AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀ-ಸಂಧಾನದ ಮೂಲಕ ಗಂಡನ ಮನೆಗೆ ಬಂದ ಪತ್ನಿ: ಬಳಿಕ ದುರಂತ ಅಂತ್ಯ ಕಂಡಳು

ಗಂಡ ಹೆಂಡತಿ ಪ್ರತಿದಿನ ಜಗಳ ಮಾಡುತ್ತಲೇ ಇದ್ದು, ನಿನ್ನೆ (ಅ.27) ರಾತ್ರಿ ಮಾತ್ರ ದಂಪತಿಗಳ ಜಗಳ ವಿಕೋಪಕ್ಕೆ ತಿರುಗಿ ದುರಂತ ಅಂತ್ಯ ಕಂಡಿದೆ

ರಾಜೀ-ಸಂಧಾನದ ಮೂಲಕ ಗಂಡನ ಮನೆಗೆ ಬಂದ ಪತ್ನಿ: ಬಳಿಕ ದುರಂತ ಅಂತ್ಯ ಕಂಡಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 28, 2022 | 9:53 PM

Share

ಗಂಡ-ಹೆಂಡಿತಯ ಜಗಳ ಉಂಡು ಮಲಗುವ ತನಕ ಅಂತಾರೆ‌. ಆದರೆ ಇಲ್ಲಿ ಗಂಡ, ಹೆಂಡತಿ ಮಲಗಿದ್ದಾಗ ಕ್ರೂರ ಕೃತ್ಯವನ್ನು ಎಸಗಿದ್ದಾನೆ. ಕುಡುಕ ಗಂಡ ಹೆಂಡತಿಗೆ ನಿರಂತರವಾಗಿ ಕಾಟ ಕೊಡುತ್ತಿದ್ದನು. ಪ್ರತಿದಿನ ಜಗಳ ಮಾಡುತ್ತಲೇ ಇದ್ದು, ನಿನ್ನೆ (ಅ.27) ರಾತ್ರಿ ಮಾತ್ರ ದಂಪತಿಗಳ ಜಗಳ ವಿಕೋಪಕ್ಕೆ ತಿರುಗಿತ್ತು. ನೋಡ ನೋಡುತ್ತಿದ್ದಂತೆ ಗಂಡ ಕೊಡಲಿಯಿಂದ, ತಾಳಿ ಕಟ್ಟಿದ ಪತ್ನಿಯನ್ನೇ ಕೊಲೆ ಮಾಡಿದ್ದಾನೆ.

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಬೂದಿಹಾಳ ಗ್ರಾಮದಲ್ಲಿ 8 ವರ್ಷದ ಹಿಂದೆ ಪಾರ್ವತಿ ಹಾಗೂ ಮಲ್ಲಪ್ಪನ ಮದುವೆಯಾಗಿತ್ತು. ಕೆಲ ದಿನ ಅನ್ಯೋನ್ಯವಾಗಿಯೇ ಇದ್ದರು. ದಂಪತಿಗೆ ಎರಡು ಹೆಣ್ಣು ಮಕ್ಕಳಿದ್ದರು. ಆದರೆ ಮಲ್ಲಪ್ಪ ಮೊದಲಿಂದಲೂ ಕುಡಿತದ ದಾಸನಾಗಿದ್ದು, ಇತ್ತೀಚಿಗೆ ಕುಡಿತದ ಚಟ ವಿಪರೀತವಾಗಿ ದಾರಿ ತಪ್ಪಿದ್ದನು. ಪ್ರತಿದಿನ ಕುಡಿದು ಬಂದು ಪತ್ನಿ ಜೊತೆ ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡುತ್ತಿದ್ದನು. ಪ್ರತಿದಿನ ಪತ್ನಿ ಮೇಲೆ ಹಲ್ಲೆ ಮಾಡುತ್ತಿದ್ದನು. ಇದರಿಂದ ಪತ್ನಿ ಕಳೆದ ಐದು ತಿಂಗಳ ಹಿಂದೆ ತವರು ಮನೆಗೆ ಹೋಗಿದ್ದಳು. ಹಿರಿಯರು ಮತ್ತು ಸಂಬಂಧಿಕರು ರಾಜಿ ಸಂಧಾನ ಮಾಡಿಸಿದ ಕಾರಣ, ಪಾರ್ವತಿ ಒಂದು ತಿಂಗಳ ಹಿಂದಷ್ಟೇ ಗಂಡನ‌ ಮನೆಗೆ ವಾಪಸ್ ಆಗಿದ್ದಳು. ಇಷ್ಟಾದರೂ ಮಲ್ಲಪ್ಪ ಮತ್ತೆ ಅದೆ ಚಾಳಿ ಮುಂದುವರೆಸಿದ್ದನು.

ನಿನ್ನೆ ರಾತ್ರಿ ಪತಿ ಮಲ್ಲಪ್ಪ ಹೆರಕಲ್ ಪುನಃ ಕುಡಿದು ಬಂದು, ಪತ್ನಿ ಪಾರ್ವತಿ ಹೆರಕಲ್ (26) ಜೊತೆ ಜಗಳ ತೆಗೆದಿದ್ದಾನೆ. ಇಬ್ಬರ ಜಗಳ ವಿಕೋಪಕ್ಕೆ ತಿರುಗಿ ಮಲ್ಲಪ್ಪ ಹೆರಕಲ್, ಪತ್ನಿ ಪಾರ್ವತಿ ಹೆರಕಲ್​ಳನ್ನು ಕೊಡಲಿಯಿಂದ ತಲೆ, ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದಾನೆ. ಕುಡುಕ ಗಂಡ ಮುಗ್ದ ಪತ್ನಿಯ ಬಲಿ ಪಡೆದು ಜೈಲು ಸೇರಿದರೆ, ಮಕ್ಕಳು ಅನಾಥರಾಗಿದ್ದಾರೆ. ಕುಡುಕನ ಕೃತ್ಯಕ್ಕೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.

ವರದಿ- ರವಿ ಮೂಕಿ ಟಿರ್ವಿ ಬಾಗಲಕೋಟೆ

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 9:50 pm, Fri, 28 October 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ