Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎರಡನೇ ಲವ್ ಬಗ್ಗೆ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ

ಇದು ಕಾನ್ಸ್‌ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ. ಎರಡನೇ ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ತನ್ನ ಪ್ರಿಯಕರನ ಮೇಲೆ ಪ್ರಿಯತಮೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ರಾಣಿ ಮತ್ತು ಅದೇ ಠಾಣೆಯ ಸಿಬ್ಬಂದಿ ಸಂಯಜ್ ಪ್ರೀತಿಸುತ್ತಿದ್ದರು. ಈ ನಡುವೆ ತನ್ನನ್ನು ನಿರ್ಲಕ್ಷ್ಯಿಸಿದ್ದಕ್ಕೆ ಮನೆಗೆ ಹೋಗಿ ಜಗಳ ಮಾಡಿ ಎಡರನೇ ಲವ್ ಬಗ್ಗೆ ಪ್ರಶ್ನಿಸಿದ ಸಂಜಯ್​ಗೆ ರಾಣಿ ಬೆಂಕಿ ಹಚ್ಚಿದ್ದಾಳೆ.

ಬೆಂಗಳೂರು: ಎರಡನೇ ಲವ್ ಬಗ್ಗೆ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ
ಎರಡನೇ ಲವ್ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ (ಸಾಂದರ್ಭಿಕ ಚಿತ್ರ)
Follow us
Shivaprasad
| Updated By: Rakesh Nayak Manchi

Updated on: Dec 21, 2023 | 9:57 AM

ಬೆಂಗಳೂರು, ಡಿ.21: ಎರಡನೇ ಲವ್ ಸ್ಟೋರಿ ಬಗ್ಗೆ ಪ್ರಶ್ನಿಸಿದ ಪ್ರಿಯಕರನಿಗೆ ವಿವಾಹಿತ ಮಹಿಳೆ ಪೆಟ್ರೋಲ್ ಹಾಕಿ ಬೆಂಕಿ (Fire) ಹಚ್ಚಿದ ಘಟನೆ ನಗರದ (Bengaluru) ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ, ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಕಾನ್​ಸ್ಟೇಬಲ್ ಸಂಜಯ್ ಮತ್ತು ಹೋಮ್ ಗಾರ್ಡ್ ರಾಣಿ ಲವ್​ ಸ್ಟೋರಿ ಠಾಣೆ ಮೆಟ್ಟಿಲೇರಿದೆ.

ಕಾನ್​ಸ್ಟೇಬಲ್ ಸಂಜಯ್ ಮತ್ತು ಹೋಂಗಾರ್ಡ್ ರಾಣಿ ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರ ಮಧ್ಯೆ ಪ್ರೇಮ ಬೆಳೆದಿತ್ತು. ಮದುವೆಯಾಗಿದ್ದರೂ ಕಾನ್​​ಸ್ಟೇಬಲ್ ಜೊತೆ ಕೆಲವು ತಿಂಗಳಿಂದ ರಾಣಿ ಪ್ರೀತಿಸುತ್ತಿದ್ದಳು.

ಇದನ್ನೂ ಓದಿ: ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು

ಇತ್ತೀಚೆಗೆ ಸಂಜಯ್​ನನ್ನು ರಾಣಿ ನಿರ್ಲಕ್ಷ್ಯಿಸಲು ಆರಂಭಿಸಿದ್ದಾಳೆ. ಹೀಗಾಗಿ ಎರಡು ದಿನಗಳ ಹಿಂದೆ ಆಕೆ ಮನೆಗೆ ಹೋಗಿದ್ದಾಗ ಸಂಜಯ್ ಮತ್ತು ರಾಣಿ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ ವೇಳೆ ಮತ್ತೊಬ್ಬನೊಂದಿಗೆ ಪ್ರೀತಿಯಲ್ಲಿರುವ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಸಂಜಯ್​ಗೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಕೂಡಲೇ ಸಂಜಯ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ