AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾದಿನಿ ಮೇಲೆ ಕಣ್ಣಾಕಿ ಹೆಣವಾದ ಬಾವ: ಮಂಡ್ಯದಲ್ಲೊಂದು ಭಯಾನಕ ಕ್ರೈಂ ಸ್ಟೋರಿ

ಅವರಿಬ್ಬರೂ ಒಂದೇ ಮನೆಯ ಅಳಿಯಂದಿರು. ಸಂಬಂಧಿಕರಿಗಿಂತಲೂ ಹೆಚ್ಚಾಗಿ ಸ್ನೇಹಿತರ ರೀತಿಯಲ್ಲಿ ಇದ್ದರು. ಆದರೆ ಅವರಿಬ್ಬರ ನಡುವೆ ಒಬ್ಬನಿಗೆ ತನ್ನ ಪತ್ನಿಯ ಅನೈತಿಕ ಸಂಬಂಧದ ವಾಸನೆ ಹೊಡೆದಿತ್ತು. ಹೀಗಾಗಿ ತನ್ನ ಪತ್ನಿಯ ಅಕ್ಕನ ಗಂಡನನ್ನ ಪಕ್ಕ ಪ್ಲ್ಯಾನ್ ಮಾಡಿ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಈ ಕುರಿತ ಒಂದು ವರದಿ ಇಲ್ಲಿದೆ.

ನಾದಿನಿ ಮೇಲೆ ಕಣ್ಣಾಕಿ ಹೆಣವಾದ ಬಾವ: ಮಂಡ್ಯದಲ್ಲೊಂದು ಭಯಾನಕ ಕ್ರೈಂ ಸ್ಟೋರಿ
ನಾಗೇಶ್( ಎಡಕ್ಕೆ ಕೊಲೆಯಾದ ವ್ಯಕ್ತಿ), ನಾಗೇಶ್( ಬಲಗಡೆ ಆರೋಪಿ)
ಪ್ರಶಾಂತ್​ ಬಿ.
| Edited By: |

Updated on: Dec 08, 2024 | 6:21 PM

Share

ಮಂಡ್ಯ, (ಡಿಸೆಂಬರ್ 08):  ತನ್ನ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕೆಯ ಮೇಲೆ ಹೆಂಡತಿಯ ಅಕ್ಕನ ಗಂಡನನ್ನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಕನ್ನಹಟ್ಟಿ ಗ್ರಾಮದ ಬಳಿ‌ ನಡೆದಿದೆ. ಮಂಡ್ಯ ತಾಲೂಕಿನ ಮುದಗಂದೂರು ಗ್ರಾಮದ ನಾಗೇಶ್(45) ಕೊಲೆಯಾದ ದುರ್ದೈವಿ. ಇನ್ನು ಮಂಡ್ಯ ತಾಲೂಕು ಹುಚ್ಚೇಗೌಡನಕೊಪ್ಪಲು ಗ್ರಾಮದ ನಾಗೇಶ್(43)ಕೊಲೆ ಆರೋಪಿ. ಕೊಲೆ ಆರೋಪಿ ನಾಗೇಶ್​ನ ಪತ್ನಿ ಜೊತೆ ಭಾವನೇ ಆದ ಮತ್ತೊಬ್ಬ ನಾಗೇಶ್ (ಹತ್ಯೆಯಾದ ವ್ಯಕ್ತಿ) ಎಂಬಾತ ಅನೈತಿಕ‌ ಸಂಬಂಧ ಹೊಂದಿದ್ದ. ಇದರಿಂದ ಕೆರಳಿದ ಆರೋಪಿ ನಾಗೇಶ್, ಆತನನ್ನು ಮುಗಿಸಲೇಬೇಕು ಎಂದು ಪಕ್ಕ ಪ್ಲ್ಯಾನ್ ಮಾಡಿ ಡಿಸೆಂಬರ್ 3 ರಂದು‌ ಬೆಂಗಳೂರಿನಿಂದ ಕರೆದುಕೊಂಡು ಬಂದು ಕಂಠಪೂರ್ತಿ ಕುಡಿಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಅಂದಹಾಗೆ ಕೊಲೆಯಾದ ನಾಗೇಶ್ ಹಾಗೂ ಆರೋಪಿ ನಾಗೇಶ್ ನ ಎರಡು ಕುಟುಂಬಗಳು ಬೆಂಗಳೂರಿನ ನಾಗಸಂದ್ರದಲ್ಲಿ ವಾಸವಾಗಿದ್ದರು. ಒಂದೇ ಏರಿಯಾದಲ್ಲಿ ಮನೆ ಮಾಡಿಕೊಂಡು ಇದ್ದರು. ಕೊಲೆಯಾದ ನಾಗೇಶ್ ಆಟೋ ಚಾಲಕನಾಗಿದ್ದರೇ, ಆರೋಪಿ ನಾಗೇಶ್ ಪ್ಯಾಕರ್ಸ್ ಅಂಡ್ ಮೂವರ್ಸ್ ಕೆಲಸ ಮಾಡುತ್ತಿದ್ದ. ಒಂದೇ ಮನೆಯ ಅಳಿಯಂದಿರೂ ಆಗಿದ್ದರು ಸಾಕಷ್ಟು ಸ್ನೇಹಿತರ ತರ ಇದ್ದರು. ಕಳೆದ ಹಲವು ದಿನಗಳಿಂದಲೂ ಒಟ್ಟಿಗೆ ಪಾರ್ಟಿ ಕೂಡ ಮಾಡುತ್ತಿದ್ದರು.

ಇದನ್ನೂ ಓದಿ: ಗುಟ್ಟು ರಟ್ಟು ಮಾಡಿದ ಮೈದುನನ ಸ್ಟೇಟಸ್​: ಸಾವಿಗೆ ಶರಣಾದ ಮಹಿಳೆ!

ವಾರದ ಹಿಂದೆ ಸಹ ಒಟ್ಟಿಗೆ ಮಲೆ ಮಹದೇಶ್ವರ ಸ್ವಾಮಿ ಬೆಟ್ಟಕ್ಕೂ ಹೋಗಿ ಬಂದಿದ್ದರು. ಆದರೆ ಆರೋಪಿ ನಾಗೇಶ್ ಗೆ ಪತ್ನಿಯ ಶೀಲದ ಮೇಲೆ ಶಂಕೆ. ಸ್ವತಃ ಬಾವನೇ ನಾದಿನಿ ಜೊತೆ ಆಕ್ರಮ ಸಂಬಂಧವೊಂದಿದ್ದಾನೆ ಎಂಬ ಶಂಕೆ‌ ಇತ್ತು. ಹೀಗಾಗಿ ಡಿಸೆಂಬರ್ 3 ರಂದು ಬೆಂಗಳೂರಿನಿಂದ ಕರೆದುಕೊಂಡು ಬಂದು ಕಂಠಪೂರ್ತಿ ‌ಗ್ರಾಮದ ಸಮೀಪವೇ ಕರೆದುಕೊಂಡು ಬಂದಿದ್ದಾನೆ.

ಬಳಿಕ ರಸ್ತೆ ಬದಿಯ ನಿರ್ಜನ ಪ್ರದೇಶದಲ್ಲಿ ರಾತ್ರಿ 10.30 ಸುಮಾರಿಗೆ ನಾಗೇಶ್ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ. ಮಾರನೇ ದಿನ ಮೃತದೇಹವನ್ನ ಸ್ಥಳೀಯರು ನೋಡಿ ಪೊಲೀಸರ ಮಾಹಿತಿ ನೀಡಿದ್ದರು. ಹತ್ಯೆ ಮಾಡಿ ಪರಾರಿಯಾಗಿದ್ದ ನಾಗೇಶ್​ನನ್ನು ಶಿವಳ್ಳಿ ಠಾಣೆ ಪೊಲೀಸರು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​