AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕೈಗೆ ಸಿಗದ ಬೆಳೆ, ಏರಿದ ಸಾಲ; ಹುಣಸೂರಿನಲ್ಲಿ ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆ ಕೈಗೆ ಬರದ ಹಿನ್ನೆಲೆಯಲ್ಲಿ ನೊಂದು ಹುಣಸೂರಿನಲ್ಲಿ ರೈತರೋವರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ದಸರಾ ಪಾರ್ಟಿ ವೇಳೆ ಜಗಳದಲ್ಲಿ ಯುವಕನೊಬ್ಬ ಕೊಲೆಯಾಗಿದ್ದಾನೆ.

ಮೈಸೂರು: ಕೈಗೆ ಸಿಗದ ಬೆಳೆ, ಏರಿದ ಸಾಲ; ಹುಣಸೂರಿನಲ್ಲಿ ರೈತ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 16, 2021 | 8:05 AM

Share

ಮೈಸೂರು: ಸಾಲಬಾಧೆಯ ಕಾರಣದಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮುತ್ತುರಾಯನ ಹೊಸಹಳ್ಳಿಯಲ್ಲಿ ಘಟನೆ ನಡೆದಿದೆ. ಮೃತ ರೈತನನ್ನು ರವಿಗೌಡ ಎಂದು ಗುರುತಿಸಲಾಗಿದ್ದು, ಅವರಿಗೆ 44 ವರ್ಷ ವಯಸ್ಸಾಗಿತ್ತು. ರವಿಗೌಡ ಸುಮಾರು 15 ಲಕ್ಷ ರೂಗಳನ್ನು ಸಾಲ ಮಾಡಿದ್ದರು. ಆದರೆ 2 ವರ್ಷದಿಂದ ಬೆಳೆ ಕೈಗೆ ಸಿಗದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರವಿಗೌಡ ಅವರು ತಮ್ಮ 7 ಎಕರೆ ಜಮೀನಿನಲ್ಲಿ ತಂಬಾಕು ಹಾಗೂ ಶುಂಠಿ ಬೆಳೆ ಬೆಳೆದಿದ್ದರು. ಕಂಪ್ಲಾಪುರ ಕಾವೇರಿ ಗ್ರಾಮೀಣಾಭಿವೃದ್ಧಿ ಬ್ಯಾಂಕಿನಲ್ಲಿ 6 ಲಕ್ಷ, ಫೈನಾನ್ಸ್​ ಒಂದರಲ್ಲಿ 9 ಲಕ್ಷ ಟ್ರ್ಯಾಕ್ಟರ್ ಸಾಲ ಪಡೆದಿದ್ದರು. ಎರಡು ವರ್ಷದಿಂದ ಬೆಳೆ ಕೈಕೊಟ್ಟು, ಬೆಲೆ ಪಾತಾಳಕ್ಕಿಳಿದಿದ್ದರಿಂದ ರವಿ ಕಂಗಾಲಾಗಿದ್ದರು. ಸಕಾಲದಲ್ಲಿ ಮಳೆಯೂ ಇಲ್ಲದೆ ತಂಬಾಕು ಬೆಳೆ ಸಾಧಾರಣವಾಗಿತ್ತು. ಇದರಿಂದ ನೊಂದು ರವಿ ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಅವರು ಮೃತಪಟ್ಟಿದ್ದಾರೆ.

ಮಂಗಳೂರು: ದಸರಾ ಪಾರ್ಟಿ ವೇಳೆ ಜಗಳದಲ್ಲಿ ಯುವಕನ ಕೊಲೆ ದಸರಾ ಪಾರ್ಟಿ ವೇಳೆ ಜಗಳದಲ್ಲಿ ಯುವಕನೊಬ್ಬ ಕೊಲೆಗೀಡಾಗಿದ್ದಾನೆ. ಪಚ್ಚನಾಡಿ ನಿವಾಸಿ ಧನುಷ್(20) ಹತ್ಯೆಗೀಡಾದ ಯುವಕ. ಮಂಗಳೂರಿನ ಪಂಪ್‌ವೆಲ್ ಬಳಿಯ ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಜೇಸನ್ ಹಾಗೂ ಧನುಷ್ ಎಂಬಾತನ ನಡುವೆ ಗಲಾಟೆ ನಡೆದಿದೆ. ಈ ವೇಳೆ ಹರಿತವಾದ ವಸ್ತುವಿನಿಂದ ಜೇಸನ್ ಧನುಷ್‌ಗೆ ಇರಿದಿದ್ದಾನೆ. ಕೂಡಲೇ ಧನುಷ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಧನುಷ್ ಮೃತಪಟ್ಟಿದ್ದಾನೆ.

ಇದನ್ನೂ ಓದಿ:

ಸಿಂಘು ಗಡಿಯಲ್ಲಿ ಗುಂಪು ಹಲ್ಲೆ: ಪೊಲೀಸರಿಗೆ ಶರಣಾದ ಕೊಲೆ ಆರೋಪಿ

ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಭೆ; ಪ್ರಮುಖವಾಗಿ ಮುಂಬರುವ ಚುನಾವಣೆಗಳ ಕುರಿತು ಚರ್ಚೆಯ ನಿರೀಕ್ಷೆ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ