AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಗಡಿ ಮೂಲಕ ಮಾನವ ಕಳ್ಳಸಾಗಾಣಿಕೆ ಕೇಸ್: NIA ಚಾರ್ಜ್ ಶೀಟ್​ನಲ್ಲಿದೆ ಸ್ಫೋಟಕ ವಿಚಾರ

ಬಾಂಗ್ಲಾ ಗಡಿಯ ಮೂಲಕ ವಿದೇಶ ಪ್ರಜೆಗಳ ಒಳನುಸುಳುವಿಕೆ ಪ್ರಕರಣ ಸಂಬಂಧ 10ಕ್ಕೂ ಹೆಚ್ಚು ಮಂದಿ ಬಾಂಗ್ಲಾ ದೇಶಿಗರ ವಿರುದ್ಧ ಎನ್​ಐಎ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಎಂಟು ಜನ ಆರೋಪಿಗಳು‌ ಮೊದಲಿಗೆ ಬಾಂಗ್ಲಾ ಪ್ರಜೆಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದು, 22 ಜನರನ್ನು ಉದ್ಯೋಗ ಮತ್ತು ಉತ್ತಮ‌ ಜೀವನೋಪಾಯದ ಭರವಸೆ ಮೇಲೆ ಆಮಿಷವೊಡ್ಡಿ ಕಳ್ಳಸಾಗಣೆ ಮಾಡಿ ಬೆಂಗಳೂರಿನ ತ್ಯಾಜ್ಯ ವಿಂಗಡಣಾ ಗೋದಾಮಿನಲ್ಲಿ ಬಲವಂತವಾಗಿ ಇಳಿಸಿಲಾಗಿತ್ತು ಎಂಬ ವಿಚಾರ ದೋಷಾರೋಪಣ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಬಾಂಗ್ಲಾ ಗಡಿ ಮೂಲಕ ಮಾನವ ಕಳ್ಳಸಾಗಾಣಿಕೆ ಕೇಸ್: NIA ಚಾರ್ಜ್ ಶೀಟ್​ನಲ್ಲಿದೆ ಸ್ಫೋಟಕ ವಿಚಾರ
ಬಾಂಗ್ಲಾ ಗಡಿಯ ಮೂಲಕ ಮಾನವ ಕಳ್ಳಸಾಗಾಣಿಕೆ ಪ್ರಕರಣ: NIA ಚಾರ್ಜ್ ಶೀಟ್​ನಲ್ಲಿದೆ ಸ್ಫೋಟಕ ವಿಚಾರ
Follow us
Shivaprasad
| Updated By: Rakesh Nayak Manchi

Updated on: Feb 06, 2024 | 6:22 PM

ಬೆಂಗಳೂರು, ಫೆ.6: ಬೃಹತ್ ಮಾನವ ಕಳ್ಳಸಾಗಣೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಎನ್ಐಎ (NIA) ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಬಾಂಗ್ಲಾ ಗಡಿಯ ಮೂಲಕ ವಿದೇಶ ಪ್ರಜೆಗಳನ್ನು ಅಕ್ರಮವಾಗಿ ಒಳನುಸುಳಿದ್ದ 12 ಬಾಂಗ್ಲಾ ದೇಶಿಗರ ವಿರುದ್ಧ ಸಲ್ಲಿಸಿದ ದೋಷಾರೋಪಣ ಪಟ್ಟಿಯಲ್ಲಿ ಸ್ಫೋಟಕ ವಿಚಾರ ಉಲ್ಲೇಖಿಸಲಾಗಿದೆ.

ಎಂ.ಡಿ.ಪಿರ್ದೌಸ್ ಬಾಪಾರಿ, ಮುಹಮ್ಮದ್ ಒಲಿ ಉಲ್ಲಾ, ಅಮೋಲ್ ದಾಸ್, ಮಸೂಲ್ ಸರ್ದಾರ್, ಎಂಡಿ ಸೋಹಾಗ್ ಗಾಜಿ,ಸುಮನ್ ಶೇಕ್, ಎಸ್ಕೆ, ಎಂಡಿ ಬೆಳ್ಳಾಲ್, ಎಂಡಿ ಮಿರಾಝಲ್ ಇಸ್ಲಾಂ, ಜಾಕಿರ್ ಖಾನ್, ಎಂಡಿ ಬಾದಲ್ ಹೌಲಾದರ್, ಎಂಡಿ ಕಬೀರ್ ತಾಲೂಕ್ದರ್, ಘರಾಮಿ ಮೊಹಮ್ಮದ್, ಬಶೀರ್ ಹೊಸನ್, ಸೌದಿ ಜಾಕಿರ್ ಸೇರಿ 12 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಆರೋಪಿಗಳು ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶ ಮಾಡಿದ್ದರು. ಬಂಗಾಳದ ಬೆನಾಪೋಲ್ ಮತ್ತು ಜಶೋರ್​ನಲ್ಲಿರುವ ಇಂಡೋ-ಬಾಂಗ್ಲಾ ಗಡಿ ಬಿಂದುಗಳು, ತ್ರಿಪುರಾ ಬಳಿಯ ಅಖೌರಾ ಮೂಲಕ ಗಡಿಯ ಎರಡು ಬದಿ ಕಾರ್ಯನಿರ್ವಹಿಸುವ ಟೌಟ್​ಗಳ ಸಹಾಯದಿಂದ ಕಳ್ಳಸಾಗಣೆ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಬಾಗಲಕೋಟೆಗೆ ಬಾಂಗ್ಲಾ ನುಸುಳುಕೋರರು ಪ್ರವೇಶ ಮಾಡ್ತಿದ್ದಾರೆ -ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ

ಎಂಟು ಜನ ಆರೋಪಿಗಳು‌ ಮೊದಲಿಗೆ ಬಾಂಗ್ಲಾ ಪ್ರಜೆಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದರು. 22 ಜನರನ್ನು ಉದ್ಯೋಗ ಮತ್ತು ಉತ್ತಮ‌ ಜೀವನೋಪಾಯದ ಭರವಸೆ ಮೇಲೆ ಆಮಿಷವೊಡ್ಡಿ ಕಳ್ಳಸಾಗಣೆ ಮಾಡಿ ಬೆಂಗಳೂರಿನ ತ್ಯಾಜ್ಯ ವಿಂಗಡಣಾ ಗೋದಾಮಿನಲ್ಲಿ ಬಲವಂತವಾಗಿ ಇಳಿಸಿಲಾಗಿತ್ತು ಎನ್ನುವ ಸ್ಫೋಟಕ ವಿಚಾರ ಬಯಲಿಗೆ ಬಂದಿದೆ.

ವಿವಿಧ ಶೆಡ್​ಗಳಲ್ಲಿ ಅವರನ್ನು ಬಂಧಿಸಿ ಅಲ್ಪವೇತನಕ್ಕಾಗಿ ಬಲವಂತದಿಂದ ದುಡಿಸಿಕೊಳ್ಳಲಾಗಿತ್ತು. ಅಲ್ಲದೆ, ಪ್ರತಿಭಟಿಸಿದರೆ ಅಕ್ರಮ ವಲಸಿಗರೆಂದು ಜೈಲಿಗೆ ಹಾಕಿಸುವುದಾಗಿ ಕಳ್ಳಸಾಗಣೆದಾರರು ಹೆಸರಿಸಿರುವುದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

12 ಆರೋಪಿಗಳ ಬಳಿ 61 ಆಧಾರ್ ಕಾರ್ಡ್​ಗಳು ಮತ್ತು ಇತರೆ ಭಾರತೀಯ ಗುರುತಿನ ದಾಖಲೆಗಳು ಪತ್ತೆಯಾಗಿದ್ದು, ಎನ್​ಐಎ ವಶಕ್ಕೆ ಪಡೆದುಕೊಂಡಿತ್ತು. ಸದ್ಯ, ಎನ್​ಐಎ ಭಾರತೀಯ ದಾಖಲೆಗಳ ಸಂಗ್ರಹದ ತನಿಖೆ ಮುಖದುವರೆಸಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ