AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಸಾಲಬಾಧೆ ತಾಳಲಾರದೇ ಮನನೊಂದು ವಿಷ ಸೇವಿಸಿ ರೈತ ಆತ್ಮಹತ್ಯೆ

ವೈನ್ ಶಾಪ್​ವೊಂದರಲ್ಲಿ 5 ಸಾವಿರ ನಗದು ಹಾಗೂ ಮದ್ಯವನ್ನ ಎಗರಿಸಿ ಪರಾರಿಯಾಗಿದ್ದ ಕಳ್ಳರುನ್ನು 9 ದಿನಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಇದೆ ಎಪ್ರಿಲ್ 15 ರಂದು ಗುರುಮಠಕಲ್‌ ಪಟ್ಟಣದಲ್ಲಿ ಘಟನೆ ನಡೆದಿದೆ.

ವಿಜಯನಗರ: ಸಾಲಬಾಧೆ ತಾಳಲಾರದೇ ಮನನೊಂದು ವಿಷ ಸೇವಿಸಿ ರೈತ ಆತ್ಮಹತ್ಯೆ
ಗುಂಡಾನಾಯ್ಕ್ ಆತ್ಮಹತ್ಯೆ ಮಾಡಿಕೊಂಡ ರೈತ.
TV9 Web
| Edited By: |

Updated on: Apr 24, 2022 | 3:15 PM

Share

ವಿಜಯನಗರ: ಸಾಲಬಾಧೆ ತಾಳಲಾರದೇ ಮನನೊಂದು ವಿಷ (Poison) ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದಲ್ಲಿ ನಡೆದಿದೆ. ಗುಂಡಾನಾಯ್ಕ್ ( 37) ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳೆಗಾಗಿ ಕೈಸಾಲ ಮಾಡಿಕೊಂಡಿದ್ದ ರೈತ ಗುಂಡಾನಾಯ್ಕ್, ಮಳೆಗಾಲದಲ್ಲಿ ಈರುಳ್ಳಿ ಬೆಳೆ ನಾಶವಾಗಿತ್ತು. ಈಗ ಬೆಳೆದಿರೋ ಈರುಳ್ಳಿಗೂ ಬೆಲೆ ಕುಸಿತವಾಗಿದೆ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವೈನ್​​ಶಾಪ್​ವೊಂದರಲ್ಲಿ ಕಳ್ಳರ ಕೈಚಳಕ; ನಗದು ಮತ್ತು ಮದ್ಯ ಎಗರಿಸಿ ಪರಾರಿ;

ಯಾದಗಿರಿ: ವೈನ್ ಶಾಪ್​ವೊಂದರಲ್ಲಿ 5 ಸಾವಿರ ನಗದು ಹಾಗೂ ಮದ್ಯವನ್ನ ಎಗರಿಸಿ ಪರಾರಿಯಾಗಿದ್ದ ಕಳ್ಳರುನ್ನು 9 ದಿನಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಇದೆ ಎಪ್ರಿಲ್ 15 ರಂದು ಗುರುಮಠಕಲ್‌ ಪಟ್ಟಣದಲ್ಲಿ ಘಟನೆ ನಡೆದಿದೆ. ಯಾದಗಿರಿ ನಗರದ ನಿವಾಸಿಗಳಾದ ಸಂಗಮೇಶ, ಮಹೇಶ್ವರ ರೆಡ್ಡಿ ಹಾಗೂ ವಿಶ್ವರಾಧ್ಯ ಬಂಧಿತ ಕಳ್ಳರು. ಗುರುಮಠಕಲ್‌ ಪಟ್ಟಣದ ನರಸರೆಡ್ಡಿ ಎಂಬವರ ವೈನ್ ಶಾಪ್​ಗೆ ಕನ್ನ ಹಾಕಿದ್ದರು. ಗುರುಮಠಕಲ್‌ ಪೊಲೀಸರಿಂದ ಕಳ್ಳರ ಬಂಧನ ಮಾಡಿ ಪ್ರಕರಣ ದಾಖಲು ಮಾಡಲಾಗಿದೆ.

ಬೊಲೆರೊ ವಾಹನ ಡಿಕ್ಕಿ, ಇಬ್ಬರ ಸಾವು ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದ ಬಳಿ ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಇಬ್ಬರ ಮೃತಪಟ್ಟ ಘಟನೆ ನಡೆದಿದೆ. ಹೊನ್ನಾವರ ಮೂಲದ ಪ್ರಮೋದ್(43), ವಿನಾಯಕ(30) ಮೃತರು. ಬೊಲೆರೊ ವಾಹನದಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಲಿಂಗೇಶ್ವರ ದೇಗುಲದಲ್ಲಿ ಶಿವಲಿಂಗ ಕಳವು ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಬುರಡೇಕಟ್ಟೆ ಗ್ರಾಮದಲ್ಲಿ ರಾಮಲಿಂಗೇಶ್ವರ ದೇಗುಲದಲ್ಲಿ ಸುಮಾರು 5 ಅಡಿ ಎತ್ತರವಿದ್ದ ಶಿವಲಿಂಗ ಕಳವಾಗಿದೆ. ಜೀರ್ಣೋದ್ಧಾರಗೊಂಡು ಲೋಕಾರ್ಪಣೆಗೆ ಸಿದ್ದಗೊಂಡಿದ್ದ ದೇಗುಲ ಕಳ್ಳತನ ಮಾಡಲಾಗಿದೆ. ನಿಧಿ ಆಸೆಗಾಗಿ ಶಿವಲಿಂಗ ತೆಗೆದು ನಿಧಿಗಳ್ಳರು ಗುಂಡಿ ಅಗೆದಿರುವ ಶಂಕೆ ವ್ಯಕ್ತವಾಗಿದೆ. 500 ವರ್ಷಗಳ ಹಿಂದೆ ಚೋಳರ ಕಾಲದಲ್ಲಿ ಈ ದೇಗುಲ ನಿರ್ಮಾಣವಾಗಿತ್ತು.

ಇದನ್ನೂ ಓದಿ;

ಸದಾ ಬಂಗಾರ ಧರಿಸುವುದು ಈ ಐದು ರಾಶಿಯವರಿಗೆ ಅದೃಷ್ಟವಂತೆ

ಶಾಸಕ ಪ್ರೀತಂಗೌಡ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಕೆಂಡಾಮಂಡಲ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!