ಬೆಂಗಳೂರು: ಬಾರ್​ನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!

| Updated By: Rakesh Nayak Manchi

Updated on: Dec 07, 2023 | 9:09 AM

ಬಾರ್​ವೊಂದರಲ್ಲಿ ಆರಂಭವಾದ ಜಗಳ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಗಲಾಟೆ ಬಳಿಕ ವ್ಯಕ್ತಿಯನ್ನು ಹತ್ಯೆ ಮಾಡಿ ಕೆರೆಗೆ ಶವ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಬಾರ್​ನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!
ಬೆಂಗಳೂರಿನ ಬಾರ್​ನಲ್ಲಿ ಆರಂಭವಾದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ
Follow us on

ಬೆಂಗಳೂರು, ಡಿ.7: ನಗರದ ತಲಘಟ್ಟಪುರದ ಬಳಿ ಇರುವ ಕೆರೆಯೊಂದರಲ್ಲಿ ಖಾಸಗಿ ಕಂಪನಿಯ ಉದ್ಯೋಗಿ ಶವ ಬುಧವಾರ ಸಂಜೆ ಪತ್ತೆಯಾಗಿದೆ. ಮೃತದೇಹದ ಗುರುತು ಪತ್ತೆಯಾಗಿದ್ದು, ಶರತ್ ​​(30) ಎಂದು ಗುರುತಿಸಲಾಗಿದೆ. ಬಾರ್​ವೊಂದರಲ್ಲಿ ಮಂಗಳವಾರ ತಡರಾತ್ರಿ ನಡೆದಿದ್ದ ಗಲಾಟೆ ಬಳಿಕ ಶರತ್​ನನ್ನು ಕೊಲೆ (Murder) ಮಾಡಲಾಗಿದೆ. ಹತ್ಯೆ ಬಳಿಕ ಮೃತದೇಹವನ್ನು ಕೆರೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಹರಿದು ಬೈಕ್ ಸವಾರ ಸಾವು

ತುಮಕೂರು: ಲಾರಿ ಹರಿದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಂಟ್ರಿ ಕ್ಲಬ್ ಬಳಿ ನಡೆದಿದೆ. ಬೆಂಗಳೂರು ನಗರದ ದೊಮ್ಮರಹಳ್ಳಿ ನಿವಾಸಿಯಾಗಿರುವ ಅರ್ಚಕ ಆರ್.ಹರೀಶ್ (21) ಮೃತ ದುರ್ದೈವಿ.

ಇದನ್ನೂ ಓದಿ: NCRB Report: ಭಾರತದಲ್ಲಿ ನಡೆಯುತ್ತಿರುವ ಕೊಲೆಗಳ ಹಿಂದಿರುವ ಸಾಮಾನ್ಯ ಉದ್ದೇಶಗಳೇನು?

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹರೀಶ್ ಅವರು ಬೈಕ್ ಮೂಲಕ ಹೋಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಮೇಲೆ ಬಿದ್ದಿದ್ದಾರೆ. ಈ ವೇಳೆ ಬಂದ ಲಾರಿಯೊಂದು ಅವರ ಮೇಲೆ ಹರಿದು ಹೋಗಿದೆ. ಪರಿಣಾಮ ಹರೀಶ್ ದೇಹ ಎರಡು ಭಾಗವಾಗಿದೆ. ಚಿತ್ರದುರ್ಗದ ಲಕ್ಷ್ಮೀನರಸಿಂಹ ದೇಗುಲಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ