ಮಹಿಳೆ ಜತೆ ಮಾತಾಡಿದ್ದಕ್ಕೆ ಯುವಕನನ್ನ ಬೆತ್ತಲೆ ಮಾಡಿ ಹಲ್ಲೆ, ಮೂವರು ಅರೆಸ್ಟ್

ವಿವಾಹಿತ ಮಹಿಳೆಗೆ ಫೋನ್​ ಮಾಡಿ ಮಾತನಾಡಿದ್ದಕ್ಕೆ ಯುವಕನನ್ನು ಸಂಪೂರ್ಣವಾಗಿ ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಅಮಾನುಷ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕೆಲಸಕ್ಕೆ ಹೋದ ವೇಳೆ ವ್ಯಕ್ತಿಯನ್ನು ಬೆತ್ತಲೇ ಮಾಡಿ‌ ಹಲ್ಲೆ ಮಾಡಿ ಮಾಡಿದ್ದು, ಬಳಿಕ ಅದೇ ಸ್ಥಿತಿಯನ್ನು ವ್ಯಕ್ತಿಯನ್ನು ಜನರು ತುಂಬಿದ ಓಣಿಯಲ್ಲಿ ತಂದು ಬಿಟ್ಟಿದ್ದಾರೆ. ಹುಬ್ಬಳ್ಳಿಯ ಕಸಬಾ ಪೇಟೆ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ನಡೆದ ಘಟನೆ ನಡೆದಿದೆ.

ಮಹಿಳೆ ಜತೆ ಮಾತಾಡಿದ್ದಕ್ಕೆ ಯುವಕನನ್ನ ಬೆತ್ತಲೆ ಮಾಡಿ ಹಲ್ಲೆ, ಮೂವರು ಅರೆಸ್ಟ್
ಯುವಕನನ್ನ ಬೆತ್ತಲೆ ಮಾಡಿ ಹಲ್ಲೆ
Edited By:

Updated on: Jan 22, 2025 | 4:40 PM

ಹುಬ್ಬಳ್ಳಿ, (ಜನವರಿ 22): ಹುಬ್ಬಳ್ಳಿಯಲ್ಲೊಂದು ಘನಘೋರ ಘಟನೆ ನಡೆದಿದೆ. ವಿವಾಹಿತ ಮಹಿಳೆಗೆ ಜೊತೆ ಮಾತನಾಡಿದ್ದಕ್ಕೆ ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ನಡೆದಿದೆ. ಮುಜಾಫೀರ್ ಎನ್ನುವಾತ ನಿನ್ನೆ (ಜನವರಿ 21) ವಿವಾಹಿತ ಮಹಿಳೆ ಜೊತೆ ಮಾತಾಡಿದ್ದ. ಈ ಹಿನ್ನೆಲೆಯಲ್ಲಿ ಮಹಿಳೆಯ ಸಂಬಂಧಿಕರು ಹತ್ತು ಹದಿನೈದು ಜನರ ಗ್ಯಾಂಗ್ ಇಂದು (ಜನವರಿ 22) ಮುಜಾಫೀರ್ ಕೆಲಸ ವೇಳೆ ಹಿಡಿದು ಬೆತ್ತಲ್ಲೇ ಮಾಡಿದ್ದಾರೆ. ಅಲ್ಲದೇ ಬ್ಲೇಡ್ ನಿಂದ‌ ಸಿಕ್ಕ ಸಿಕ್ಕಲ್ಲಿ ಕೊಯ್ದಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಕಸಬಾಪೇಟೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಯುವಕ ಮುಜಾಫೀರ್ ಎನ್ನುವ ಯುವಕ ವಿವಾಹಿತ ಮಹಿಳೆಗೆ ಫೋನ್ ಕರೆ ಮಾಡಿ ಮಾತನಾಡಿದ್ದಾನೆ. ಈ ವಿಚಾರ ಮಹಿಳೆಯ ಸಂಬಂಧಿಕರಿಗೆ ಗೊತ್ತಾಗಿದ್ದು, ಬಳಿಕ ಯುವಕ ಮುಜಾಫೀರ್​ನನ್ನು ಅಪಹರಣ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಅದೇ ಬೆತ್ತಲೆ ಸ್ಥಿತಿಯಲ್ಲಿ ಮುಜಾಫೀರ್​ನನ್ನು ಟಿಪ್ಪು ನಗರಕ್ಕೆ ಕರೆತಂದು ಮನೆಗೆ ಹೋಗು ಎಂದು ತಂದು ಬಿಟ್ಟಿದ್ದಾರೆ. ಸದ್ಯ ಗಾಯಗೊಂಡ ಮುಜಾಫೀರ್ ಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ: ಬೆಂಗಳೂರು: ಕೆಆರ್ ಮಾರ್ಕೆಟ್ ಬಳಿ ಮಹಿಳೆಯ ರೇಪ್, ಚಿನ್ನಾಭರಣ, ಹಣ ದೋಚಿದ ದುಷ್ಕರ್ಮಿಗಳು

ಇದರಿಂದ ಆಕ್ರೋಶಗೊಂಡ ಹಲ್ಲೆಗೊಳಗಾದ‌ ಮುಜಾಫೀರ್ ಸಂಬಂಧಿಕರು, ಏನಾದರೂ ಆಗಿದ್ರೆ ಯಾರೂ ಹೊಣೆ ,ಮೈ ಮೇಲೆ ಬಟ್ಟೆ ಇಲ್ಲದಂತೆ ಬಿಟ್ಟು ಹೋಗಿದ್ದಾರೆ. ನಾವು ಪೊಲೀಸ್ ದೂರು ನೀಡಿದ್ದೇವೆ. ಇಡೀ ಓಣಿಯಲ್ಲಿ ನಾಚಿಕೆ ಬರುವ ತರ ಆಗಿದೆ. ಹೊಡೆದು ಬೆತ್ತಲೆ ಮಾಡಿ ಇಲ್ಲಿ‌ ತಂದು ಬಿಟ್ಟಿದ್ದಾರೆ. ನಮಗೆ ನ್ಯಾಯ ಬೇಕೆಂದು‌ ಹಲ್ಲೆಗೊಳಗಾದ ಸಂಬಂಧಿಕರು ಆಗ್ರಹಿಸಿದ್ದಾರೆ.

ಇನ್ನು ಮೊಹಮದ್, ಮಾಬುಲಿ, ಮಲೀಕ್, ಮೈನು ಶಗರಿ , ನದೀಮ್, ಸಮೀರ್ ಸೇರಿ ಹತ್ತು ಹದಿನೈದು ಜನರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಈ ಪೈಕಿ ಮೂರು ಜನ ಪೊಲೀಸ್ ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us