ಬಾಂಗ್ಲಾ ಗಡಿ ಮೂಲಕ ಮಾನವ ಕಳ್ಳಸಾಗಾಣಿಕೆ ಕೇಸ್: NIA ಚಾರ್ಜ್ ಶೀಟ್​ನಲ್ಲಿದೆ ಸ್ಫೋಟಕ ವಿಚಾರ

ಬಾಂಗ್ಲಾ ಗಡಿಯ ಮೂಲಕ ವಿದೇಶ ಪ್ರಜೆಗಳ ಒಳನುಸುಳುವಿಕೆ ಪ್ರಕರಣ ಸಂಬಂಧ 10ಕ್ಕೂ ಹೆಚ್ಚು ಮಂದಿ ಬಾಂಗ್ಲಾ ದೇಶಿಗರ ವಿರುದ್ಧ ಎನ್​ಐಎ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಎಂಟು ಜನ ಆರೋಪಿಗಳು‌ ಮೊದಲಿಗೆ ಬಾಂಗ್ಲಾ ಪ್ರಜೆಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದು, 22 ಜನರನ್ನು ಉದ್ಯೋಗ ಮತ್ತು ಉತ್ತಮ‌ ಜೀವನೋಪಾಯದ ಭರವಸೆ ಮೇಲೆ ಆಮಿಷವೊಡ್ಡಿ ಕಳ್ಳಸಾಗಣೆ ಮಾಡಿ ಬೆಂಗಳೂರಿನ ತ್ಯಾಜ್ಯ ವಿಂಗಡಣಾ ಗೋದಾಮಿನಲ್ಲಿ ಬಲವಂತವಾಗಿ ಇಳಿಸಿಲಾಗಿತ್ತು ಎಂಬ ವಿಚಾರ ದೋಷಾರೋಪಣ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಬಾಂಗ್ಲಾ ಗಡಿ ಮೂಲಕ ಮಾನವ ಕಳ್ಳಸಾಗಾಣಿಕೆ ಕೇಸ್: NIA ಚಾರ್ಜ್ ಶೀಟ್​ನಲ್ಲಿದೆ ಸ್ಫೋಟಕ ವಿಚಾರ
ಬಾಂಗ್ಲಾ ಗಡಿಯ ಮೂಲಕ ಮಾನವ ಕಳ್ಳಸಾಗಾಣಿಕೆ ಪ್ರಕರಣ: NIA ಚಾರ್ಜ್ ಶೀಟ್​ನಲ್ಲಿದೆ ಸ್ಫೋಟಕ ವಿಚಾರ
Follow us
| Updated By: Rakesh Nayak Manchi

Updated on: Feb 06, 2024 | 6:22 PM

ಬೆಂಗಳೂರು, ಫೆ.6: ಬೃಹತ್ ಮಾನವ ಕಳ್ಳಸಾಗಣೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಎನ್ಐಎ (NIA) ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಬಾಂಗ್ಲಾ ಗಡಿಯ ಮೂಲಕ ವಿದೇಶ ಪ್ರಜೆಗಳನ್ನು ಅಕ್ರಮವಾಗಿ ಒಳನುಸುಳಿದ್ದ 12 ಬಾಂಗ್ಲಾ ದೇಶಿಗರ ವಿರುದ್ಧ ಸಲ್ಲಿಸಿದ ದೋಷಾರೋಪಣ ಪಟ್ಟಿಯಲ್ಲಿ ಸ್ಫೋಟಕ ವಿಚಾರ ಉಲ್ಲೇಖಿಸಲಾಗಿದೆ.

ಎಂ.ಡಿ.ಪಿರ್ದೌಸ್ ಬಾಪಾರಿ, ಮುಹಮ್ಮದ್ ಒಲಿ ಉಲ್ಲಾ, ಅಮೋಲ್ ದಾಸ್, ಮಸೂಲ್ ಸರ್ದಾರ್, ಎಂಡಿ ಸೋಹಾಗ್ ಗಾಜಿ,ಸುಮನ್ ಶೇಕ್, ಎಸ್ಕೆ, ಎಂಡಿ ಬೆಳ್ಳಾಲ್, ಎಂಡಿ ಮಿರಾಝಲ್ ಇಸ್ಲಾಂ, ಜಾಕಿರ್ ಖಾನ್, ಎಂಡಿ ಬಾದಲ್ ಹೌಲಾದರ್, ಎಂಡಿ ಕಬೀರ್ ತಾಲೂಕ್ದರ್, ಘರಾಮಿ ಮೊಹಮ್ಮದ್, ಬಶೀರ್ ಹೊಸನ್, ಸೌದಿ ಜಾಕಿರ್ ಸೇರಿ 12 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಆರೋಪಿಗಳು ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶ ಮಾಡಿದ್ದರು. ಬಂಗಾಳದ ಬೆನಾಪೋಲ್ ಮತ್ತು ಜಶೋರ್​ನಲ್ಲಿರುವ ಇಂಡೋ-ಬಾಂಗ್ಲಾ ಗಡಿ ಬಿಂದುಗಳು, ತ್ರಿಪುರಾ ಬಳಿಯ ಅಖೌರಾ ಮೂಲಕ ಗಡಿಯ ಎರಡು ಬದಿ ಕಾರ್ಯನಿರ್ವಹಿಸುವ ಟೌಟ್​ಗಳ ಸಹಾಯದಿಂದ ಕಳ್ಳಸಾಗಣೆ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಬಾಗಲಕೋಟೆಗೆ ಬಾಂಗ್ಲಾ ನುಸುಳುಕೋರರು ಪ್ರವೇಶ ಮಾಡ್ತಿದ್ದಾರೆ -ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ

ಎಂಟು ಜನ ಆರೋಪಿಗಳು‌ ಮೊದಲಿಗೆ ಬಾಂಗ್ಲಾ ಪ್ರಜೆಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದರು. 22 ಜನರನ್ನು ಉದ್ಯೋಗ ಮತ್ತು ಉತ್ತಮ‌ ಜೀವನೋಪಾಯದ ಭರವಸೆ ಮೇಲೆ ಆಮಿಷವೊಡ್ಡಿ ಕಳ್ಳಸಾಗಣೆ ಮಾಡಿ ಬೆಂಗಳೂರಿನ ತ್ಯಾಜ್ಯ ವಿಂಗಡಣಾ ಗೋದಾಮಿನಲ್ಲಿ ಬಲವಂತವಾಗಿ ಇಳಿಸಿಲಾಗಿತ್ತು ಎನ್ನುವ ಸ್ಫೋಟಕ ವಿಚಾರ ಬಯಲಿಗೆ ಬಂದಿದೆ.

ವಿವಿಧ ಶೆಡ್​ಗಳಲ್ಲಿ ಅವರನ್ನು ಬಂಧಿಸಿ ಅಲ್ಪವೇತನಕ್ಕಾಗಿ ಬಲವಂತದಿಂದ ದುಡಿಸಿಕೊಳ್ಳಲಾಗಿತ್ತು. ಅಲ್ಲದೆ, ಪ್ರತಿಭಟಿಸಿದರೆ ಅಕ್ರಮ ವಲಸಿಗರೆಂದು ಜೈಲಿಗೆ ಹಾಕಿಸುವುದಾಗಿ ಕಳ್ಳಸಾಗಣೆದಾರರು ಹೆಸರಿಸಿರುವುದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

12 ಆರೋಪಿಗಳ ಬಳಿ 61 ಆಧಾರ್ ಕಾರ್ಡ್​ಗಳು ಮತ್ತು ಇತರೆ ಭಾರತೀಯ ಗುರುತಿನ ದಾಖಲೆಗಳು ಪತ್ತೆಯಾಗಿದ್ದು, ಎನ್​ಐಎ ವಶಕ್ಕೆ ಪಡೆದುಕೊಂಡಿತ್ತು. ಸದ್ಯ, ಎನ್​ಐಎ ಭಾರತೀಯ ದಾಖಲೆಗಳ ಸಂಗ್ರಹದ ತನಿಖೆ ಮುಖದುವರೆಸಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ