AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯಿಂದಲೇ ಮಗನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಹತ್ಯೆಗೆ ಯತ್ನ

ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆರ್.ಟಿ.ನಗರದ ಚಾಮುಂಡಿನಗರದಲ್ಲಿ ನಡೆದಿದೆ. ಸುಲೇಮಾನ್(18) ಕೊಲೆಯಾದ ಯುವಕ.

ತಂದೆಯಿಂದಲೇ ಮಗನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಹತ್ಯೆಗೆ ಯತ್ನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 06, 2022 | 11:01 PM

Share

ಬೆಂಗಳೂರು: ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆರ್.ಟಿ.ನಗರದ ಚಾಮುಂಡಿನಗರದಲ್ಲಿ ನಡೆದಿದೆ. ಸುಲೇಮಾನ್(18) ಕೊಲೆಯಾದ ಯುವಕ. ಕಬ್ಬಿಣದ ರಾಡ್​ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರ ಹತ್ಯೆ ಮಾಡಲಾಗಿದೆ. ಹಣಕ್ಕಾಗಿ ತಂದೆ ಶಂಶೀರ್​ನನ್ನು ಪುತ್ರ ಸುಲೇಮಾನ್ ಪೀಡಿಸುತ್ತಿದ್ದ ನು. ​ಹಣ ನೀಡದಿದ್ರೆ ಮಲತಾಯಿಯನ್ನು ಕೊಲ್ಲುವುದಾಗಿ ತಂದೆಗೆ ಸುಲೇಮಾನ್​ ಧಮ್ಕಿ ಹಾಕಿದ್ದನು.

ಬಾರ್ ಬೆಂಡಿಂಗ್ ಕೆಲಸ ಮಾಡುವ ಶಂಶೀರ್​ಗೆ ಇಬ್ಬರು ಪತ್ನಿಯರು. ಮೊದಲ ಪತ್ನಿ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನೆಲೆಸಿದ್ದಾರೆ.  ಮೊಹಮ್ಮದ್ ಶಂಶೀರ್​  2ನೇ ಪತ್ನಿ ಜತೆ ಬೆಂಗಳೂರಲ್ಲಿ ನೆಲೆಸಿದ್ದಾನೆ. ಸುಲೇಮಾನ್​ ಗ್ಯಾರೇಜ್​ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದನು. ಮೊಹಮ್ಮದ್​ ಶಂಶೀರ್​ನ ಮೊದಲ ಪತ್ನಿಯ ಮಗ ಸುಲೇಮಾನ್.  ಇಂದು ಬೆಳಗ್ಗೆ ಮನೆಯಲ್ಲಿ ಶಂಶೀರ್, ಸುಲೇಮಾನ್​ ನಡುವೆ ಜಗಳ ಉಂಟಾಗಿದೆ.  2ನೇ ಪತ್ನಿಯನ್ನು ಕೊಲ್ಲುವ ಆತಂಕದಿಂದ ತಂದೆ ಮಗನನ್ನು ಕೊಂದಿದ್ದಾನೆ.  ಆರೋಪಿ ಮೊಹಮ್ಮದ್ ಶಂಶೀರ್​ನನ್ನ ಪೊಲೀಸರು ಬಂಧಿಸಿದ್ದು,  ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನುಓದಿ: ಚಡ್ಡಿಗಳು ಮಾಡೋದು ಚಡ್ಡಿ ಕೆಲಸಾನೆ ಚಡ್ಡಿಗಳು ಇನ್ನೇನ್ ಕೆಲಸ ಮಾಡುತ್ತವೆ: ಸಿದ್ದರಾಮಯ್ಯ

ಮಾರಕಾಸ್ತ್ರಗಳೊಂದಿಗೆ ವ್ಯಕ್ತಿ ಮೇಲೆ ಅಟ್ಯಾಕ್ ಮಾಡಲು ಯತ್ನ ಓರ್ವನನ್ನು ಪೊಲೀಸರಿಗೊಪ್ಪಿಸಿದ ಜನ

ಬೆಂಗಳೂರು: ಮಾರಕಾಸ್ತ್ರಗಳೊಂದಿಗೆ ವ್ಯಕ್ತಿ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ ವಿಶ್ವೇಶ್ವರಯ್ಯ ಲೇಔಟ್​​ನಲ್ಲಿ ನಡೆದಿದೆ. ಮುನಿಕೃಷ್ಣ ಎಂಬುವರ ಮೇಲೆ ಹಲ್ಲೆಗೆ ಯತ್ನಿಸಿದ್ದ ಮೂವರ ಪೈಕಿ ಒಬ್ಬನನ್ನ ಹಿಡಿದು ಜನರು ಪೊಲೀಸರಿಗೊಪ್ಪಿಸಿದ್ದಾರೆ. ಬೈಕ್​ನಲ್ಲಿ ಬಂದಿದ್ದ ಮೂವರ ಪೈಕಿ ಇಬ್ಬರು ಪರಾರಿಯಾಗಿದ್ದು ಒಬ್ಬನನ್ನು ಬಂಧಿಸಲಾಗಿದೆ. ಕಿರಣ್​ ಎಂಬುವವನನ್ನ ಹಿಡಿದು ಜನರು ಪೊಲೀಸರಿಗೆ ಒಪ್ಪಿಸಿದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನು ಓದಿ: ಮಳಲಿ ಮಸೀದಿ ವಿವಾದ; ಅರ್ಜಿ ವಿಚಾರಣೆ ಜೂನ್ 9ಕ್ಕೆ ಮುಂದೂಡಿದ ಮಂಗಳೂರು ಕೋರ್ಟ್ 

ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಹತ್ಯೆಗೆ ಯತ್ನ

ಮಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಬೈಕಂಪಾಡಿ ಜಂಕ್ಷನ್ ಬಳಿ ನಡೆದಿದೆ.  ರವಿರಾಜ್ ಬಂಗೇರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ.  ಇಬ್ಬರು ಅಪರಿಚಿತರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.  ಗಾಯಾಳು ರವಿರಾಜ್​​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ರವಿರಾಜ್ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದನು. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:01 pm, Mon, 6 June 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್