AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮ್ಮಿಲನಕ್ಕೆ ಆಹ್ವಾನಿಸಿ ಗೆಳೆಯನ ಮರ್ಮಾಂಗವನ್ನೇ ಕತ್ತರಿಸಿದ ಗೆಳತಿ, ಕಾರಣ ಕೇಳಿ ಪೊಲೀಸರೇ ದಂಗು!

ಯುವತಿ-ಯುವಕನೋರ್ವ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಪ್ರೀತಿ ಗಾಢವಾಗಿದ್ದು, ಈ ನಡುವೆ ಇಬ್ಬರು ದೈಹಿಕ ಸಂಪರ್ಕವೂ ಬೆಳೆಸಿದ್ದಾರೆ. ಆದರೆ, ಹೀಗೆ ಒಂದು ದಿನ ಸಮ್ಮಿಲನಕ್ಕೆ ಬಂದ ತನ್ನ ಬಾಯ್‌ಫ್ರೆಂಡ್‌ನ ಮರ್ಮಾಂಗವನ್ನೇ ಕತ್ತರಿಸಿ ಟಾಯ್ಲೆಟ್‌ಗೆ ಹಾಕಿ ಫ್ಲಶ್ ಮಾಡಿದ್ದಾಳೆ. ಇದರ ಹಿಂದಿನ ಕಾರಣ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ಅಷ್ಟಕ್ಕೂ ಆಗಿದ್ದೇನು ಎನ್ನುವುದನ್ನು ನೋಡಿ.

ಸಮ್ಮಿಲನಕ್ಕೆ ಆಹ್ವಾನಿಸಿ ಗೆಳೆಯನ ಮರ್ಮಾಂಗವನ್ನೇ ಕತ್ತರಿಸಿದ ಗೆಳತಿ, ಕಾರಣ ಕೇಳಿ ಪೊಲೀಸರೇ ದಂಗು!
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:Jul 01, 2024 | 9:38 PM

Share

ಪಾಟ್ನಾ(ಜು.01): ಬಾಯ್​​ಫ್ರಂಡ್ ಸಮ್ಮಿಲನಕ್ಕೆ ಬಂದ ವೇಳೆ ಗೆಳತಿ ಆತನ ಮರ್ಮಾಂಗವನ್ನು ಕತ್ತರಿಸಿ ಟಾಯ್ಲೆಟ್‌ಗೆ ಹಾಕಿ ಫ್ಲಶ್ ಮಾಡಿದ್ದಾಳೆ. ಈ ಘಟನೆ ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ. ಮಧೌರದ 12ನೇ ವಾರ್ಡ್‌ನ ಕೌನ್ಸಿಲರ್‌ ವೇದಪ್ರಕಾಶ್‌ಗೆ ಅದೇ ವಲಯದ ನರ್ಸಿಂಗ್ ಹೋಮ್ ಮಾಲಕಿ ಮೇಲೆ ಪ್ರೇಮಾಂಕುರವಾಗಿದೆ. ಬಳಿಕ ಇಬ್ಬರ ಪ್ರೀತಿ ಗಾಢವಾಗಿ ಬೆಳೆದಿದೆ. ಎಷ್ಟರ ಮಟ್ಟಿಗೆ ಅಂದರೆ ಇಬ್ಬರ ನಡುವೆಯೂ ದೈಹಿಕ ಸಂಪರ್ಕವೂ ಸಹ ಬೆಳೆದಿದೆ. ಇದರ ನಡುವೆ ಗೆಳತಿ ಮದ್ವೆಯಾಗುವಂತೆ ಕೇಳಿಕೊಂಡಿದ್ದಾಳೆ. ಆದ್ರೆ, ವೇದಪ್ರಕಾಶ್‌ ಆಗೋಣ ಆಗೋಣ ಎನ್ನುತ್ತಲ್ಲೇ ಮುಂದೂಡಿಕೊಂಡು ಬಂದಿದ್ದಾನೆ. ಕೊನೆಗೆ ಗೆಳತಿಯ ಒತ್ತಾಯಕ್ಕೆ ಮಣಿದು ಮದುವೆಗೆ ಒಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ಯುವತಿ ಮನೆಯಲ್ಲಿ ಮದುವೆ ತಯಾರಿ ಸಹ ನಡೆದಿತ್ತು. ಇನ್ನೇನು ಮದ್ವೆ ಡೇಟ್ ಸಮೀಪ ಬರುತ್ತಿದ್ದಂತೆಯೇ ಮದುವೆಯಾಗಲ್ಲ ಎಂದು ಖ್ಯಾತೆ ತೆಗೆದಿದ್ದಾನೆ. ಇದರಿಂದ ಕೋಪಗೊಂಡ ಗೆಳತಿ ನಯವಾಗಿ ಮಾತನಾಡಿ ಲೈಂಗಿಕ ಕ್ರಿಯೆ ಆಹ್ವಾನಿಸಿ ಆತನ ಮರ್ಮಾಂಗವನ್ನು ಕತ್ತರಿಸಿ ಸಿಟ್ಟು ತೀರಿಸಿಕೊಂಡಿದ್ದಾಳೆ. ಈ ಸಂಬಂಧ ಪೊಲೀಸರು ಇಬ್ಬರ ವಿರುದ್ದವೂ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಬಾಯ್‌ಫ್ರೆಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಗೆಳತಿ ಜೈಲು ಪಾಲಾಗಿದ್ದಾಳೆ.

ಪ್ರಕರಣ ಹಿನ್ನೆಲೆ

ಗಳೆತಿ ಮದುವೆಗೆ ಹಲವು ಬಾರಿ ಒತ್ತಾಯಿಸಿದ್ದಾಳೆ. ಈ ವೇಳೆ ಒಂದೊಂದೆ ಕಾರಣ ನೀಡಿದ ವೇದಪ್ರಕಾಶ್ ಮದುವೆಯನ್ನು ಮುಂದೂಡಿದ್ದಾನೆ. ಪ್ರೀತಿ, ಲೈಂಗಿಕ ಸಂಪರ್ಕ ಸುದೀರ್ಘ ವರ್ಷಗಳಿಂದ ಮುಂದುವರಿಯುತ್ತಾ ಬಂದಿದೆ. ಕೊನೆಗೆ ಮದುವೆ ಗೆಳತಿಯ ಒತ್ತಾಯ ಹೆಚ್ಚಾಗಿದೆ. ಹಲವು ಬಾರಿ ಒತ್ತಾಯಿಸಿದ ಕಾರಣ ಮದುವೆಗೆ ಒಪ್ಪಿಕೊಂಡಿದ್ದಾನೆ. ಇತ್ತ ತಯಾರಿಗಳು ಆರಂಭಗೊಂಡಿದೆ. ಮದುವೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಮಂಟಪ ಬುಕ್ ಮಾಡಲಾಗಿದ್ದು, ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಆದ್ರೆ, ಮದುವೆ ದಿನಾಂಕ ಹತ್ತಿರಬರುತ್ತಿದ್ದಂತೆ ನಾನು ಮದುವೆಯಾಗಲ್ಲ ಎಂದು ಹೊಸ ವರಸೆ ತೆಗೆದಿದ್ದಾನೆ. ಅಲ್ಲದೇ ನಾವು ಹೀಗೆ ಇರೋಣ, ಮದುವೆ ಯಾಕೆ ಎಂದು ಒತ್ತಾಯಿಸಿದ್ದಾನೆ.

ಇದನ್ನೂ ಓದಿ: Crime News: ಯುವಕನ ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು, ನಗ್ನ ವಿಡಿಯೋ ರೆಕಾರ್ಡ್​ ಮಾಡಿದ ಮಾಲೀಕ

ಇನ್ನು ವೇದಪ್ರಕಾಶ್ ಮನ ಒಲಿಸಲು ಗೆಳತಿ ಸಹ ಹಲವು ಪ್ರಯತ್ನ ಮಾಡಿದ್ದಾಳೆ. ಆದರೆ ಆತ ಮಾತ್ರ ಮದುವೆ ಯಾಕೆ, ಹೀಗೆ ಇದ್ದರೆ ಒಕೆ ಎನ್ನುತ್ತಲೇ ಬಂದಿದ್ದಾನೆ. ಅಲ್ಲದೇ ಫಿಕ್ಸ್ ಆಗಿರುವ ಮದುವೆಯನ್ನು ರದ್ದು ಮಾಡುವಂತೆ ಫೋನ್​ ಮಾಡಿ ಹೇಳಿದ್ದಾನೆ. ಇದರಿಂದ ಕೋಪಗಗೊಂಡ ಗೆಳತಿ, ಫೋನ್‌ನಲ್ಲಿ ಬೇಡ, ಮುಖಾಮುಖಿಯಾಗಿ ಭೇಟಿ ಮಾತನಾಡೋಣ ಬಾ ಎಂದು ಕರೆದಿದ್ದಾಳೆ. ಅಲ್ಲದೇ ಭೇಟಿಯಾದ ಮೊದಲು ನಾವು ಎಂದಿನಂತೆ ಲೈಂಗಿಕ ಕ್ರಿಯೆಯಲ್ಲಿ ತೊಡಗೋಣ, ಬಳಿಕ ಮದುವೆ ಕುರಿತು ಮಾತನಾಡೋಣ ಎಂದಿದ್ದಾಳೆ.

ಇದರಿಂದ ಫುಲ್​ ಖುಷಿ ಖುಷಿಯಿಂದ ಬಂದು ಗೆಳತಿಯೊಂದಿಗೆ ಸಮ್ಮಿಲನಕ್ಕೆ ಮುಂದಾಗಿದ್ದಾನೆ. ಮೊದಲೇ ಆಕ್ರೋಶಗೊಂಡಿದ್ದ ಗೆಳತಿ, ವೇದಪ್ರಕಾಶ್ ಮರ್ಮಾಂಗ ಕತ್ತರಿಸಿದ್ದಾಳೆ. ಬಳಿಕ ಟಾಯ್ಲಟ್ ಹಾಕಿ ಫ್ಲಶ್ ಮಾಡಿದ್ದಾಳೆ. ಇತ್ತ ಚೀರಾಡುತ್ತಾ ಪೊಲೀಸರಿಗೆ ಫೋನ್ ಮಾಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ವೇದಪ್ರಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇತ್ತ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು, ಆತನ ಮರ್ಮಾಂಗ ಕತ್ತರಿಸಿದ್ದಕೆ ಯಾವುದೇ ಪಶ್ಚಾತ್ತಾಪ ಇಲ್ಲ. ಆತ ಇನ್ನೆಂದು ದೈಹಿಕ ಸಂಪರ್ಕ ಮಾಡಬಾರದು. ಪ್ರೀತಿ ನಾಟಕವಾಡಿ ದೈಹಿಕ ಸಂಪರ್ಕಕ್ಕೆ ಮಾತ್ರ ಒಕೆ ಎನ್ನುವ ಈತ ದೊಡ್ಡ ಪಾಪಿ ಎಂದಿದ್ದಾಳೆ. ಈ ಮಾತು ಕೇಳಿ ಪೊಲೀಸರೇ ಒಂದು ಕ್ಷಣ ಕಕ್ಕಾಬಿಕ್ಕಿಯಾಗಿದ್ದಾರೆ.

Published On - 9:35 pm, Mon, 1 July 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!