕರ ಕೊಲೆ ಪ್ರಕರಣ; ಒಡೆದ ಬಳೆ ಚೂರಿನಿಂದ ಆರೋಪಿ ಬಂಧನ

ಕೋಟೆನಾಡು ಚಿತ್ರದುರ್ಗದಲ್ಲಿ ನಡುರಾತ್ರಿ ನಡೆದಿದ್ದ ರಣಭೀಕರ ಕೊಲೆ, ಭಾರೀ ಆತಂಕ ಸೃಷ್ಠಿಸಿತ್ತು. ಸದ್ಯ ಪೊಲೀಸರು ಪ್ರಕರಣವನ್ನು ಬೇಧಿಸಿದ್ದಾರೆ. ಆದ್ರೆ, ಕೊಲೆ ಆರೋಪಿ ಯಾರೆಂದು ತಿಳಿದಾಗ ಖಾಕಿ ಪಡೆಯೇ ಶಾಕ್​ಗೆ ಒಳಗಾಗಿತ್ತು. ಈ ಕುರಿತು ವರದಿ ಇಲ್ಲಿದೆ.

ಊಟ ಮಾಡಿ ಮಲಗಿದ್ದ ವ್ಯಕ್ತಿಯ ಭೀಕರ ಕೊಲೆ ಪ್ರಕರಣ; ಒಡೆದ ಬಳೆ ಚೂರಿನಿಂದ ಆರೋಪಿ ಬಂಧನ
ಮೃತ ವ್ಯಕ್ತಿ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jun 06, 2024 | 6:45 PM

Share

ಚಿತ್ರದುರ್ಗ, ಜೂ.06: ಹೊಳಲ್ಕೆರೆ ತಾಲೂಕಿನ ಕಂಬದ ದೇವರಹಟ್ಟಿ ಗ್ರಾಮದಲ್ಲಿ ನಿನ್ನೆ(ಜೂ.05) ಭೀಕರ ಕೊಲೆ ನಡೆದಿತ್ತು. ಎಂದಿನಂತೆ ರಾತ್ರಿ ಊಟದ ಬಳಿಕ ಮನೆ ಅಂಗಳದಲ್ಲಿ ಮಲಗಿದ್ದ ಕೃಷ್ಣಪ್ಪ(46). ಮದ್ಯರಾತ್ರಿ ವೇಳೆಗೆ ಮಲಗಿದ್ದಲ್ಲೇ ತಲೆ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಲಾಗಿತ್ತು. ಬಳಿಕ ಯಾರೋ ದುಷ್ಕರ್ಮಿಗಳಿಬ್ಬರು ಕೊಲೆ ಮಾಡಿ ಎಸ್ಕೇಪ್ ಅಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಒಡೆದ ಬಳೆ ಚೂರಿನಿಂದ ಆರೋಪಿ ಬಂಧನ; ಪತ್ನಿಯೇ ಪತಿಗೆ ಚಟ್ಟ ಕಟ್ಟಿದಳು

ಈ ಬಗ್ಗೆ ಮೃತನ ಸಹೋದರನಿಂದ ದೂರು ಪಡೆದ ಪೊಲೀಸರು, ತನಿಖೆ ನಡೆಸಿದಾಗ ಸತ್ಯಾಂಶ ಬಯಲಾಗಿದೆ. ಮೃತನ ಪತ್ನಿ ಕಮಲಮ್ಮ ಕಾಲು, ಕೈಗೆ ರಕ್ತದ ಕಲೆಗಳು ಕಂಡು ಬಂದಿವೆ. ತಲೆ ಮೇಲೆ ಕಲ್ಲು ಹಾಕಲು ಎತ್ತಿಕೊಂಡು ಬರುವಾಗ ಬಳೆ ಚೂರು ಬಿದ್ದಿತ್ತು. ಹೀಗಾಗಿ, ಆರೋಪಿ ಪತ್ನಿ ಕಮಲಮ್ಮಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪಾಪಿ ಪತ್ನಿ ಸತ್ಯಾಂಶ ಬಾಯಿ ಬಿಟ್ಟಿದ್ದಾಳೆ.

ಇದನ್ನೂ ಓದಿ:ರಾಮನಗರ: ಕೊಟ್ಟ ಸಾಲ ವಾಪಸ್​ ಕೇಳಿದ್ದಕ್ಕೆ ಕೊಲೆ ಮಾಡಿ ಶವ ಹೂತಿಟ್ಟ

ಕೊಲೆ ಕಾರಣವೇನು?

ಪತಿ ಕೃಷ್ಣಪ್ಪಗೆ ಅನೈತಿಕ ಸಂಬಂಧವಿತ್ತು, ದುಡಿದಿಟ್ಟಿದ್ದ ಹತ್ತು ಲಕ್ಷ ಹಣವನ್ನ ತನ್ನ ದುಶ್ಚಟಗಳಿಗೆ ಕಳೆದಿದ್ದನು. ಜೊತೆಗೆ ಕುಡಿದು ಬಂದು ಕುಟುಂಬಸ್ಥರಿಗೆ ಚಿತ್ರಹಿಂಸೆ ಕೊಡುತ್ತಿದ್ದನು. ಓರ್ವ ಪುತ್ರ, ಓರ್ವ ಪುತ್ರಿ ಇದ್ದು, ಮಗಳು ಅಪ್ಪನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಳು. ಹೀಗಾಗಿ, ನಾನೇ ಪತಿಯನ್ನು ಕೊಲೆ ಮಾಡಿದ್ದೇನೆಂದು ಆರೋಪಿ ಕಮಲಮ್ಮ ಒಪ್ಪಿಕೊಂಡಿದ್ದಾಳೆ‌.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ಕಂಬದ ದೇವರಹಟ್ಟಿಯಲ್ಲಿ ನಡೆದಿದ್ದ ರಣಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಡಿವೈಎಸ್ಪಿ ದಿನಕರ್, ಇನ್ಸಪೆಕ್ಟರ್ ಸಂತೋಷ್ ನೇತೃತ್ವದ ತಂಡ ಕೊಲೆ ನಡೆದ ಕೆಲ ಹೊತ್ತಿನಲ್ಲೇ ಆರೋಪಿ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಸಾಕ್ಷ್ಯಾಧಾರ ಸಮೇತ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ