ಗದಗ: ಕೌಟುಂಬಿಕ ಕಲಹದಲ್ಲಿ ಮಹಿಳೆ ಹತ್ಯೆ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೆ ಕಾರಣವಾಯ್ತಾ ಒಂದು ಫೋನ್ ಕಾಲ್?

ಗದಗ ಜಿಲ್ಲೆಯ ರೋಣ ತಾಲೂಕಿನ ಭಾಸಲಾಪೂರ ಗ್ರಾಮದಲ್ಲಿ ಆಗಸ್ಟ್ 2 ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯ ಕೊಲೆಯ ಸತ್ಯಾಂಶ ಬೆಳಕಿಗೆ ಬಂದಿದೆ.

ಗದಗ: ಕೌಟುಂಬಿಕ ಕಲಹದಲ್ಲಿ ಮಹಿಳೆ ಹತ್ಯೆ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೆ ಕಾರಣವಾಯ್ತಾ ಒಂದು ಫೋನ್ ಕಾಲ್?
ಆರೋಪಿ ಬಂಧನ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 04, 2023 | 1:40 PM

ಗದಗ, ಆ.4: ಜಿಲ್ಲೆಯ ರೋಣ(Ron)ತಾಲೂಕಿನ ಭಾಸಲಾಪೂರ ಗ್ರಾಮದಲ್ಲಿ ಆಗಸ್ಟ್ 2 ರಂದು ನಡೆದ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಮೊದಲು ಕೌಟುಂಬಿಕ ಕಲಹದಿಂದ ಕೊಲೆ ಮಾಡಲಾಗಿದೆಯೆಂದು ತಿಳಿದಿದ್ದ ಪೊಲೀಸರಿಗೆ. ತನಿಖೆ ವೇಳೆ ಹತ್ಯೆಗೆ ಕಾರಣವೇನೆಂಬ ಸತ್ಯಾಂಶ ಬೆಳಕಿಗೆ ಬಂದಿದೆ. ಹೌದು, ಪದೇ ಪದೇ ಅಪರಿಚಿತ ನಂಬರ್​ನಿಂದ ಪತ್ನಿಗೆ ಬರುತ್ತಿದ್ದ ಕರೆಯಿಂದ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಪತಿ ಕೊಲೆ ಮಾಡಿದ್ದಾನೆ ಎಂದು ಗದಗ ಎಸ್ಪಿ ಬಿಎಸ್ ನೇಮಗೌಡ ಅವರು ಸ್ಪಷ್ಟಪಡಿಸಿದ್ದಾರೆ.

ಒಂದು ಫೋನ್ ಕಾಲ್ ಅನುಮಾನ, ಪತ್ನಿ‌ ಕೊಂದ ಪತಿ

ಇನ್ನು 15 ವರ್ಷದ ಹಿಂದೆ ಮದವೆಯಾಗಿದ್ದ ಸಂಗೀತಾ ಹಾಗೂ ಮಹೇಶ ಪಾಟೀಲ್ ದಂಪತಿಗೆ ಮೂವರು ಮಕ್ಕಳು ಕೂಡ ಇದ್ದರು. ಸುಖವಾಗಿ ಜೀವನ ನಡೆಸುತ್ತಿದ್ದ ಕುಟುಂಬದಲ್ಲಿ ಬರ ಸಿಡಿಲು ಬಡಿದಂತಾಗಿದೆ. ಒಂದು ತಿಂಗಳಿಂದ ಅಪರಿಚಿತ ನಂಬರ್​ನಿಂದ ಬರುತ್ತಿದ್ದ ಕರೆಯಿಂದ ಅನುಮಾನಗೊಂಡ ಪತಿ. ಪತ್ನಿ ಸಂಗೀತಾ ಪಾಟೀಲ್​ನ್ನು ಕೊಲೆ ಮಾಡಲು ಪ್ಲಾನ್ ಮಾಡಿಯೇ ಜಮೀನಿಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ನಾಲ್ಕೈದು ಬಾರಿ ಚಾಕುವಿನಿಂದ ಇರಿದು, ಆಕೆಯನ್ನ ಕೃಷಿ ಹೊಂಡಕ್ಕೆ ಹಾಕಿದ್ದ. ಈ ಘಟನೆಗೆ ಸಂಬಂಧಪಟ್ಟಂತೆ ಇದೀಗ ರೋಣ ಪೊಲೀಸರಿಂದ ಕೊಲೆ ಮಾಡಿದ ಆರೋಪಿ ಮಹೇಶ ಪಾಟೀಲ್​ನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:3 ದಿನಗಳ ಹಿಂದೆಯೇ ಕೊಲೆ..ಶವಗಳ ಜತೆಯೇ ಇದ್ದ ಟೆಕ್ಕಿ! FSL ಪರಿಶೀಲನೆ ವೇಳೆ ಹೊರಬಿತ್ತು ಭಯಾನಕ ಸತ್ಯ

ಕೋರ್ಟ್‌ಗೆ ಕರೆದೊಯ್ಯುವಾಗ ವಿಚಾರಣಾಧೀನ ಕೈದಿ ಎಸ್ಕೇಪ್

ಚಾಮರಾಜನಗರ: ಉಪಕಾರಾಗೃಹದಿಂದ ತಮಿಳುನಾಡು ಸತ್ಯಮಂಗಲಂ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ವಿಚಾರಣಾಧೀನ ಕೈದಿ ಎಸ್ಕೇಪ್ ಆದ ಘಟನೆ ನಡೆದಿದೆ. ತಮಿಳುನಾಡಿನ ಹಾಸನೂರು ಬಳಿ ಟೀ ಕುಡಿಯುವಾಗ ಚಾಮರಾಜನಗರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರಿಗೆ ಚಳ್ಳೇಹಣ್ಣು ತಿನಿಸಿ‌ ಪರಾರಿಯಾಗಿದ್ದಾನೆ. ಸುರೇಶ(28) ಪರಾರಿಯಾದ ವಿಚಾರಣಾಧೀನ ಕೈದಿ. ಇತ ಅನೇಕ ಕಳ್ಳತನ ಪ್ರಕರಣಗಳ ಹಿನ್ನಲೆ ಚಾಮರಾಜನಗರ ಜೈಲಿನಲ್ಲಿದ್ದ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ