AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಯುವಕರೊಂದಿಗೆ ಪ್ರೀತಿಯ ನಾಟಕ; ವಿಷಯ ತಿಳಿದ ಪ್ರಿಯಕರರಿಂದ ಪ್ರೀಯತಮೆಗೆ ಬ್ಲ್ಯಾಕ್​​ಮೇಲ್, ಯುವತಿ ಆತ್ಮಹತ್ಯೆ

ಆಕೆ ಇತ್ತಿಚೀಗೆ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಬ್ಯಾಸ ಮುಗಿಸಿ, ಈಗ ತಾನೆ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದಳು. ಆದ್ರೆ, ಕಾಲೇಜಿನಲ್ಲಿದ್ದಾಗ ಒಬ್ಬ, ಇನ್​ಸ್ಟಾಗ್ರಾಮ್​ನಲ್ಲಿ ಇನ್ನೊಬ್ಬನೆಂದು ಒಂದೇ ಸಮಯದಲ್ಲಿ ಇಬ್ಬಿಬ್ಬರ ಯುವಕರನ್ನು ಪ್ರೀತಿಸಿ, ಅವರ ಜೊತೆ ಮೋಜು ಮಸ್ತಿ ಎಂದು ರಾಜಧಾನಿ ಬೆಂಗಳೂರಿನಲ್ಲಿ ತಿರುಗಾಡಿದ್ದಾಳೆ. ಕೊನೆಗೆ ಪ್ರೀತಿಸಿದವಳ ಮೋಸ ಕಂಡು ದಂಗಾದ ಯುವಕರು, ಪ್ರೀಯತಮೆಗೆ ಬ್ಲ್ಯಾಕ್​​ಮೇಲ್ ಮಾಡಿ ಮಾನಸಿಕ ಹಿಂಸೆ ನೀಡಿದ ಕಾರಣ ಯುವತಿ ಸಾವಿನ ಮನೆ ಸೇರಿದ್ದಾಳೆ.

ಇಬ್ಬರು ಯುವಕರೊಂದಿಗೆ ಪ್ರೀತಿಯ ನಾಟಕ; ವಿಷಯ ತಿಳಿದ ಪ್ರಿಯಕರರಿಂದ ಪ್ರೀಯತಮೆಗೆ ಬ್ಲ್ಯಾಕ್​​ಮೇಲ್, ಯುವತಿ ಆತ್ಮಹತ್ಯೆ
ಮೃತ ಯುವತಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jun 29, 2023 | 7:08 AM

Share

ಚಿಕ್ಕಬಳ್ಳಾಪುರ: ಆಕೆಯ ಹೆಸರು ಜಿ ನಿಹಾರಿಕಾ(22) ಆಂಧ್ರದ ಅನಂತಪುರ ಜಿಲ್ಲೆಯ ಧರ್ಮಾವರಂ ನಗರದ ಸತ್ಯ ಸಾಯಿ ಬಡಾವಣೆಯವರು. ರಾಜಧಾನಿ ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಇಂಜಿನಿಯರಿಂಗ್(Engineering) ಕಾಲೇಜಿನಲ್ಲಿ ಬಿ.ಟೆಕ್ ಮುಗಿಸಿ ಬೆಂಗಳೂರಿ(Bengaluru)ನಲ್ಲಿಯೇ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಜೂ.23ನೇ ತಾರೀಖು ಕೆಲಸಕ್ಕೆ ಹೋದವಳು ವಾಪಸ್ ಪಿ.ಜಿಗೆ ಬಂದು ತವರೂರು ಆಂದ್ರದ ಧರ್ಮಾರಂನತ್ತ ಬಸ್​ನಲ್ಲಿ ಹೊರಟಿದ್ದಳು, ಆದ್ರೆ, ದಾರಿ ಮದ್ಯೆ ಚಿಕ್ಕಬಳ್ಳಾಪುರ(Chikkaballapur)ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಬಸ್ ಇಳಿದು, ನಂತರ ಚಿತ್ರವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಬಳಿ ಬಂದು, ನದಿಗೆ ಹಾರಿ, ಸಾವನ್ನಪ್ಪಿದ್ದಾಳೆ. ಬಳಿಕ ಈಕೆಯ ಶವ ತೇಲಾಡಿದಾಗ ನಿಹಾರಿಕಾ ಆತ್ಮಹತ್ಯೆ ಪ್ರಕರಣ ಬಯಲಾಗಿದೆ.

ಮನೆಗೆ ಬರುತ್ತಿರುವುದಾಗಿ ಪೋನ್ ಮಾಡಿದ್ದ ಮಗಳು ನಿಹಾರಿಕಾ, ನಾಲ್ಕು ದಿನಗಳು ಕಳೆದ್ರೂ, ಮನೆಗೆ ಬಂದಿಲ್ಲವೆಂದು ಆತಂಕಗೊಂಡ ಆಕೆಯ ಪೋಷಕರು, ಬಾಗೇಪಲ್ಲಿ ಸುತ್ತಮುತ್ತಲ ಪ್ರದೇಶಗಳ ಸಂಬಂಧಿಗಳಿಗೆ ಮಾಹಿತಿ ನೀಡಿದ್ದಾರೆ. ಅಷ್ಟೊತ್ತಿಗೆ ಬಾಗೇಪಲ್ಲಿ ಬಳಿ ಯುವತಿ ಶವ ಸಿಕ್ಕ ಮಾಹಿತಿನ್ನು ಆಧಾರಿಸಿ ಬಂದು ನೋಡಿದಾಗ ನಿಹಾರಿಕ ಮೃತ ಪಟ್ಟಿರುವುದು ಗೊತ್ತಾಗಿದೆ. ಇನ್ನು ನಿಹಾರಿಕಾ ಸಾವಿನ ಹಿಂದೆ ತ್ರೀಕೋನ ಪ್ರೇಮ ಪ್ರಕರಣ ಬಯಲಾಗಿದೆ.

ಇದನ್ನೂ ಓದಿ:ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ; ಮನನೊಂದ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ನಿಹಾರಿಕಾ ಸಾವಿನ ಹಿಂದೆ ತ್ರೀಕೋನ ಪ್ರೇಮ ಪ್ರಕರಣ

ನಿಹಾರಿಕ ಕಾಲೇಜಿನಲ್ಲಿದ್ದಾಗ ಆಂಧ್ರ ಮೂಲದ ಕ್ಲಾಸ್​ಮೆಂಟ್ ಚವ್ವ ವಂಶಿಧರ್​ನನ್ನು ಲವ್ ಮಾಡಿ, ಆತನ ಜೊತೆ ಸುತ್ತಾಡಿದ್ದಾಳೆ. ಅಷ್ಟೇ ಅಲ್ಲದೇ ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಆಂಧ್ರದ ಅಜಯ್ ಎನ್ನುವಾತನ ಜೊತೆಗೂ ಕೂಡ ಪ್ರೀತಿ ಆಟವಾಡಿದ್ದಾಳೆ. ಒಬ್ಬಳೆ ನಿಹಾರಿಕಾ ಇಬ್ಬರನ್ನು ಪ್ರೀತಿ ಮಾಡಿ ಮೋಸ ಮಾಡಿದ ವಿಚಾರ ಇಬ್ಬರು ಹಿರೋಗಳಿಗೆ ಗೊತ್ತಾಗಿದೆ. ಬಳಿಕ ಇಬ್ಬರು ಯುವಕರು ಪ್ರತಿದಿನ ನಿಹಾರಿಕಳಿಗೆ ಬ್ಲ್ಯಾಕ್​ಮೇಲ್​ ಮಾಡಿ, ಮಾನಸಿಕ ಹಿಂಸೆ ಕಿರಕುಳ ನೀಡಿದ್ದಾರಂತೆ. ಇದ್ರಿಂದ ಮನನೊಂದ ನಿಯಾರಿಕಾ ಬಾಗೇಪಲ್ಲಿ ಬಳಿ ಆಗಮಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಒಟ್ಟಿನಲ್ಲಿ ಕಾಲೇಜಿನಲ್ಲಿ ಒಬ್ಬ, ಹೊರಗಡೆ ಇನ್ನೊಬ್ಬ ಎಂದು ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಜು ಮಸ್ತಿ ಮಾಡಲು ಹೋದ ವಿದ್ಯಾವಂತ ಯುವತಿ, ಪ್ರೀತಿಯ ಮಾಯೆಗೆ ಸಿಲುಕಿ ಕೊನೆಗೆ ಕಿರಕುಳ, ಅವಮಾನ, ಮಾನಸಿಕ ಹಿಂಸೆ ಅನುಭವಿಸಿ ಅದರಿಂದ ಪಾರಾಗಲು ಆತ್ಮಹತ್ಯೆಯ ಹಾದಿ ಹಿಡಿದಿದ್ದು, ದುರಂತ. ಇನ್ನು ಈ ಕುರಿತು ಬಾಗೇಪಲ್ಲಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:07 am, Thu, 29 June 23

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್