AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎರಡನೇ ಲವ್ ಬಗ್ಗೆ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ

ಇದು ಕಾನ್ಸ್‌ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ. ಎರಡನೇ ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ತನ್ನ ಪ್ರಿಯಕರನ ಮೇಲೆ ಪ್ರಿಯತಮೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ರಾಣಿ ಮತ್ತು ಅದೇ ಠಾಣೆಯ ಸಿಬ್ಬಂದಿ ಸಂಯಜ್ ಪ್ರೀತಿಸುತ್ತಿದ್ದರು. ಈ ನಡುವೆ ತನ್ನನ್ನು ನಿರ್ಲಕ್ಷ್ಯಿಸಿದ್ದಕ್ಕೆ ಮನೆಗೆ ಹೋಗಿ ಜಗಳ ಮಾಡಿ ಎಡರನೇ ಲವ್ ಬಗ್ಗೆ ಪ್ರಶ್ನಿಸಿದ ಸಂಜಯ್​ಗೆ ರಾಣಿ ಬೆಂಕಿ ಹಚ್ಚಿದ್ದಾಳೆ.

ಬೆಂಗಳೂರು: ಎರಡನೇ ಲವ್ ಬಗ್ಗೆ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ
ಎರಡನೇ ಲವ್ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ (ಸಾಂದರ್ಭಿಕ ಚಿತ್ರ)
Shivaprasad B
| Edited By: |

Updated on: Dec 21, 2023 | 9:57 AM

Share

ಬೆಂಗಳೂರು, ಡಿ.21: ಎರಡನೇ ಲವ್ ಸ್ಟೋರಿ ಬಗ್ಗೆ ಪ್ರಶ್ನಿಸಿದ ಪ್ರಿಯಕರನಿಗೆ ವಿವಾಹಿತ ಮಹಿಳೆ ಪೆಟ್ರೋಲ್ ಹಾಕಿ ಬೆಂಕಿ (Fire) ಹಚ್ಚಿದ ಘಟನೆ ನಗರದ (Bengaluru) ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ, ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಕಾನ್​ಸ್ಟೇಬಲ್ ಸಂಜಯ್ ಮತ್ತು ಹೋಮ್ ಗಾರ್ಡ್ ರಾಣಿ ಲವ್​ ಸ್ಟೋರಿ ಠಾಣೆ ಮೆಟ್ಟಿಲೇರಿದೆ.

ಕಾನ್​ಸ್ಟೇಬಲ್ ಸಂಜಯ್ ಮತ್ತು ಹೋಂಗಾರ್ಡ್ ರಾಣಿ ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರ ಮಧ್ಯೆ ಪ್ರೇಮ ಬೆಳೆದಿತ್ತು. ಮದುವೆಯಾಗಿದ್ದರೂ ಕಾನ್​​ಸ್ಟೇಬಲ್ ಜೊತೆ ಕೆಲವು ತಿಂಗಳಿಂದ ರಾಣಿ ಪ್ರೀತಿಸುತ್ತಿದ್ದಳು.

ಇದನ್ನೂ ಓದಿ: ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು

ಇತ್ತೀಚೆಗೆ ಸಂಜಯ್​ನನ್ನು ರಾಣಿ ನಿರ್ಲಕ್ಷ್ಯಿಸಲು ಆರಂಭಿಸಿದ್ದಾಳೆ. ಹೀಗಾಗಿ ಎರಡು ದಿನಗಳ ಹಿಂದೆ ಆಕೆ ಮನೆಗೆ ಹೋಗಿದ್ದಾಗ ಸಂಜಯ್ ಮತ್ತು ರಾಣಿ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ ವೇಳೆ ಮತ್ತೊಬ್ಬನೊಂದಿಗೆ ಪ್ರೀತಿಯಲ್ಲಿರುವ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಸಂಜಯ್​ಗೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಕೂಡಲೇ ಸಂಜಯ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ