Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆಯಾಗಿ ಹೋದ ಬೆಂಗಳೂರಿನಿಂದ ತನ್ನೂರಿಗೆ ಮರಳಿದ ಕೆ.ಆರ್​​.ಟಿ.ಸಿ ಬಸ್​ ಚಾಲಕ

ಯಾರೊಂದಿಗು ದ್ವೇಷ ಕಟ್ಟಿಕೊಳ್ಳದವ, ಯಾರೊಂದಿಗು ಹಣಕಾಸಿನ ವ್ಯವಹಾರವನ್ನು ಕೂಡ ಹೊಂದಿರದ ಕೆ.ಆರ್​​.ಟಿ.ಸಿ ಬಸ್​ ಚಾಲಕನ ಸಾವಿನ ಕಾರಣ ಮಾತ್ರ ನಿಗೂಢ

ಕೊಲೆಯಾಗಿ ಹೋದ ಬೆಂಗಳೂರಿನಿಂದ ತನ್ನೂರಿಗೆ ಮರಳಿದ ಕೆ.ಆರ್​​.ಟಿ.ಸಿ ಬಸ್​ ಚಾಲಕ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 25, 2022 | 10:14 PM

ಯಾರೊಂದಿಗು ದ್ವೇಷ ಕಟ್ಟಿಕೊಳ್ಳದವ, ಯಾರೊಂದಿಗು ಹಣಕಾಸಿನ ವ್ಯವಹಾರವನ್ನು ಕೂಡ ಹೊಂದಿರದ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಿಧನೂರು ಗ್ರಾಮದ ಕೆ.ಆರ್​​.ಟಿ.ಸಿ ಬಸ್​ ಚಾಲಕ ಬರ್ಬರವಾಗಿ ಕೊಲೆಯಾಗಿದ್ದಾನೆ. ಶಿವಶರಣಪ್ಪ ಹೇರೂರು (40) ಕೆ.ಆರ್​​.ಟಿ.ಸಿ ಬಸ್​ ಚಾಲಕನಾಗಿದ್ದು, ಕಳೆದ ಕೆಲ ದಿನಗಳ ಹಿಂದೆ ಸಸ್ಪೆಂಡ್ ಆಗಿದ್ದನಂತೆ. ಈ ಸಂಬಂಧ ಬೆಂಗಳೂರಿಗೆ ಹೋಗಿ ಅಮಾನತ್ತು ಆದೇಶ ರದ್ದುಗೊಳಿಸಿಕೊಂಡು ಅ.12 ರಂದು ಗ್ರಾಮಕ್ಕೆ ಬಂದಿದ್ದನಂತೆ. ಬೆಂಗಳೂರಿನಿಂದ ಮಧ್ಯಾಹ್ನ ತನ್ನೂರಿಗೆ ಬಂದಿದ್ದ ಶಿವಶರಣಪ್ಪನನ್ನು ಗ್ರಾಮದ ಬಲಭೀಮ ಎಂಬುವ ವ್ಯಕ್ತಿ ತನ್ನ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದನಂತೆ. ಸಂಜೆ ಮನೆಯಿಂದ ಹೋಗಿದ್ದ ಶಿವಶರಣಪ್ಪ, ಅಕ್ಟೋಬರ್ 13 ರಂದು ಮುಂಜಾನೆ ಶವವಾಗಿ ಪತ್ತೆಯಾಗಿದ್ದನು.

ಅಷ್ಟಕ್ಕಾದರೂ ಶಿವಶರಣಪ್ಪ ಸಾವನ್ನಪ್ಪಿದ್ದು ಹೇಗೆ?

ಅ.12 ರಂದು ಆತನನ್ನು ಕರೆದುಕೊಂಡು ಹೋಗಿದ್ದ ಕೆಲವರು ಪಾರ್ಟಿ ಮಾಡಿ, ಚೆನ್ನಾಗಿ ಕುಡಿಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದರು. ಕೊಲೆ ಪ್ರಕರಣ ದಾಖಲಿಸಿಕೊಂಡ ರೇವೂರು ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆ ನಡೆದು ಬರೋಬ್ಬರಿ 12 ದಿನಗಳು ಕಳೆದರೂ ಕೊಲೆಯನ್ನು ಯಾವ ಕಾರಣಕ್ಕಾಗಿ ಮಾಡಿದ್ದಾರೆ ಅನ್ನೋದೆ ನಿಗೂಢವಾಗಿದೆ. ಶಿವಶರಣಪ್ಪನನ್ನು ಒಬ್ಬರೇ ಕೊಲೆ ಮಾಡಲು ಸಾಧ್ಯವಿಲ್ಲಾ, 3-4 ಜನರು ಸೇರಿಕೊಂಡೆ ಕೊಲೆ ಮಾಡಿದ್ದಾರೆ ಅಂತಿದ್ದಾರೆ ಕುಟುಂಬದವರು. ಮೊದಲು ಮಾರಕಾಸ್ತ್ರದಿಂದ ಅನೇಕ ಕಡೆ ಇರದಿರುವ ದುಷ್ಕರ್ಮಿಗಳು, ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎಂದು ಕುಟುಂಬದವರು ಹೇಳುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶರಣಪ್ಪನನ್ನು ಕರೆದುಕೊಂಡು ಹೋಗಿದ್ದ ಭಲಬೀಮ ಸೇರಿದಂತೆ ಅನೇಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಕೊಲೆಗೆ ಅಸಲಿ ಕಾರಣವೇನು ಅನ್ನೋದು ಗೊತ್ತಾಗುತ್ತಿಲ್ಲಾ. ಜೊತೆಗೆ ಕೊಲೆಯನ್ನು ಯಾರೆಲ್ಲಾ ಸೇರಿ ಮಾಡಿದ್ದಾರೆ ಅನ್ನೋದು ಯಕ್ಷ ಪ್ರಶ್ನೆಯಾಗಿದೆ.

ಶಿವಶರಣಪ್ಪ ಕೊಲೆಯಾಗಿ ಎರಡುವಾರ ಕಳೆದರೂ ಕೂಡ ಇವರೇ ಕೊಲೆ ಮಾಡಿದ್ದಾರೆ, ಇದೇ ಕಾರಣಕ್ಕೆ ಕೊಲೆ ನಡೆದಿದೆ ಅನ್ನೋದು ಗೊತ್ತಾಗುತ್ತಿಲ್ಲಾ. ಪೊಲೀಸರಿಗೆ ಸರ್ಕಾರಿ ಬಸ್ ಚಾಲಕನ ಕೊಲೆ ಪ್ರಕರಣ ತೀರ್ವ ಕಗ್ಗಂಟಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವರದಿ- ಸಂಜಯ್.ಟಿವಿ9 ಕಲಬುರಗಿ

Published On - 10:13 pm, Tue, 25 October 22

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್