AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಕೌಟುಂಬಿಕ ಕಲಹದಲ್ಲಿ ಮಹಿಳೆ ಹತ್ಯೆ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೆ ಕಾರಣವಾಯ್ತಾ ಒಂದು ಫೋನ್ ಕಾಲ್?

ಗದಗ ಜಿಲ್ಲೆಯ ರೋಣ ತಾಲೂಕಿನ ಭಾಸಲಾಪೂರ ಗ್ರಾಮದಲ್ಲಿ ಆಗಸ್ಟ್ 2 ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯ ಕೊಲೆಯ ಸತ್ಯಾಂಶ ಬೆಳಕಿಗೆ ಬಂದಿದೆ.

ಗದಗ: ಕೌಟುಂಬಿಕ ಕಲಹದಲ್ಲಿ ಮಹಿಳೆ ಹತ್ಯೆ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೆ ಕಾರಣವಾಯ್ತಾ ಒಂದು ಫೋನ್ ಕಾಲ್?
ಆರೋಪಿ ಬಂಧನ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Aug 04, 2023 | 1:40 PM

Share

ಗದಗ, ಆ.4: ಜಿಲ್ಲೆಯ ರೋಣ(Ron)ತಾಲೂಕಿನ ಭಾಸಲಾಪೂರ ಗ್ರಾಮದಲ್ಲಿ ಆಗಸ್ಟ್ 2 ರಂದು ನಡೆದ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಮೊದಲು ಕೌಟುಂಬಿಕ ಕಲಹದಿಂದ ಕೊಲೆ ಮಾಡಲಾಗಿದೆಯೆಂದು ತಿಳಿದಿದ್ದ ಪೊಲೀಸರಿಗೆ. ತನಿಖೆ ವೇಳೆ ಹತ್ಯೆಗೆ ಕಾರಣವೇನೆಂಬ ಸತ್ಯಾಂಶ ಬೆಳಕಿಗೆ ಬಂದಿದೆ. ಹೌದು, ಪದೇ ಪದೇ ಅಪರಿಚಿತ ನಂಬರ್​ನಿಂದ ಪತ್ನಿಗೆ ಬರುತ್ತಿದ್ದ ಕರೆಯಿಂದ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಪತಿ ಕೊಲೆ ಮಾಡಿದ್ದಾನೆ ಎಂದು ಗದಗ ಎಸ್ಪಿ ಬಿಎಸ್ ನೇಮಗೌಡ ಅವರು ಸ್ಪಷ್ಟಪಡಿಸಿದ್ದಾರೆ.

ಒಂದು ಫೋನ್ ಕಾಲ್ ಅನುಮಾನ, ಪತ್ನಿ‌ ಕೊಂದ ಪತಿ

ಇನ್ನು 15 ವರ್ಷದ ಹಿಂದೆ ಮದವೆಯಾಗಿದ್ದ ಸಂಗೀತಾ ಹಾಗೂ ಮಹೇಶ ಪಾಟೀಲ್ ದಂಪತಿಗೆ ಮೂವರು ಮಕ್ಕಳು ಕೂಡ ಇದ್ದರು. ಸುಖವಾಗಿ ಜೀವನ ನಡೆಸುತ್ತಿದ್ದ ಕುಟುಂಬದಲ್ಲಿ ಬರ ಸಿಡಿಲು ಬಡಿದಂತಾಗಿದೆ. ಒಂದು ತಿಂಗಳಿಂದ ಅಪರಿಚಿತ ನಂಬರ್​ನಿಂದ ಬರುತ್ತಿದ್ದ ಕರೆಯಿಂದ ಅನುಮಾನಗೊಂಡ ಪತಿ. ಪತ್ನಿ ಸಂಗೀತಾ ಪಾಟೀಲ್​ನ್ನು ಕೊಲೆ ಮಾಡಲು ಪ್ಲಾನ್ ಮಾಡಿಯೇ ಜಮೀನಿಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ನಾಲ್ಕೈದು ಬಾರಿ ಚಾಕುವಿನಿಂದ ಇರಿದು, ಆಕೆಯನ್ನ ಕೃಷಿ ಹೊಂಡಕ್ಕೆ ಹಾಕಿದ್ದ. ಈ ಘಟನೆಗೆ ಸಂಬಂಧಪಟ್ಟಂತೆ ಇದೀಗ ರೋಣ ಪೊಲೀಸರಿಂದ ಕೊಲೆ ಮಾಡಿದ ಆರೋಪಿ ಮಹೇಶ ಪಾಟೀಲ್​ನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:3 ದಿನಗಳ ಹಿಂದೆಯೇ ಕೊಲೆ..ಶವಗಳ ಜತೆಯೇ ಇದ್ದ ಟೆಕ್ಕಿ! FSL ಪರಿಶೀಲನೆ ವೇಳೆ ಹೊರಬಿತ್ತು ಭಯಾನಕ ಸತ್ಯ

ಕೋರ್ಟ್‌ಗೆ ಕರೆದೊಯ್ಯುವಾಗ ವಿಚಾರಣಾಧೀನ ಕೈದಿ ಎಸ್ಕೇಪ್

ಚಾಮರಾಜನಗರ: ಉಪಕಾರಾಗೃಹದಿಂದ ತಮಿಳುನಾಡು ಸತ್ಯಮಂಗಲಂ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ವಿಚಾರಣಾಧೀನ ಕೈದಿ ಎಸ್ಕೇಪ್ ಆದ ಘಟನೆ ನಡೆದಿದೆ. ತಮಿಳುನಾಡಿನ ಹಾಸನೂರು ಬಳಿ ಟೀ ಕುಡಿಯುವಾಗ ಚಾಮರಾಜನಗರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರಿಗೆ ಚಳ್ಳೇಹಣ್ಣು ತಿನಿಸಿ‌ ಪರಾರಿಯಾಗಿದ್ದಾನೆ. ಸುರೇಶ(28) ಪರಾರಿಯಾದ ವಿಚಾರಣಾಧೀನ ಕೈದಿ. ಇತ ಅನೇಕ ಕಳ್ಳತನ ಪ್ರಕರಣಗಳ ಹಿನ್ನಲೆ ಚಾಮರಾಜನಗರ ಜೈಲಿನಲ್ಲಿದ್ದ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More