AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಹೆಣ್ಮಕ್ಕಳು, 6ನೇ ಮಗುವಿನ ಲಿಂಗ ಪತ್ತೆಗೆ ಗರ್ಭಿಣಿ ಹೆಂಡ್ತಿಯ ಹೊಟ್ಟೆ ಸೀಳಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಕುಡುಗೋಲಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ ಬಳಿಕ ಆಕೆ ಅಲ್ಲಿಂದ ಓಡಿಹೋಗಲು ಯತ್ನಿಸಿದ್ದಾಳೆ. ಆದರೆ ಪನ್ನಾಲಾಲ್ ಅವಳನ್ನು ಹಿಡಿದು ಕುಡುಗೋಲಿನಿಂದ ಅವಳ ಹೊಟ್ಟೆಯನ್ನು ಸೀಳಿದ್ದಾನೆ. ಆಕೆ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ಆತ ಹೊಟ್ಟೆ ಸೀಳಿದಾಗ ಕರುಳು ಹೊರಕ್ಕೆ ಬರುವಷ್ಟು ಆಳವಾದ ಗಾಯವಾಗಿತ್ತು ಎಂದು ಅನಿತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

5 ಹೆಣ್ಮಕ್ಕಳು, 6ನೇ ಮಗುವಿನ ಲಿಂಗ ಪತ್ತೆಗೆ ಗರ್ಭಿಣಿ ಹೆಂಡ್ತಿಯ ಹೊಟ್ಟೆ ಸೀಳಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಪನ್ನಾ ಲಾಲ್
ರಶ್ಮಿ ಕಲ್ಲಕಟ್ಟ
|

Updated on: May 24, 2024 | 3:57 PM

Share

ಬದೌನ್ ಮೇ 24: ಉತ್ತರ ಪ್ರದೇಶದ (Uttar Pradesh) ಬದೌನ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಹೆಂಡತಿ ಗಂಡು ಅಥವಾ ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆಯೇ ಎಂದು ಪರೀಕ್ಷಿಸಲು ಕುಡಗೋಲು ಬಳಸಿ ಹೊಟ್ಟೆ ಸೀಳಿದ್ದಾನೆ. ಬದೌನ್‌ನ (Badaun) ಸಿವಿಲ್ ಲೈನ್ಸ್‌ನ ನಿವಾಸಿ ಪನ್ನಾ ಲಾಲ್ ಎಂಬಾತ ಸೆಪ್ಟೆಂಬರ್ 2020 ರಲ್ಲಿ ತನ್ನ ಪತ್ನಿ ಅನಿತಾಳ ಹೊಟ್ಟೆ ಸೀಳಿದ್ದ. ಈ ದಂಪತಿಗೆ ಮದುವೆಯಾಗಿ 22 ವರ್ಷಗಳಾಗಿದ್ದು, ಐದು ಹೆಣ್ಣು ಮಕ್ಕಳಿದ್ದಾರೆ. ಆದರೆ, ತನಗೆ ಗಂಡುಮಗು ಬೇಕು ಎಂದು ಪನ್ನಾ ಲಾಲ್ ಹೆಂಡತಿ ಜತೆ ಆಗಾಗ ಜಗಳವಾಡುತ್ತಿದ್ದ. ದಂಪತಿಗಳ ಜಗಳದ ಬಗ್ಗೆ ಅನಿತಾ ಅವರ ಕುಟುಂಬಕ್ಕೆ ತಿಳಿದಿತ್ತು. ಜಗಳವನ್ನು ನಿಲ್ಲಿಸಲು, ಪನ್ನಾ ಲಾಲ್ ಅವರನ್ನು ಮನವೊಲಿಸಲು ಅವರು ಪ್ರಯತ್ನಿಸಿದ್ದರು. ಆದರೆ ತಾನು ಅನಿತಾಗೆ ವಿಚ್ಛೇದನ ನೀಡುವುದಾಗಿ ಮತ್ತು ಇನ್ನೊಬ್ಬ ಮಹಿಳೆಯನ್ನು ಮದುವೆಯಾಗುವುದಾಗಿ ಪನ್ನಾಲಾಲ್ ಬೆದರಿಕೆ ಹಾಕಿದ್ದ.

ಘಟನೆ ನಡೆದ ದಿನದಂದು ದಂಪತಿ ಗರ್ಭದಲ್ಲಿರುವ ಮಗುವಿನ ಲಿಂಗದ ಬಗ್ಗೆ ಮತ್ತೆ ಜಗಳವಾಡಿದ್ದಾರೆ. ಇದರಿಂದ ಕುಪಿತಗೊಂಡ ಪನ್ನಾ ಲಾಲ್  ಅನಿತಾ ಹೊಟ್ಟೆಯಲ್ಲಿ ಗಂಡು ಅಥವಾ ಹೆಣ್ಣು ಮಗುವಿದೆಯೇ ಎಂದು ಪರೀಕ್ಷಿಸಲು ಹೊಟ್ಟೆ ಸೀಳುವುದಾಗಿ ಬೆದರಿಕೆ ಹಾಕಿದ್ದಾನೆ. ಇದಕ್ಕೆ ಅನಿತಾ ಜಗಳವಾಡಿದಾಗ ಕೊಲೆ ಬೆದರಿಕೆ ಹಾಕಿದ್ದಾನೆ.

ಕುಡುಗೋಲಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ ಬಳಿಕ ಆಕೆ ಅಲ್ಲಿಂದ ಓಡಿಹೋಗಲು ಯತ್ನಿಸಿದ್ದಾಳೆ. ಆದರೆ ಪನ್ನಾಲಾಲ್ ಅವಳನ್ನು ಹಿಡಿದು ಕುಡುಗೋಲಿನಿಂದ ಅವಳ ಹೊಟ್ಟೆಯನ್ನು ಸೀಳಿದ್ದಾನೆ. ಆಕೆ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ಆತ ಹೊಟ್ಟೆ ಸೀಳಿದಾಗ ಕರುಳು ಹೊರಕ್ಕೆ ಬರುವಷ್ಟು ಆಳವಾದ ಗಾಯವಾಗಿತ್ತು ಎಂದು ಅನಿತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನೋವು ತಡೆಯಲಾರದೆ ಅನಿತಾ ಬೀದಿಗೆ ಓಡಿದ್ದರು. ಹತ್ತಿರದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅವಳ ಸಹೋದರ ಅವಳ ಕೂಗು ಕೇಳಿ ಅವಳನ್ನು ರಕ್ಷಿಸಲು ಬಂದಿದ್ದಾನೆ. ಆತನನ್ನು ಕಂಡ ಕೂಡಲೇ ಪನ್ನಾ ಲಾಲ್ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ 10 ವರ್ಷದ ಬಾಲಕಿ

ಅನಿತಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಕೆ ಈ ದಾಳಿಯಿಂದ ಬದುಕುಳಿದಿದ್ದರೂ, ಆಕೆಯ ಮಗುವನ್ನು ಉಳಿಸಲಾಗಲಿಲ್ಲ. ಹೊಟ್ಟೆಯಲ್ಲಿದ್ದ ಮಗು ಗಂಡು ಆಗಿತ್ತು. ಅನಿತಾ ತನ್ನ ಸಹೋದರರೊಂದಿಗೆ ಆಸ್ತಿ ವಿವಾದದಲ್ಲಿದ್ದ ಕಾರಣ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲು ತನಗೆ ತಾನೇ ಗಾಯ ಮಾಡಿಕೊಂಡಿದ್ದಾಳೆ ಎಂದು ಪನ್ನಾ ಲಾಲ್ ನ್ಯಾಯಾಲಯದಲ್ಲಿ ವಾದಿಸಿದ್ದ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!