AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡಿವೈಡರ್ ಮೇಲೆ ಲಾರಿ ಹಾರಿಸಿದ ಚಾಲಕ, ಮುಂದೆ ಬರುತ್ತಿದ್ದ ಬೈಕ್​ಗೆ ಡಿಕ್ಕಿ; ಸವಾರ ಗಂಭೀರ

ಲಾರಿ ಚಾಲಕನ ಅವಾಂತರದಿಂದಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುವಂತಾಗಿದೆ. ಡಿವೈಡರ್ ಮೇಲೆ ಹಾರಿ ಮುಂದೆ ಬರುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಕುಡಿದು ಲಾರಿ ಚಲಾಯಿಸಿ ಅಪಘಾತ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತವಾದ ಬಳಿಕ ಲಾರಿ ಚಾಲಕ ಪರಾರಿಯಾಗಿದೆ.

ಬೆಂಗಳೂರು: ಡಿವೈಡರ್ ಮೇಲೆ ಲಾರಿ ಹಾರಿಸಿದ ಚಾಲಕ, ಮುಂದೆ ಬರುತ್ತಿದ್ದ ಬೈಕ್​ಗೆ ಡಿಕ್ಕಿ; ಸವಾರ ಗಂಭೀರ
ಸಾಂದರ್ಭಿಕ ಚಿತ್ರ
ಜಗದೀಶ ಬಿ.
| Edited By: Rakesh Nayak Manchi|

Updated on: Jan 25, 2024 | 6:54 AM

Share

ಬೆಂಗಳೂರು, ಜ.25: ಲಾರಿ ಚಾಲಕನ ಅವಾಂತರದಿಂದಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುವಂತಾಗಿದೆ. ಡಿವೈಡರ್ ಮೇಲೆ ಹಾರಿ ಮುಂದೆ ಬರುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಬೆಂಗಳೂರು (Bengaluru) ನಗರದಲ್ಲಿ ತಡರಾತ್ರಿ ನಡೆದಿದೆ. ಕುಡಿದು ಲಾರಿ ಚಲಾಯಿಸಿ ಅಪಘಾತ (Accident) ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತವಾದ ಬಳಿಕ ಲಾರಿ ಚಾಲಕ ಪರಾರಿಯಾಗಿದೆ.

ಟಾಟಾ ಇನ್ಸ್ಟಿಟ್ಯೂಟ್ ಬಳಿ ರಾತ್ರಿ 12 ಗಂಟೆ ಸುಮಾರಿಗೆ ಯಶವಂತಪುರದಿಂದ ಬರುತಿದ್ದ ಲಾರಿಯ ಚಾಲಕ ಡಿವೈಡರ್ ಹಾರಿಸಿ ಮಲ್ಲೇಶ್ವರಂ ಕಡೆಯಿಂದ ಬರುತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತಕ್ಕೊಳಗಾದ ಬೈಕ್ ಚಾಲಕನ ಮುಖ ಹಾಗೂ ದೇಹದ ಕೆಲ ಭಾಗಗಳಲ್ಲಿ ರಕ್ತಗಾಯ‌ಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು- ಸೇಲಂ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಧಾರುಣ ಸಾವು

ಲಾರಿಯ ವೇಗದ ಚಾಲನೆ ನಡುವೆ ಮುಂದೆ ಬರುತಿದ್ದ ಎರಡು ಕಾರುಗಳು ಅಪಘಾತದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿವೆ. ಕುಡಿದು ಲಾರಿ ಚಲಾಯಿಸಿ ಅಪಘಾತ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತವಾದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರಿ ಠಾಣಾ ಪೊಲೀಸರು, ಲಾರಿ ವಶಕ್ಕೆ ಪಡೆದು ಚಾಲಕನ ಮಾಹಿತಿ ಕಲೆಹಾಕುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ