ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್

ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ಮೋದಿ ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್
ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫಿಸರ್ (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Jan 19, 2024 | 11:45 AM

ನೆಲಮಂಗಲ, ಜ.19: ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ (Indian Army) ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ (Cheating) ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಕಲಿ ಆರ್ಮಿ ಆಫೀಸರ್ ಸತೀಶ್ ಎಂಬಾತ ಸೇನೆಯಲ್ಲಿ 25 ಮಂದಿ ಮಹಿಳೆಯರನ್ನು ತಪಾಸಣೆಗೆ ಕಳುಹಿಸುವುದಾಗಿ ಹೇಳಿ ದಾಸರಹಳ್ಳಿಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ.ಜ್ಯೋತಿ ಅವರನ್ನು ನಂಬಿಸಿದ್ದಾನೆ. ಅಲ್ಲದೆ, ಆರ್ಮಿಯಿಂದ ಅಡ್ವಾನ್ಸ್ ಪೇ ಮಾಡಿಸುತ್ತಾರೆ. ನಿಮ್ಮ ಯುಪಿಐ ಸ್ಕ್ಯಾನರ್ ಕಳುಹಿಸಿ ಎಂದು ಕೇಳಿದ್ದಾನೆ.

ಇದನ್ನೂ ಓದಿ: ಸರ್ಕಾರಿ ವೆಬ್ ಸೈಟ್ ನಿಂದಲೇ ದಾಖಲೆ ಪಡೆದು ವಂಚನೆ; AEPS ಮೂಲಕ ವಂಚನೆ ಮಾಡ್ತಿದ್ದವರು ಅರೆಸ್ಟ್

ಡಾಕ್ಟರ್ ಯುಪಿಐ ಸ್ಕ್ಯಾನರ್ ಕಳುಹಿಸುತ್ತಲೇ ಕ್ಷಣಾರ್ಧದಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ 95 ಸಾವಿರ ರೂಪಾಯಿ ಬೇರೊಂದು ಖಾತೆಗೆ ವರ್ಗಾವಣೆಯಾಗಿದೆ. ಆನ್​ಲೈನ್ ಮೂಲಕ ಹಣ ಎಗರಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಡಾಕ್ಟರ್ ಜ್ಯೋತಿ ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us