AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ; ಓರ್ವನ ಕೊಲೆ

ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಗೆ ಚಾಕು ಇರಿಯಲಾಗಿದೆ.

Crime News: ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ; ಓರ್ವನ ಕೊಲೆ
ಸಾಂಧರ್ಬಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Aug 03, 2022 | 10:14 PM

Share

ಬೆಂಗಳೂರು: ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಗೆ ಚಾಕು ಇರಿಯಲಾಗಿದೆ. ಪ್ರಕಾಶ್ ಎಂಬಾತನಿಗೆ ಚಾಕು ಇರಿದಿದ್ದು, ಪ್ರಕಾಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಮಂಜುನಾಥ್ ಗಲಾಟೆ ಮಾಡಿಕೊಂಡಿದ್ದನು. ಈ ವೇಳೆ ಅಲ್ಲೇ ಇದ್ದ ಪ್ರಕಾಶ್ ಮಧ್ಯಪ್ರವೇಶಿಸಿ ಬಿಲ್ ಕೊಡುವಂತೆ ಬುದ್ಧಿ ಮಾತು ಹೇಳಿದ್ದನು.

ನಂತರ ಪ್ರಕಾಶ್ ಬಾರ್​ನಿಂದ ಆಚೆ ಬಂದಿದ್ದಾನೆ. ಈ ವೇಳೆ ಮಂಜುನಾಥ್  ಮತ್ತು ಮತ್ತೊರ್ವ ಚಾಕುವಿನಿಂದ ಹೊಟ್ಟೆಗೆ ಇರಿದು ಪರಾರಿಯಾಗಿದ್ದರು. ಸದ್ಯ ಇಂದಿರಾನಗರ ಪೊಲೀಸರು ಆರೋಪಿ ಮಂಜುನಾಥ್​ನನ್ನು ಬಂಧಿಸಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಖ್ಯಾತ ಅಂತಾರಾಜ್ಯ ಡ್ರಗ್ ಪೆಡ್ಲರ್​​ಗಳ ಬಂಧನ:  ಬೇಗೂರು ಪೊಲೀಸರು ಇಬ್ಬರು ಕುಖ್ಯಾತ ಅಂತಾರಾಜ್ಯ ಡ್ರಗ್ ಪೆಡ್ಲರ್​​ಗಳ ಬಂಧಸಿದ್ದಾರೆ. ಡ್ರಗ್ಸ್ ಮಾರಾಟ ಮಾಡುತ್ತಿದ್ದ ಅಶ್ಫಾಕ್‌, ಶಿಫಾಸ್ ಬಂಧಿತ ಆರೋಪಿಗಳು.  ಬಂಧಿತರಿಂದ 2 ಕೋಟಿ ಮೌಲ್ಯದ ಹ್ಯಾಶ್ ಆಯಿಲ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಬಂಧಿತ ಆರೋಪಿಗಳು ಮಂಗಳೂರು ಹಾಗೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ.

ಕುಖ್ಯಾತ ಕಳ್ಳ ಸೈಯದ್ ವಸೀಂ ಬಂಧನ:  ಕಲಾಸಿಪಾಳ್ಯ ಠಾಣೆ ಪೊಲೀಸರು ಕುಖ್ಯಾತ ಕಳ್ಳ ಸೈಯದ್ ವಸೀಂನನ್ನು ಬಂಧಿಸಿದ್ದಾರೆ. ಸುಮಾರು 6 ಲಕ್ಷ ರೂ. ಮೌಲ್ಯದ 10 ಬೈಕ್​ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.  ಆರೋಪಿ ಸೈಯದ್​​​ ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಬೈಕ್ ಕದಿದ್ದನು.

ಕಲಾಸಿಪಾಳ್ಯ 2, ಚಂದ್ರಲೇಔಟ್  2, ಬೊಮ್ಮನಹಳ್ಳಿ, ಗೋವಿಂದಪುರ, ಜೆಜೆನಗರ, ಬ್ಯಾಟರಾಯನಪುರ, ಬನಶಂಕರಿ, ಬೇಗೂರು ಠಾಣೆ ವ್ಯಾಪ್ತಿಯ ಪ್ರಕರಣಗಳಲ್ಲಿ ಆರೋಪಿ ಬೇಕಾಕಿದ್ದನು

ಬಸ್​​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಬಾಲಕ ಸಾವು

ಬೆಳಗಾವಿ: ಕೆಎಸ್​ಆರ್​ಟಿಸಿ ಬಸ್​​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ನರಸಿಂಗಪುರ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಸಿದ್ದಿಕ್ ಮುಲ್ಲಾ(10) ಮೃತ ದುರ್ದೈವಿ. ಕಾರಿನಲ್ಲಿದ್ದ ಇತರೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿತ್ತೂರಿನ ಸಂಬಂಧಿಕರ ಅಂತ್ಯಕ್ರಿಯೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:39 pm, Wed, 3 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ