AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವಿವಾಹ: ಪರ ಪುರುಷನೊಂದಿಗೆ ಪತ್ನಿ ಪರಾರಿ: ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ

ಮನಸಾರೆ ಪ್ರೀತಿಸಿ ಮದುವೆಯಾಗಿದ್ದರೂ ಪತ್ನಿ ಪರ ಪುರಷನೊಂದಿಗೆ ಪರಾರಿಯಾಗಿದ್ದು, ತನ್ನ ಕೆಲಸ ಜೊತೆಗೆ ಮಕ್ಕಳ ಪೋಷಣೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರೇಮ ವಿವಾಹ: ಪರ ಪುರುಷನೊಂದಿಗೆ ಪತ್ನಿ ಪರಾರಿ: ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: May 12, 2023 | 5:35 PM

Share

ಆನೇಕಲ್(ಬೆಂಗಳೂರು):  ತಂದೆಯೊಬ್ಬ ತನ್ನ ಇಬ್ಬರು ಚಿಕ್ಕ ಮಕ್ಕಳನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಆನೇಕಲ್​ನ ಕೊಪ್ಪ ಸಮೀಪದ ನಿರ್ಮಣ ಬಡಾವಣೆಯಲ್ಲಿ ನಡೆದಿದೆ. ಬಿಟಿಎಂ ಬಡಾವಣೆ ನಿವಾಸಿ ಹರೀಶ್ ( 35) ಪ್ರಜ್ವಲ್(6) ರಿಷಬ್(4) ಮೃತರು. ಮೇ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತ್ನಿಯ ಶೋಕಿ ಜೀವನಕ್ಕೆ ಬೇಸತ್ತು ತನ್ನಿಬ್ಬರ ಮಕ್ಕಳನ್ನು ಕೊಂದು ಬಳಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೂ ಮೊದಲು ಸ್ನೇಹಿತರೊಬ್ಬರಿಗೆ ವಾಟ್ಸಾಪ್ ಕಾಲ್ ಮಾಡಿದ್ದಾನೆ. ತಾನು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗುತ್ತಿದ್ದು, ಬರಬೇಕಾದ ಹಣ ಮತ್ತು ಎಲ್ಐಸಿ ಬಾಂಡ್ ಪತ್ನಿಗೆ ಕೊಡಿ ಎಂದು ಹೇಳಿದ್ದ. ಕೂಡಲೇ ಹರೀಶ್ ಇರುವ ಲೊಕೇಷನ್ ಹುಡುಕಾಡಿದ್ದು, ಕೊನೆಗೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.

2007ರಲ್ಲಿ ಅಕ್ಕನ ಮಗಳು ಅನನ್ಯಗಳ ಜೊತೆ ಪ್ರೇಮ ವಿವಾಹವಾಗಿತ್ತು. ವಿವಾಹದ ಬಳಿಕ . ಪತ್ನಿಯ ಹೈ ಫೈ ಜೀವನದಿಂದ ಗಲಾಟೆಯಾಗಿತ್ತು. 2015ರಲ್ಲಿ ಹಿರಿಯ ಸಮ್ಮುಖದಲ್ಲಿ ರಾಜಿ ಸಂಧಾನ ಸಹ ಮಾಡಲಾಗಿತ್ತು. ಆದರೂ ಜಗಳ ಮಾತ್ರ ನಡೆಯುತ್ತಲೇ ಇತ್ತು. ಹರೀಶ್ ತಮ್ಮ ಪೋಷಕರ ಮನೆ ಬಿಟ್ಟು ಪ್ರತ್ಯೇಕ ಮನೆ ಮಾಡಿದ್ದ. ಇದಾದ ಕೆಲವೇ ದಿನಗಳಲ್ಲಿ ಪತ್ನಿ ಅನನ್ಯ ಮನೆ ಬಿಟ್ಟು ಪರ ಪುರುಷನೊಂದಿಗೆ ಪರಾರಿಯಾಗಿದ್ದಳು. ಇದರಿಂದ ತಬ್ಬಲಿಯಾದ ಮಕ್ಕಳನ್ನು ಹರೀಶ್ ಪೋಷಣೆ ಮಾಡುತ್ತಿದ್ದ.ಆದರೂ ಪತ್ನಿ ಪದೇ ಪದೇ ಹಣಕ್ಕೆ ಬೇಡಿಕೆ. ನೀಡದಿದ್ದರೆ ಮನೆ ಬಳಿ ಬಂದು ರಂಪಾಟ ಮಾಡುತ್ತಿದ್ದಳು. ಕೆಲಸದ ಜೊತೆ ಮಕ್ಕಳ ಪೋಷಣೆ ಬಗ್ಗೆ ಹರೀಶ್ ಮನನೊಂದಿದ್ದ. ಕೊನೆಗೆ ತನ್ನಿಬ್ಬರ ಮಕ್ಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್