Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮತ್ತೊಂದು ಭಯಾನಕ ಕೃತ್ಯ; ಪ್ರೇಯಸಿಯನ್ನು ಕೊಂದ 1 ದಿನ ಕಳೆದು ಪರಾರಿಯಾದ ಪ್ರಿಯಕರ!

ಬೆಂಗಳೂರು ನಗರದಲ್ಲಿ ಮತ್ತೊಂದು ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ಪ್ರಿಯಕರನ ಕೈಯಿಂದ ಪ್ರೇಯಸಿಯ ಬರ್ಬರ ಹತ್ಯೆಯಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿ ದುರಂತ ಅಂತ್ಯವಾಗಿದೆ. ಹೋಟೆಲ್​ನಲ್ಲಿ ತಂಗಿರುವಾಗಲೇ ಪ್ರಿಯತಮೆಯನ್ನು ಕೊಂದು ಪ್ರಿಯಕರ ಎಸ್ಕೇಪ್ ಆಗಿದ್ದಾನೆ.

ಬೆಂಗಳೂರಲ್ಲಿ ಮತ್ತೊಂದು ಭಯಾನಕ ಕೃತ್ಯ;  ಪ್ರೇಯಸಿಯನ್ನು ಕೊಂದ 1 ದಿನ ಕಳೆದು ಪರಾರಿಯಾದ ಪ್ರಿಯಕರ!
ಮಾಯಾ ಗೊಗೋಯ್
Follow us
ರಾಚಪ್ಪಾಜಿ ನಾಯ್ಕ್
| Updated By: ರಮೇಶ್ ಬಿ. ಜವಳಗೇರಾ

Updated on: Nov 26, 2024 | 3:21 PM

ಬೆಂಗಳೂರು, (ನವೆಂಬರ್ 26): ಪ್ರಿಯಕನೋರ್ವ ತನ್ನ ಪ್ರೇಯಸಿಯನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಇಂದಿರಾ ನಗರದ ಸರ್ವಿಸ್ ಅಪಾರ್ಟ್ ಮೆಂಟ್​ನಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗೋಯಿ ಎಂದು ಗುರುತಿಸಲಾಗಿದ್ದು, ಮಾಯಾಳನ್ನು ಕೊಂದು ಆರವ್ ಹಾರ್ನಿ ಎನ್ನುವಾತ​ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಇಂದಿರಾನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

ಈಕೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡು ಹೆಚ್​ಎಸ್​ಆರ್​ ಲೇಔಟ್​​ನಲ್ಲಿ ವಾಸವಿದ್ದ ಮಾಯಾ ಗೊಗೋಯಿ, ನವೆಂಬರ್ 23ರಂದು ಮಾಯಾ ಹಾಗೂ ಆಕೆಯ ಪ್ರಿಯಕರ ಆರವ್ ಹಾರ್ನಿ ಇಂದಿರಾನಗರದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ರೂಮ್ ಬುಕ್​ ಮಾಡಿಕೊಂಡು ತಂಗಿದ್ದರು. ಆದ್ರೆ, ಅದೇನಾಯ್ತೋ ಏನೋ ನಿನ್ನೆ (ನವೆಂಬರ್ 25) ಸಂಜೆ ಪ್ರಿಯಕರ ಆರವ್ ಹಾರ್ನಿ, ತನ್ನ ಪ್ರೇಯಸಿ ಮಾಯಾಳನ್ನು ಕೊಂದು ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಇಂದಿರಾನಗರ ಪೊಲೀಸರು ದೌಡಾಯಿಸಿ ಪರಿಶೀನಲೆ ನಡೆಸಿದ್ದು ಕೊಲೆಗೆ ನಿಖರ ಕಾರಣ ಏನು ಎನ್ನುವುದನ್ನು ತನಿಖೆ ನಡೆಸಿದ್ದಾರೆ. ಆದ್ರೆ, ಹೋಟೆಲ್​ ರೂಮ್ ಒಳಗ್ಗೆ ಇಬ್ಬರೇ ಹೋಗಿರುವುದರಿಂದ ಪ್ರಿಯಕರನಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಪ್ರಾಥಮಿಕ ಮಾಹಿತಿ ಸಂಗ್ರಹ ಮಾಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ಅಪಾರ್ಟ್ ಮೆಂಟ್ ಗೆ ಆಗಮಿಸಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವೆಂಬರ್ 23ರಂದು ಮಧ್ಯಾಹ್ನ ಮಾಯಾ ಗೊಗೋಯ್ ಹಾಗೂ ಆರವ್ ಹಾರ್ನಿ ಇಬ್ಬರು ಒಟ್ಟಿಗೆ ತಂಗಲು ಅಪಾರ್ಟ್ ಮೆಂಟ್ ಗೆ ಆಗಮಿಸಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 24 ರಂದೇ ಮಾಯಾ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಕೊಲೆ ಬಳಿಕ ಅದೇ ರೂಮ್ ನಲ್ಲಿಯೇ ಉಳಿದುಕೊಂಡಿದ್ದಾನೆ. ಅಲ್ಲಿಯೇ ಕೂತು ಸಿಗರೇಟ್ ಸೇದಿದ್ದಾನೆ. ಮೃತದೇಹ ಜೊತೆಯಲ್ಲೇ ಕಾಲ ಕಳೆದಿದ್ದು, ಇಂದು(ನವೆಂಬರ್ 26) ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಸರ್ವಿಸ್ ಅಪಾರ್ಟ್ ಮೆಂಟ್​ನಿಂದ ಕಾಲ್ಕಿತ್ತಿದ್ದಾನೆ.

ಮೃತದೇಹ ಪೀಸ್ ಮಾಡೋ ಪ್ಲಾನ್ ಇತ್ತಾ?

ಹೌದು..ಪ್ರೇಯಸಿಯ ಮೃತದೇಹವನ್ನು ಪೀಸ್ ಪೀಸ್​ ಮಾಡುವ ಏನಾದರೂ ಪ್ಲಾನ್ ಮಾಡಿದ್ದ ಎನ್ನುವ ಅನುಮಾನ ಇಂದಿರಾನಗರ ಪೊಲೀಸರಿಗೆ ಬಂದಿದೆ. ಯಾಕಂದ್ರೆ, ಒಂದು ದಿನ ಮೃತದೇಹದ ಜೊತೆಗೆ ಕಾಲ‌ ಕಳೆದಿದ್ದಾನೆ. ಹಾಗಾಗಿ ಮೃತದೇಹ ಪೀಸ್ ಪೀಸ್ ಮಾಡಿರುವ ಪ್ಲಾನ್ ಮಾಡಿದ್ದ ಎಂಬ ಅನುಮಾನ ವ್ಯಕ್ತವಾಗಿದೆ. ಕೊನೆಗೆ ಪ್ಲಾನ್ ಫೇಲ್ ಆಗಿ ಮೃತದೇಹ ಬಿಟ್ಟು ಪಾರಾರಿಯಾಗಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ