AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶ್ರಯ ಕೊಟ್ಟವನನ್ನೇ ಕೊಂದ ದುರುಳ: ಸಲಿಂಗಕಾಮಕ್ಕೆ ವಿರೋಧಿಸಿದ್ದಕ್ಕೆ ಸ್ನೇಹಿತನ ಕತೆ ಮುಗಿಸಿದ!

ಈತನ ಹೆಸರು ಚೇತನ್.. 26 ವರ್ಷದ ಹುಡುಗ.. ಹಲವು ಕೇಸ್‌ಗಳಲ್ಲಿ ಜೈಲುವಾಸ ಅನುಭವಿಸಿದ್ದ. ಕಷ್ಟದಲ್ಲೇ ಜೀವನ ನಡೆಸುತ್ತಿದ್ದು, ತಿನ್ನಲು ಅನ್ನವಿಲ್ಲದ ಸ್ಥಿತಿ. ಇಂಥಾ ಚೇತನ್‌ಗೆ ಅಶ್ರಯವಾದವನು 41 ವರ್ಷದ ಪ್ರದೀಪ್. ಸ್ನೇಹಕ್ಕೆ ಬೆಲೆ ಕೊಟ್ಟಿದ್ದ ಪ್ರದೀಪ್, ಚೇತನ್ ಮೇಲಿನ ನಂಬಿಕೆಯಿಂದ ಮನೆಯಲ್ಲಿ ಆಶ್ರಯ ಕೊಟ್ಟು, ಅನ್ನ ಹಾಕಿದ್ದ. ಆದ್ರೆ, ದುರುಳ ಚೇತನ್ ಉಂಡ ಮನೆಗೆ ದ್ರೋಹ ಬಗೆದಿದ್ದಾನೆ. ಸ್ನೇಹಿತ ಪ್ರದೀಪನ ಕತೆಯನ್ನೇ ಮುಗಿಸಿಬಿಟ್ಟಿದ್ದಾನೆ.

ಆಶ್ರಯ ಕೊಟ್ಟವನನ್ನೇ ಕೊಂದ ದುರುಳ: ಸಲಿಂಗಕಾಮಕ್ಕೆ ವಿರೋಧಿಸಿದ್ದಕ್ಕೆ ಸ್ನೇಹಿತನ ಕತೆ ಮುಗಿಸಿದ!
ಚೇತನ್, ಬಂಧಿತ ಆರೋಪಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Dec 22, 2024 | 2:32 PM

Share

ಬೆಂಗಳೂರು, (ಡಿಸೆಂಬರ್ 22): ಪರಿಸ್ಥಿತಿ ನೋಡಿ ತನ್ನ ಮನೆಯಲ್ಲೇ ಆಶ್ರಯ ಕೊಟ್ಟ ಜೀವದ ಗೆಳೆಯ ಜೀವ ತೆಗೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಿಮ್ಮಭೋವಿಪಾಳ್ಯದಲ್ಲಿ ನಡೆದಿದೆ. ತಿಮ್ಮಭೋವಿಪಾಳ್ಯದಲ್ಲಿ ಸ್ವಂತ ಮನೆಯಲ್ಲಿ ಪ್ರದೀಪ್ ವಾಸವಿದ್ದ. ಕಳೆದ ಮೂರ್ನಾಲ್ಕು ತಿಂಗಳಿಂದ ಚೇತನ್‌ಗೆ ಆಶ್ರಯ ನೀಡಿದ್ದ. ಆದ್ರೆ, ಮೊನ್ನೆ ಶುಕ್ರವಾರ ಪಾಪಿ ಚೇತನ್‌ಗೆ ಅದೇನಾಯ್ತೋ ಏನೋ, ಆಶ್ರಯ ಕೊಟ್ಟಿದ್ದ ಪ್ರದೀಪ್‌ಗೆ ಚಿತ್ರಹಿಂಸೆ ನೀಡಿ ಕೊಂದಿದ್ದಾನೆ. ಪ್ರದೀಪ್ ಕಿರುಚಾಡುವ ಶಬ್ದ ಕೇಳಬಾರದು ಎಂದು ಜೋರಾಗಿ ಟಿವಿ ಸೌಂಡ್ ಇಟ್ಟು, ಕತೆ ಮುಗಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆದ್ರೆ, ಮಾದನಾಯಕನಹಳ್ಳಿ ಪೊಲೀಸರು ಟವರ್ ಲೋಕೇಷನ್ ಮೂಲಕ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಲಿಂಗಕಾಮಕ್ಕೆ ವಿರೋಧಿಸಿದ್ದಕ್ಕೆ ಚಟ್ಟ ಕಟ್ಟಿಬಿಟ್ಟ ಪಾಪಿ

ಪೊಲೀಸ್ ವಿಚಾರಣೆ ವೇಳೆ ಆರೋಪಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದು, ಪ್ರದೀಪ್‌ನನ್ನು ಸಲಿಂಗ ಕಾಮಕ್ಕೂ ಬಳಸಿಕೊಳ್ಳುತ್ತಿದ್ದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೇ ಮನೆಯಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾನೆಂದು ಡ್ತಾನೆಂದು ಆರೋಪಿಸಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿದ್ದ ಜೋಡಿ ಬದುಕಿನಲ್ಲಿ ಹೊಕ್ಕಿದ ಅನುಮಾನದ ಭೂತ, ಪತ್ನಿ ದುರಂತ ಸಾವು

ಕೀಚಕ ಚೇತನ್, ಸಲಿಂಗಕಾಮಕ್ಕೆ ಕರಿತಿದ್ದನಂತೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಸಿಗರೇಟ್‌ನಿಂದ ಸುಟ್ಟು, ದೊಣ್ಣೆಯಿಂದ ಹೊಡೆದಿದ್ದಾನೆ. ಶುಕ್ರವಾರ ರಾತ್ರಿ ಸಿಗರೇಟ್​ನಿಂದ ಸುಟ್ಟು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಬಾಡಿಗೆ ಮನೆಯವರು ಬಂದು ನೋಡುವಷ್ಟಲ್ಲಿ ಪರಾರಿಯಾಗಿದ್ದ.

ಒಂದೇ ಒಂದು ಫೋನ್‌ ಕರೆಯಿಂದ ಆರೋಪಿ ಲಾಕ್

ಆರೋಪಿ ಚೇತನ್, ಪ್ರದೀಪ್‌ನನ್ನ ಹತ್ಯೆಗೈದ ಬಳಿಕ ಸೇಲಂನಲ್ಲಿದ್ದ ತನ್ನ ಸ್ನೇಹಿತರಿಗೆ ಕರೆ ಮಾಡಿದ್ದ. ಕಾರಿನಲ್ಲಿ ಸೇಲಂಗೆ ಬರುತ್ತಿದ್ದೇನೆ ಅಂತೇಳಿ ಮೊಬೈಲ್ ಸ್ವಿಚ್ಚ್ ಆಫ್ ಮಾಡಿಕೊಂಡಿದ್ದ, ಸೇಲಂಗೆ ತಲುಪಿದ ನಂತರ ಆರೋಪಿ ಮಾಡಿದ್ದ ಒಂದೇ ಒಂದು ಫೋನ್‌ ಕಾಲ್ ಬೆನ್ನತ್ತಿದ ಪೊಲೀಸರು ಚೇತನ್‌ನನ್ನ ಲಾಕ್ ಮಾಡಿದ್ದಾರೆ.

ಪೊಲೀಸ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿರೋ ಆರೋಪಿ, ಸಲಿಂಗಕಾಮಕ್ಕೆ ವಿರೋಧ ವ್ಯಕ್ತಪಡಿಸಿದಾಗ ಗಲಾಟೆ ಆಯ್ತು. ಕೊಲೆ ಮಾಡಲು ಮುನ್ನು ಟಿವಿ ಸೌಂಡ್ ಜೋರಾಗಿ ಇಟ್ಟು ಕೊಲೆಗೈದ ಬಗ್ಗೆ ಮಾಹಿತಿ‌ ನೀಡಿದ್ದಾನೆ. ಸದ್ಯಕ್ಕೆ ಕೊಲೆ‌ ಅರೋಪಿ ಚೇತನನ್ನ ಮಾದನಾಯಕನಹಳ್ಳಿ ಪೊಲೀಸ್‌‌ ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ.

ಈ ಹಿಂದೆಯೂ ರಾಬರಿ, ಕೊಲೆ ಯತ್ನ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಚೇತನ್ ಜೈಲಿನಿಂದ ಬಿಡುಗಡೆಯಾಗಿ ಕಾರು ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಆದ್ರೆ, ಇದೀಗ ಆಶ್ರಯ ಕೊಟ್ಟ ಗೆಳೆಯನ ಕತೆಯನ್ನೇ ಮುಗಿಸಿಬಿಟ್ಟಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್