AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಗಡಿ ಮೂಲಕ ಮಾನವ ಕಳ್ಳಸಾಗಾಣಿಕೆ ಕೇಸ್: NIA ಚಾರ್ಜ್ ಶೀಟ್​ನಲ್ಲಿದೆ ಸ್ಫೋಟಕ ವಿಚಾರ

ಬಾಂಗ್ಲಾ ಗಡಿಯ ಮೂಲಕ ವಿದೇಶ ಪ್ರಜೆಗಳ ಒಳನುಸುಳುವಿಕೆ ಪ್ರಕರಣ ಸಂಬಂಧ 10ಕ್ಕೂ ಹೆಚ್ಚು ಮಂದಿ ಬಾಂಗ್ಲಾ ದೇಶಿಗರ ವಿರುದ್ಧ ಎನ್​ಐಎ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಎಂಟು ಜನ ಆರೋಪಿಗಳು‌ ಮೊದಲಿಗೆ ಬಾಂಗ್ಲಾ ಪ್ರಜೆಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದು, 22 ಜನರನ್ನು ಉದ್ಯೋಗ ಮತ್ತು ಉತ್ತಮ‌ ಜೀವನೋಪಾಯದ ಭರವಸೆ ಮೇಲೆ ಆಮಿಷವೊಡ್ಡಿ ಕಳ್ಳಸಾಗಣೆ ಮಾಡಿ ಬೆಂಗಳೂರಿನ ತ್ಯಾಜ್ಯ ವಿಂಗಡಣಾ ಗೋದಾಮಿನಲ್ಲಿ ಬಲವಂತವಾಗಿ ಇಳಿಸಿಲಾಗಿತ್ತು ಎಂಬ ವಿಚಾರ ದೋಷಾರೋಪಣ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಬಾಂಗ್ಲಾ ಗಡಿ ಮೂಲಕ ಮಾನವ ಕಳ್ಳಸಾಗಾಣಿಕೆ ಕೇಸ್: NIA ಚಾರ್ಜ್ ಶೀಟ್​ನಲ್ಲಿದೆ ಸ್ಫೋಟಕ ವಿಚಾರ
ಬಾಂಗ್ಲಾ ಗಡಿಯ ಮೂಲಕ ಮಾನವ ಕಳ್ಳಸಾಗಾಣಿಕೆ ಪ್ರಕರಣ: NIA ಚಾರ್ಜ್ ಶೀಟ್​ನಲ್ಲಿದೆ ಸ್ಫೋಟಕ ವಿಚಾರ
Shivaprasad B
| Edited By: |

Updated on: Feb 06, 2024 | 6:22 PM

Share

ಬೆಂಗಳೂರು, ಫೆ.6: ಬೃಹತ್ ಮಾನವ ಕಳ್ಳಸಾಗಣೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಎನ್ಐಎ (NIA) ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಬಾಂಗ್ಲಾ ಗಡಿಯ ಮೂಲಕ ವಿದೇಶ ಪ್ರಜೆಗಳನ್ನು ಅಕ್ರಮವಾಗಿ ಒಳನುಸುಳಿದ್ದ 12 ಬಾಂಗ್ಲಾ ದೇಶಿಗರ ವಿರುದ್ಧ ಸಲ್ಲಿಸಿದ ದೋಷಾರೋಪಣ ಪಟ್ಟಿಯಲ್ಲಿ ಸ್ಫೋಟಕ ವಿಚಾರ ಉಲ್ಲೇಖಿಸಲಾಗಿದೆ.

ಎಂ.ಡಿ.ಪಿರ್ದೌಸ್ ಬಾಪಾರಿ, ಮುಹಮ್ಮದ್ ಒಲಿ ಉಲ್ಲಾ, ಅಮೋಲ್ ದಾಸ್, ಮಸೂಲ್ ಸರ್ದಾರ್, ಎಂಡಿ ಸೋಹಾಗ್ ಗಾಜಿ,ಸುಮನ್ ಶೇಕ್, ಎಸ್ಕೆ, ಎಂಡಿ ಬೆಳ್ಳಾಲ್, ಎಂಡಿ ಮಿರಾಝಲ್ ಇಸ್ಲಾಂ, ಜಾಕಿರ್ ಖಾನ್, ಎಂಡಿ ಬಾದಲ್ ಹೌಲಾದರ್, ಎಂಡಿ ಕಬೀರ್ ತಾಲೂಕ್ದರ್, ಘರಾಮಿ ಮೊಹಮ್ಮದ್, ಬಶೀರ್ ಹೊಸನ್, ಸೌದಿ ಜಾಕಿರ್ ಸೇರಿ 12 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಆರೋಪಿಗಳು ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶ ಮಾಡಿದ್ದರು. ಬಂಗಾಳದ ಬೆನಾಪೋಲ್ ಮತ್ತು ಜಶೋರ್​ನಲ್ಲಿರುವ ಇಂಡೋ-ಬಾಂಗ್ಲಾ ಗಡಿ ಬಿಂದುಗಳು, ತ್ರಿಪುರಾ ಬಳಿಯ ಅಖೌರಾ ಮೂಲಕ ಗಡಿಯ ಎರಡು ಬದಿ ಕಾರ್ಯನಿರ್ವಹಿಸುವ ಟೌಟ್​ಗಳ ಸಹಾಯದಿಂದ ಕಳ್ಳಸಾಗಣೆ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಬಾಗಲಕೋಟೆಗೆ ಬಾಂಗ್ಲಾ ನುಸುಳುಕೋರರು ಪ್ರವೇಶ ಮಾಡ್ತಿದ್ದಾರೆ -ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ

ಎಂಟು ಜನ ಆರೋಪಿಗಳು‌ ಮೊದಲಿಗೆ ಬಾಂಗ್ಲಾ ಪ್ರಜೆಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದರು. 22 ಜನರನ್ನು ಉದ್ಯೋಗ ಮತ್ತು ಉತ್ತಮ‌ ಜೀವನೋಪಾಯದ ಭರವಸೆ ಮೇಲೆ ಆಮಿಷವೊಡ್ಡಿ ಕಳ್ಳಸಾಗಣೆ ಮಾಡಿ ಬೆಂಗಳೂರಿನ ತ್ಯಾಜ್ಯ ವಿಂಗಡಣಾ ಗೋದಾಮಿನಲ್ಲಿ ಬಲವಂತವಾಗಿ ಇಳಿಸಿಲಾಗಿತ್ತು ಎನ್ನುವ ಸ್ಫೋಟಕ ವಿಚಾರ ಬಯಲಿಗೆ ಬಂದಿದೆ.

ವಿವಿಧ ಶೆಡ್​ಗಳಲ್ಲಿ ಅವರನ್ನು ಬಂಧಿಸಿ ಅಲ್ಪವೇತನಕ್ಕಾಗಿ ಬಲವಂತದಿಂದ ದುಡಿಸಿಕೊಳ್ಳಲಾಗಿತ್ತು. ಅಲ್ಲದೆ, ಪ್ರತಿಭಟಿಸಿದರೆ ಅಕ್ರಮ ವಲಸಿಗರೆಂದು ಜೈಲಿಗೆ ಹಾಕಿಸುವುದಾಗಿ ಕಳ್ಳಸಾಗಣೆದಾರರು ಹೆಸರಿಸಿರುವುದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

12 ಆರೋಪಿಗಳ ಬಳಿ 61 ಆಧಾರ್ ಕಾರ್ಡ್​ಗಳು ಮತ್ತು ಇತರೆ ಭಾರತೀಯ ಗುರುತಿನ ದಾಖಲೆಗಳು ಪತ್ತೆಯಾಗಿದ್ದು, ಎನ್​ಐಎ ವಶಕ್ಕೆ ಪಡೆದುಕೊಂಡಿತ್ತು. ಸದ್ಯ, ಎನ್​ಐಎ ಭಾರತೀಯ ದಾಖಲೆಗಳ ಸಂಗ್ರಹದ ತನಿಖೆ ಮುಖದುವರೆಸಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್