AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವಿವಾಹ: ಪರ ಪುರುಷನೊಂದಿಗೆ ಪತ್ನಿ ಪರಾರಿ: ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ

ಮನಸಾರೆ ಪ್ರೀತಿಸಿ ಮದುವೆಯಾಗಿದ್ದರೂ ಪತ್ನಿ ಪರ ಪುರಷನೊಂದಿಗೆ ಪರಾರಿಯಾಗಿದ್ದು, ತನ್ನ ಕೆಲಸ ಜೊತೆಗೆ ಮಕ್ಕಳ ಪೋಷಣೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರೇಮ ವಿವಾಹ: ಪರ ಪುರುಷನೊಂದಿಗೆ ಪತ್ನಿ ಪರಾರಿ: ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: May 12, 2023 | 5:35 PM

Share

ಆನೇಕಲ್(ಬೆಂಗಳೂರು):  ತಂದೆಯೊಬ್ಬ ತನ್ನ ಇಬ್ಬರು ಚಿಕ್ಕ ಮಕ್ಕಳನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಆನೇಕಲ್​ನ ಕೊಪ್ಪ ಸಮೀಪದ ನಿರ್ಮಣ ಬಡಾವಣೆಯಲ್ಲಿ ನಡೆದಿದೆ. ಬಿಟಿಎಂ ಬಡಾವಣೆ ನಿವಾಸಿ ಹರೀಶ್ ( 35) ಪ್ರಜ್ವಲ್(6) ರಿಷಬ್(4) ಮೃತರು. ಮೇ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತ್ನಿಯ ಶೋಕಿ ಜೀವನಕ್ಕೆ ಬೇಸತ್ತು ತನ್ನಿಬ್ಬರ ಮಕ್ಕಳನ್ನು ಕೊಂದು ಬಳಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೂ ಮೊದಲು ಸ್ನೇಹಿತರೊಬ್ಬರಿಗೆ ವಾಟ್ಸಾಪ್ ಕಾಲ್ ಮಾಡಿದ್ದಾನೆ. ತಾನು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗುತ್ತಿದ್ದು, ಬರಬೇಕಾದ ಹಣ ಮತ್ತು ಎಲ್ಐಸಿ ಬಾಂಡ್ ಪತ್ನಿಗೆ ಕೊಡಿ ಎಂದು ಹೇಳಿದ್ದ. ಕೂಡಲೇ ಹರೀಶ್ ಇರುವ ಲೊಕೇಷನ್ ಹುಡುಕಾಡಿದ್ದು, ಕೊನೆಗೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.

2007ರಲ್ಲಿ ಅಕ್ಕನ ಮಗಳು ಅನನ್ಯಗಳ ಜೊತೆ ಪ್ರೇಮ ವಿವಾಹವಾಗಿತ್ತು. ವಿವಾಹದ ಬಳಿಕ . ಪತ್ನಿಯ ಹೈ ಫೈ ಜೀವನದಿಂದ ಗಲಾಟೆಯಾಗಿತ್ತು. 2015ರಲ್ಲಿ ಹಿರಿಯ ಸಮ್ಮುಖದಲ್ಲಿ ರಾಜಿ ಸಂಧಾನ ಸಹ ಮಾಡಲಾಗಿತ್ತು. ಆದರೂ ಜಗಳ ಮಾತ್ರ ನಡೆಯುತ್ತಲೇ ಇತ್ತು. ಹರೀಶ್ ತಮ್ಮ ಪೋಷಕರ ಮನೆ ಬಿಟ್ಟು ಪ್ರತ್ಯೇಕ ಮನೆ ಮಾಡಿದ್ದ. ಇದಾದ ಕೆಲವೇ ದಿನಗಳಲ್ಲಿ ಪತ್ನಿ ಅನನ್ಯ ಮನೆ ಬಿಟ್ಟು ಪರ ಪುರುಷನೊಂದಿಗೆ ಪರಾರಿಯಾಗಿದ್ದಳು. ಇದರಿಂದ ತಬ್ಬಲಿಯಾದ ಮಕ್ಕಳನ್ನು ಹರೀಶ್ ಪೋಷಣೆ ಮಾಡುತ್ತಿದ್ದ.ಆದರೂ ಪತ್ನಿ ಪದೇ ಪದೇ ಹಣಕ್ಕೆ ಬೇಡಿಕೆ. ನೀಡದಿದ್ದರೆ ಮನೆ ಬಳಿ ಬಂದು ರಂಪಾಟ ಮಾಡುತ್ತಿದ್ದಳು. ಕೆಲಸದ ಜೊತೆ ಮಕ್ಕಳ ಪೋಷಣೆ ಬಗ್ಗೆ ಹರೀಶ್ ಮನನೊಂದಿದ್ದ. ಕೊನೆಗೆ ತನ್ನಿಬ್ಬರ ಮಕ್ಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ