AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣದ ಆಸೆ ತೋರಿಸಿ ಮಕ್ಕಳಿಂದ ಮೊಬೈಲ್ ಕಳ್ಳತನ ಮಾಡಿಸುತ್ತಿರುವ ಗುಂಪು; ಖದೀಮರ ಬಂಧನಕ್ಕೆ ಸ್ಥಳೀಯರ ಒತ್ತಾಯ

ಲಿಂಗರಾಜಪುರದಲ್ಲಿ ಮಕ್ಕಳಿಂದ ಮೊಬೈಲ್ ಕಳ್ಳತನವಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಗುಂಪೊಂದು ಮಕ್ಕಳನ್ನು‌ ಮುಂದೆ ಬಿಟ್ಟು ಕಳ್ಳತನ ಮಾಡುತ್ತಿದೆ. ಈ ಗುಂಪು ಮಕ್ಕಳಿಂದ ಒಂದು ಮೊಬೈಲ್ ಪಡೆದು ಅವರಿಗೆ ಐನೂರು ಸಾವಿರ ರೂಪಾಯಿ ನೀಡಿ ಕಳ್ಳತನಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಹಣದ ಆಸೆ ತೋರಿಸಿ ಮಕ್ಕಳಿಂದ ಮೊಬೈಲ್ ಕಳ್ಳತನ ಮಾಡಿಸುತ್ತಿರುವ ಗುಂಪು; ಖದೀಮರ ಬಂಧನಕ್ಕೆ ಸ್ಥಳೀಯರ ಒತ್ತಾಯ
ಮಕ್ಕಳಿಂದ ಮೊಬೈಲ್ ಕಳ್ಳತನ ಮಾಡಿಸುತ್ತಿರುವ ಗುಂಪು
ರಾಚಪ್ಪಾಜಿ ನಾಯ್ಕ್
| Edited By: ಆಯೇಷಾ ಬಾನು|

Updated on: Feb 26, 2024 | 2:23 PM

Share

ಬೆಂಗಳೂರು, ಫೆ.26: ಬೆಂಗಳೂರಲ್ಲಿ ಮಕ್ಕಳನ್ನು ಮುಂದೆ ಬಿಟ್ಟು ಕಳ್ಳತನ (Theft) ಮಾಡಲಾಗುತ್ತಿರುವ ಗುಂಪೊಂದು ಪತ್ತೆಯಾಗಿದೆ. ಮಕ್ಕಳು ಸಣ್ಣ ಸಣ್ಣ ವಯಸ್ಸಿಗೆ ಮೊಬೈಲ್ ಕಳ್ಳತನಕ್ಕೆ (Mobile Theft) ಕೈಹಾಕುತ್ತಿದ್ದಾರೆ. ಲಿಂಗರಾಜಪುರದಲ್ಲಿ ಮಕ್ಕಳಿಂದ ಮೊಬೈಲ್ ಕಳ್ಳತನವಾಗುತ್ತಿರುವ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಲಿಂಗರಾಜಪುರ ಅಕ್ರಮದ ಗೂಡಾಗಿದೆ. ಇಲ್ಲಿ ಮೀಸೆ ಚಿಗುರದ ಹುಡುಗರ ಕೈಯಲ್ಲಿ ಮಾದಕ ವಸ್ತು ಕಾಣಸಿಗುತ್ತದೆ.

ಐದು, ಆರು, ಏಳನೇ ತರಗತಿ ಮಕ್ಕಳು ಕಳ್ಳತನ ಮಾಡುತ್ತಿದ್ದಾರೆ. ಜನ ನಿದ್ದೆ ಮಾಡ್ತಿದ್ದಂತೆ ಮೊಬೈಲ್ ಕದ್ದು ಹೋಗ್ತಿದ್ದಾರೆ. ಗುಂಪೊಂದು ಮಕ್ಕಳನ್ನು‌ ಮುಂದೆ ಬಿಟ್ಟು ಕಳ್ಳತನ ಮಾಡುತ್ತಿದೆ. ಈ ಗುಂಪು ಮಕ್ಕಳಿಂದ ಒಂದು ಮೊಬೈಲ್ ಪಡೆದು ಅವರಿಗೆ ಐನೂರು ಸಾವಿರ ರೂಪಾಯಿ ನೀಡಿ ಕಳ್ಳತನಕ್ಕೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಲಿಂಗರಾಜಪುರ ನಿವಾಸಿಗಳು ಆರೋಪ ಮಾಡಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡಿದ್ರು ಪ್ರಯೋಜನ ಇಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಮನೆಯಲ್ಲಿ ಮಧ್ಯಾಹ್ನ ಮಲಗಿದ್ದ ಡಿಸೋಜಾ ಎಂಬ ವ್ಯಕ್ತಿಯ ಮೊಬೈಲ್ ಅನ್ನೇ ಓರ್ವ ಬಾಲಕ ಎಗರಿಸಿ ಸಿಮ್ ಕಾರ್ಡ್ ಕಚ್ಚಿ ಬಿಸಾಡಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಬಾಣಸವಾಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಆದರೂ ಪ್ರಯೋಜನವಾಗಿಲ್ಲ. ಮಕ್ಕಳ ಹಿಂದಿರುವ ಮಾಫಿಯ ಬಯಲಿಗೆಳೆಯಲು ಸ್ಥಳೀಯರು ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ವಿದೇಶಿ ಪ್ರಜೆ ಕಿಡ್ನಾಪ್ ಮಾಡಿ ಸುಲಿಗೆ

ಆಸ್ಟ್ರೇಲಿಯಾದ ಸಿಟಿಜೆನ್ಶಿಪ್ ಪಡೆದ ಅಲೋಕ್ ರಾಣಾ ಹಾಗೂ ಈತನ ಸಹೋದರ ಅಮಿತ್ ರಾಣಾ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನೆಲೆಸಿದ್ದರು. ಅಲೋಕ್ ರಾಣಾ ಸಹೋದರ ಅಮಿತ್ ರಾಣಾನನ್ನು ನೋಡಿಕೊಂಡು ಹೋಗಲು ಬಂದಿದ್ದ ಈ ವೇಳೆ ಡ್ರಗ್ಸ್ ವೆಸನಿಯಾಗಿದ್ದ ಅಲೋಕ್ ರಾಣಾ ಡಾರ್ಕ್ ವೆಬ್ ಮೂಲಕ ಗಾಂಜಾ ಖರೀದಿಸಲು ಮುಂದಾಗಿದ್ದ. ಈ ವೇಳೆ ಮೋನಿಷ್ ಎಂಬಾತ ಪರಿಚಯವಾಗಿದ್ದ. ಅಷ್ಟೇ ಮೋನಿಷ್ ಬಳಿ ನಾಲ್ಕೈದು ಸಲ ಗಾಂಜಾವನ್ನು ಖರೀದಿ ಮಾಡಿದ್ದ. ಇದರಿಂದ ಮೊನಿಷ್ , ಅನಿರುದ್ದ್, ಆದಿ ಸೇರಿದಂತೆ ನಾಲ್ಕೈದು ಜನರ ಗುಂಪು ಅಲೋಕ್ ರಾಣಾ ನನ್ನು ಕಿಡ್ನಾಪ್ ಮಾಡಿದ್ರೆ ಸಾಕಷ್ಟು ಹಣ ಗಳಿಸಬಹುದು ಎಂದು ಪ್ಲಾನ್ ಮಾಡಿ ಗಾಂಜಾ ಕೊಡುವ ನೆಪದಲ್ಲಿ ಕರೆಸಿಕೊಂಡು ಕಿಡ್ನಾಪ್ ಮಾಡಿದ್ದಾರೆ.

ಇದನ್ನೂ ಓದಿ: ನೆಟ್‌ವರ್ಕ್ ಮಾರ್ಕೆಟಿಂಗ್ ಎಂದು ಯುವಕ-ಯುವತಿಯರಿಗೆ ಕೋಟ್ಯಾಂತರ ರೂ ಮೋಸ, ನಾಲ್ವರು ಅರೆಸ್ಟ್

ಮೋನಿಷ್, ಆದಿ, ಅನಿರುದ್ದ್ ಟೀಮ್ ಅಲೋಕ್ ರಾಣಾನನ್ನು ಕಿಡ್ನಾಪ್ ಮಾಡಿ ರೂಮ್ ನಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದರು. ಈ ವೇಳೆ ಹಣಕ್ಕಾಗಿ ಪೀಡಿಸಿ ಅಲೋಕ್ ರಾಣಾ ಬಳಿ ಕಾರ್ಡ್ ನಿಂಡ ಎಟಿಎಂ ನಲ್ಲಿ ಹಣ ಡ್ರಾ ಮಾಡಿಸಿದ್ದರು. ಅಲೋಕ್ ರಾಣಾ ಅಣ್ಣನಿಗೂ ಕರೆ ಮಾಡಿ ಅನ್ ಲೈನ್ ಪೇಮೆಂಟ್ ಮೂಲಕ ಹಣ ಹಾಕಿಸಿಕೊಂಡಿದ್ದರು. ಸುಮಾರು 78 ಸಾವಿರ ಹಣವನ್ನು ಅಲೋಕ್ ರಾಣಾ ನಿಂದ ಪಡೆದ್ರೆ 40 ಸಾವಿರ ಹಣ ಅಮಿತ್ ರಾಣಾ ಟ್ರಾನ್ಸ್ ಫರ್ ಮಾಡಿಸಿಕೊಂಡು ಆ ಮೂಲಕ ಖದೀಮರು ಪೀಕಿದ್ದರು. ಅಲೋಕ್ ರಾಣಾ ಕಾರು ಜಿಪಿಆರ್ ಎಸ್ ಆಧರಿಸಿ ಟ್ರೇಸ್ ಮಾಡಿ ಅಣ್ಣ ಅಮಿತ್ ರಾಣಾ ಬೊಮ್ಮನಹಳ್ಳಿಯ ಆ ಸ್ಪಾಟ್ ಗೆ ಬಂದಾಗ ಬೈಲ್ ಏರಿ ಗಾಂಜಾ ಗ್ಯಾಂಗ್ ಎಸ್ಕೇಪ್ ಆಗಿತ್ತು, ಅದರಲ್ಲೊಬ್ಬ ತನ್ನ ಮೊಬೈಲ್ ಬಿಟ್ಟು ಗಾಬರಿಯಿಂದ ಓಡಿಬಪರಾರಿಯಾಗಿದ್ದ. ಆದರೆ ಇದೇ ಸಮಯದಲ್ಲಿ ಅಲೋಕ್ ಖದೀಮರಿಂದ ತಪ್ಪಿಸಿಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದ. ಗಾಂಜಾ ಖರೀದಿದಾರ ಎಂಬ ಭಯಕ್ಕೆ ಈ ವಿಚಾರ ಎಲ್ಲೂ ಬಾಯ್ಬಿಟ್ಟರಲಿಲ್ಲ. ಡಿಸಿಪಿ ಸಿಕೆ ಬಾಬಾಗೆ ಈ ವಿಚಾರ ತಿಳಿಯುತ್ತಿದ್ದಂತೆ ಎಫ್ ಐಆರ್ ದಾಖಲಿಸುವಂತೆ ಸೂಚಿಸಿದರು. ಬೊಮ್ಮನಹಳ್ಳಿ ಪೊಲೀಸರು ಆರೋಪಿಗಳನನ್ನು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ 6 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು