AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕೈಗೆ ಸಿಗದ ಬೆಳೆ, ಏರಿದ ಸಾಲ; ಹುಣಸೂರಿನಲ್ಲಿ ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆ ಕೈಗೆ ಬರದ ಹಿನ್ನೆಲೆಯಲ್ಲಿ ನೊಂದು ಹುಣಸೂರಿನಲ್ಲಿ ರೈತರೋವರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ದಸರಾ ಪಾರ್ಟಿ ವೇಳೆ ಜಗಳದಲ್ಲಿ ಯುವಕನೊಬ್ಬ ಕೊಲೆಯಾಗಿದ್ದಾನೆ.

ಮೈಸೂರು: ಕೈಗೆ ಸಿಗದ ಬೆಳೆ, ಏರಿದ ಸಾಲ; ಹುಣಸೂರಿನಲ್ಲಿ ರೈತ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 16, 2021 | 8:05 AM

Share

ಮೈಸೂರು: ಸಾಲಬಾಧೆಯ ಕಾರಣದಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮುತ್ತುರಾಯನ ಹೊಸಹಳ್ಳಿಯಲ್ಲಿ ಘಟನೆ ನಡೆದಿದೆ. ಮೃತ ರೈತನನ್ನು ರವಿಗೌಡ ಎಂದು ಗುರುತಿಸಲಾಗಿದ್ದು, ಅವರಿಗೆ 44 ವರ್ಷ ವಯಸ್ಸಾಗಿತ್ತು. ರವಿಗೌಡ ಸುಮಾರು 15 ಲಕ್ಷ ರೂಗಳನ್ನು ಸಾಲ ಮಾಡಿದ್ದರು. ಆದರೆ 2 ವರ್ಷದಿಂದ ಬೆಳೆ ಕೈಗೆ ಸಿಗದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರವಿಗೌಡ ಅವರು ತಮ್ಮ 7 ಎಕರೆ ಜಮೀನಿನಲ್ಲಿ ತಂಬಾಕು ಹಾಗೂ ಶುಂಠಿ ಬೆಳೆ ಬೆಳೆದಿದ್ದರು. ಕಂಪ್ಲಾಪುರ ಕಾವೇರಿ ಗ್ರಾಮೀಣಾಭಿವೃದ್ಧಿ ಬ್ಯಾಂಕಿನಲ್ಲಿ 6 ಲಕ್ಷ, ಫೈನಾನ್ಸ್​ ಒಂದರಲ್ಲಿ 9 ಲಕ್ಷ ಟ್ರ್ಯಾಕ್ಟರ್ ಸಾಲ ಪಡೆದಿದ್ದರು. ಎರಡು ವರ್ಷದಿಂದ ಬೆಳೆ ಕೈಕೊಟ್ಟು, ಬೆಲೆ ಪಾತಾಳಕ್ಕಿಳಿದಿದ್ದರಿಂದ ರವಿ ಕಂಗಾಲಾಗಿದ್ದರು. ಸಕಾಲದಲ್ಲಿ ಮಳೆಯೂ ಇಲ್ಲದೆ ತಂಬಾಕು ಬೆಳೆ ಸಾಧಾರಣವಾಗಿತ್ತು. ಇದರಿಂದ ನೊಂದು ರವಿ ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಅವರು ಮೃತಪಟ್ಟಿದ್ದಾರೆ.

ಮಂಗಳೂರು: ದಸರಾ ಪಾರ್ಟಿ ವೇಳೆ ಜಗಳದಲ್ಲಿ ಯುವಕನ ಕೊಲೆ ದಸರಾ ಪಾರ್ಟಿ ವೇಳೆ ಜಗಳದಲ್ಲಿ ಯುವಕನೊಬ್ಬ ಕೊಲೆಗೀಡಾಗಿದ್ದಾನೆ. ಪಚ್ಚನಾಡಿ ನಿವಾಸಿ ಧನುಷ್(20) ಹತ್ಯೆಗೀಡಾದ ಯುವಕ. ಮಂಗಳೂರಿನ ಪಂಪ್‌ವೆಲ್ ಬಳಿಯ ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಜೇಸನ್ ಹಾಗೂ ಧನುಷ್ ಎಂಬಾತನ ನಡುವೆ ಗಲಾಟೆ ನಡೆದಿದೆ. ಈ ವೇಳೆ ಹರಿತವಾದ ವಸ್ತುವಿನಿಂದ ಜೇಸನ್ ಧನುಷ್‌ಗೆ ಇರಿದಿದ್ದಾನೆ. ಕೂಡಲೇ ಧನುಷ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಧನುಷ್ ಮೃತಪಟ್ಟಿದ್ದಾನೆ.

ಇದನ್ನೂ ಓದಿ:

ಸಿಂಘು ಗಡಿಯಲ್ಲಿ ಗುಂಪು ಹಲ್ಲೆ: ಪೊಲೀಸರಿಗೆ ಶರಣಾದ ಕೊಲೆ ಆರೋಪಿ

ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಭೆ; ಪ್ರಮುಖವಾಗಿ ಮುಂಬರುವ ಚುನಾವಣೆಗಳ ಕುರಿತು ಚರ್ಚೆಯ ನಿರೀಕ್ಷೆ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ