AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಸಾಲಬಾಧೆ ತಾಳಲಾರದೇ ಮನನೊಂದು ವಿಷ ಸೇವಿಸಿ ರೈತ ಆತ್ಮಹತ್ಯೆ

ವೈನ್ ಶಾಪ್​ವೊಂದರಲ್ಲಿ 5 ಸಾವಿರ ನಗದು ಹಾಗೂ ಮದ್ಯವನ್ನ ಎಗರಿಸಿ ಪರಾರಿಯಾಗಿದ್ದ ಕಳ್ಳರುನ್ನು 9 ದಿನಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಇದೆ ಎಪ್ರಿಲ್ 15 ರಂದು ಗುರುಮಠಕಲ್‌ ಪಟ್ಟಣದಲ್ಲಿ ಘಟನೆ ನಡೆದಿದೆ.

ವಿಜಯನಗರ: ಸಾಲಬಾಧೆ ತಾಳಲಾರದೇ ಮನನೊಂದು ವಿಷ ಸೇವಿಸಿ ರೈತ ಆತ್ಮಹತ್ಯೆ
ಗುಂಡಾನಾಯ್ಕ್ ಆತ್ಮಹತ್ಯೆ ಮಾಡಿಕೊಂಡ ರೈತ.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 24, 2022 | 3:15 PM

Share

ವಿಜಯನಗರ: ಸಾಲಬಾಧೆ ತಾಳಲಾರದೇ ಮನನೊಂದು ವಿಷ (Poison) ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದಲ್ಲಿ ನಡೆದಿದೆ. ಗುಂಡಾನಾಯ್ಕ್ ( 37) ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳೆಗಾಗಿ ಕೈಸಾಲ ಮಾಡಿಕೊಂಡಿದ್ದ ರೈತ ಗುಂಡಾನಾಯ್ಕ್, ಮಳೆಗಾಲದಲ್ಲಿ ಈರುಳ್ಳಿ ಬೆಳೆ ನಾಶವಾಗಿತ್ತು. ಈಗ ಬೆಳೆದಿರೋ ಈರುಳ್ಳಿಗೂ ಬೆಲೆ ಕುಸಿತವಾಗಿದೆ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವೈನ್​​ಶಾಪ್​ವೊಂದರಲ್ಲಿ ಕಳ್ಳರ ಕೈಚಳಕ; ನಗದು ಮತ್ತು ಮದ್ಯ ಎಗರಿಸಿ ಪರಾರಿ;

ಯಾದಗಿರಿ: ವೈನ್ ಶಾಪ್​ವೊಂದರಲ್ಲಿ 5 ಸಾವಿರ ನಗದು ಹಾಗೂ ಮದ್ಯವನ್ನ ಎಗರಿಸಿ ಪರಾರಿಯಾಗಿದ್ದ ಕಳ್ಳರುನ್ನು 9 ದಿನಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಇದೆ ಎಪ್ರಿಲ್ 15 ರಂದು ಗುರುಮಠಕಲ್‌ ಪಟ್ಟಣದಲ್ಲಿ ಘಟನೆ ನಡೆದಿದೆ. ಯಾದಗಿರಿ ನಗರದ ನಿವಾಸಿಗಳಾದ ಸಂಗಮೇಶ, ಮಹೇಶ್ವರ ರೆಡ್ಡಿ ಹಾಗೂ ವಿಶ್ವರಾಧ್ಯ ಬಂಧಿತ ಕಳ್ಳರು. ಗುರುಮಠಕಲ್‌ ಪಟ್ಟಣದ ನರಸರೆಡ್ಡಿ ಎಂಬವರ ವೈನ್ ಶಾಪ್​ಗೆ ಕನ್ನ ಹಾಕಿದ್ದರು. ಗುರುಮಠಕಲ್‌ ಪೊಲೀಸರಿಂದ ಕಳ್ಳರ ಬಂಧನ ಮಾಡಿ ಪ್ರಕರಣ ದಾಖಲು ಮಾಡಲಾಗಿದೆ.

ಬೊಲೆರೊ ವಾಹನ ಡಿಕ್ಕಿ, ಇಬ್ಬರ ಸಾವು ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದ ಬಳಿ ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಇಬ್ಬರ ಮೃತಪಟ್ಟ ಘಟನೆ ನಡೆದಿದೆ. ಹೊನ್ನಾವರ ಮೂಲದ ಪ್ರಮೋದ್(43), ವಿನಾಯಕ(30) ಮೃತರು. ಬೊಲೆರೊ ವಾಹನದಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಲಿಂಗೇಶ್ವರ ದೇಗುಲದಲ್ಲಿ ಶಿವಲಿಂಗ ಕಳವು ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಬುರಡೇಕಟ್ಟೆ ಗ್ರಾಮದಲ್ಲಿ ರಾಮಲಿಂಗೇಶ್ವರ ದೇಗುಲದಲ್ಲಿ ಸುಮಾರು 5 ಅಡಿ ಎತ್ತರವಿದ್ದ ಶಿವಲಿಂಗ ಕಳವಾಗಿದೆ. ಜೀರ್ಣೋದ್ಧಾರಗೊಂಡು ಲೋಕಾರ್ಪಣೆಗೆ ಸಿದ್ದಗೊಂಡಿದ್ದ ದೇಗುಲ ಕಳ್ಳತನ ಮಾಡಲಾಗಿದೆ. ನಿಧಿ ಆಸೆಗಾಗಿ ಶಿವಲಿಂಗ ತೆಗೆದು ನಿಧಿಗಳ್ಳರು ಗುಂಡಿ ಅಗೆದಿರುವ ಶಂಕೆ ವ್ಯಕ್ತವಾಗಿದೆ. 500 ವರ್ಷಗಳ ಹಿಂದೆ ಚೋಳರ ಕಾಲದಲ್ಲಿ ಈ ದೇಗುಲ ನಿರ್ಮಾಣವಾಗಿತ್ತು.

ಇದನ್ನೂ ಓದಿ;

ಸದಾ ಬಂಗಾರ ಧರಿಸುವುದು ಈ ಐದು ರಾಶಿಯವರಿಗೆ ಅದೃಷ್ಟವಂತೆ

ಶಾಸಕ ಪ್ರೀತಂಗೌಡ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಕೆಂಡಾಮಂಡಲ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್