AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ; ಓರ್ವನ ಕೊಲೆ

ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಗೆ ಚಾಕು ಇರಿಯಲಾಗಿದೆ.

Crime News: ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ; ಓರ್ವನ ಕೊಲೆ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Aug 03, 2022 | 10:14 PM

Share

ಬೆಂಗಳೂರು: ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಗೆ ಚಾಕು ಇರಿಯಲಾಗಿದೆ. ಪ್ರಕಾಶ್ ಎಂಬಾತನಿಗೆ ಚಾಕು ಇರಿದಿದ್ದು, ಪ್ರಕಾಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಮಂಜುನಾಥ್ ಗಲಾಟೆ ಮಾಡಿಕೊಂಡಿದ್ದನು. ಈ ವೇಳೆ ಅಲ್ಲೇ ಇದ್ದ ಪ್ರಕಾಶ್ ಮಧ್ಯಪ್ರವೇಶಿಸಿ ಬಿಲ್ ಕೊಡುವಂತೆ ಬುದ್ಧಿ ಮಾತು ಹೇಳಿದ್ದನು.

ನಂತರ ಪ್ರಕಾಶ್ ಬಾರ್​ನಿಂದ ಆಚೆ ಬಂದಿದ್ದಾನೆ. ಈ ವೇಳೆ ಮಂಜುನಾಥ್  ಮತ್ತು ಮತ್ತೊರ್ವ ಚಾಕುವಿನಿಂದ ಹೊಟ್ಟೆಗೆ ಇರಿದು ಪರಾರಿಯಾಗಿದ್ದರು. ಸದ್ಯ ಇಂದಿರಾನಗರ ಪೊಲೀಸರು ಆರೋಪಿ ಮಂಜುನಾಥ್​ನನ್ನು ಬಂಧಿಸಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಖ್ಯಾತ ಅಂತಾರಾಜ್ಯ ಡ್ರಗ್ ಪೆಡ್ಲರ್​​ಗಳ ಬಂಧನ:  ಬೇಗೂರು ಪೊಲೀಸರು ಇಬ್ಬರು ಕುಖ್ಯಾತ ಅಂತಾರಾಜ್ಯ ಡ್ರಗ್ ಪೆಡ್ಲರ್​​ಗಳ ಬಂಧಸಿದ್ದಾರೆ. ಡ್ರಗ್ಸ್ ಮಾರಾಟ ಮಾಡುತ್ತಿದ್ದ ಅಶ್ಫಾಕ್‌, ಶಿಫಾಸ್ ಬಂಧಿತ ಆರೋಪಿಗಳು.  ಬಂಧಿತರಿಂದ 2 ಕೋಟಿ ಮೌಲ್ಯದ ಹ್ಯಾಶ್ ಆಯಿಲ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಬಂಧಿತ ಆರೋಪಿಗಳು ಮಂಗಳೂರು ಹಾಗೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ.

ಕುಖ್ಯಾತ ಕಳ್ಳ ಸೈಯದ್ ವಸೀಂ ಬಂಧನ:  ಕಲಾಸಿಪಾಳ್ಯ ಠಾಣೆ ಪೊಲೀಸರು ಕುಖ್ಯಾತ ಕಳ್ಳ ಸೈಯದ್ ವಸೀಂನನ್ನು ಬಂಧಿಸಿದ್ದಾರೆ. ಸುಮಾರು 6 ಲಕ್ಷ ರೂ. ಮೌಲ್ಯದ 10 ಬೈಕ್​ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.  ಆರೋಪಿ ಸೈಯದ್​​​ ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಬೈಕ್ ಕದಿದ್ದನು.

ಕಲಾಸಿಪಾಳ್ಯ 2, ಚಂದ್ರಲೇಔಟ್  2, ಬೊಮ್ಮನಹಳ್ಳಿ, ಗೋವಿಂದಪುರ, ಜೆಜೆನಗರ, ಬ್ಯಾಟರಾಯನಪುರ, ಬನಶಂಕರಿ, ಬೇಗೂರು ಠಾಣೆ ವ್ಯಾಪ್ತಿಯ ಪ್ರಕರಣಗಳಲ್ಲಿ ಆರೋಪಿ ಬೇಕಾಕಿದ್ದನು

ಬಸ್​​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಬಾಲಕ ಸಾವು

ಬೆಳಗಾವಿ: ಕೆಎಸ್​ಆರ್​ಟಿಸಿ ಬಸ್​​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ನರಸಿಂಗಪುರ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಸಿದ್ದಿಕ್ ಮುಲ್ಲಾ(10) ಮೃತ ದುರ್ದೈವಿ. ಕಾರಿನಲ್ಲಿದ್ದ ಇತರೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿತ್ತೂರಿನ ಸಂಬಂಧಿಕರ ಅಂತ್ಯಕ್ರಿಯೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:39 pm, Wed, 3 August 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ