Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan: ಪತ್ನಿಗೆ ಮೆಸೇಜ್ ಮಾಡಿದ್ದಾನೆಂಬ ಅನುಮಾನದಿಂದ ಟೇಲರ್​ನನ್ನೇ​ ಹತ್ಯೆಗೈದ ಪತಿರಾಯ

ಅತ ಟೈಲರಿಂಗ್ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ, ಶ್ರಮಪಟ್ಟು ದುಡಿದು ನಾಲ್ಕೈದು ಜನರಿಗೆ ತಾನೇ ಉದ್ಯೋಗದಾತನಾಗಿ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ವ್ಯಕ್ತಿಯನ್ನು ಆ ಒಂದು ಮೆಸೇಜ್ ಬಲಿಪಡೆದುಕೊಂಡಿದೆ.

Hassan: ಪತ್ನಿಗೆ ಮೆಸೇಜ್ ಮಾಡಿದ್ದಾನೆಂಬ ಅನುಮಾನದಿಂದ ಟೇಲರ್​ನನ್ನೇ​ ಹತ್ಯೆಗೈದ ಪತಿರಾಯ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 13, 2022 | 7:22 PM

ಹಾಸನ: ಪತ್ನಿಗೆ ಮೆಸೇಜ್ ಮಾಡಿದ ಎನ್ನುವ ಕಾರಣಕ್ಕೆ ಆಕೆಯ ಪತಿ ಟೇಲರ್​ನನ್ನು ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಇಂದು(ಅ.13) ಈ ಪ್ರಕರಣ ನಡೆದಿದೆ.

ಊಪಿನಹಳ್ಳಿ ಗ್ರಾಮದ ಗಂಗಾಧರ್(40) ನನ್ನ ಭರತ್ ಸೋಮು, ಚಿರು ಮತ್ತು ಅಭಿ ಎಂಬ ನಾಲ್ವರು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕೊಲೆಯಾದ ಗಂಗಾಧರ್ ತನ್ನ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಎನ್ನುವ ಕಾರಣಕ್ಕೆ ಆರೋಪಿ ಭರತ್ ತನ್ನ ಸ್ನೇಹಿತರ ಜೊತೆ ಸೇರಿ ಟೈಲರಿಂಗ್ ಶಾಪ್ ನಲ್ಲಿದ್ದ ಗಂಗಾದರ್ ನನ್ನ ಹೊತ್ತೊಯ್ದಿದ್ದಾರೆ, ಚನ್ನರಾಯಪಟ್ಟಣ ಶ್ರವಣಬೆಳಗೊಳ ರಸ್ತೆಯ ಜನಿವಾರ ಸಮೀಪದ ಬಯಲು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮನಸ್ಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಗಂಗಾಧರ್ ಸ್ನೇಹಿತ ಇದನ್ನ ಗಮನಿಸಿ ಹತ್ತಿರ ಹೋದಾಗ ಆರೋಪಿಗಳು ಅಲ್ಲಿಂದ ಓಡಿ ಹೊಗಿದ್ದಾರೆ. ಕೂಡಲೇ ಗಂಗಾಧರ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಕಳೆದ ಹತ್ತಾರು ವರ್ಷಗಳಿಂದ ಟೈಲರಿಂಗ್ ವೃತ್ತಿ ಮಾಡಿಕೊಂಡು ಇದೀಗ ಅದನ್ನೇ ಉದ್ಯಮವನ್ನೇ ದೊಡ್ಡದಾಗಿ ಮಾಡಿಕೊಂಡಿದ್ದ. ಅಲ್ಲದೇ ನಾಲ್ಕೈದು ಜನರಿಗೆ ತಾನೇ ಕೆಲಸಕೊಟ್ಟು ಜೀವ ನಡೆಸುತ್ತಿದ್ದ. ಯಾರೊಟ್ಟಿಗೂ ಜಗಳವಾಡದ ವ್ಯಕ್ತಿ ಹೀಗೆ ಏಕಾಏಕಿ ಹತ್ಯೆಯಾಗಿರುವುದು ಊರಿಗೆ ಊರೇ ಬೆಚ್ಚಿಬೀಳುವಂತೆ ಮಾಡಿದೆ.

ಅಕಸ್ಮಾತ್ ಗಂಗಾಧರ್ ತಪ್ಪೇ ಮಾಡಿದ್ದರೆ ಅವರ ವಿರುದ್ದ ದೂರು ಕೊಡಬಹುದಿತ್ತು, ಅಥವಾ ಊರಿನ ಜನರು ಕೂತು ಮಾತನಾಡಬಹುದಿತ್ತು. ಆದ್ರೆ ಹೀಗೆ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಿ ಎಂದು ಸಂಬಂಧಿಕರು ಆಗ್ರಹಿಸಿದ್ದಾರೆ.

ಗಂಗಾಧರ್ ಪತ್ನಿ ಸೌಮ್ಯ ನೀಡಿದ ದೂರಿನ ಆಧಾರದಲ್ಲಿ ಕೇಸ್ ದಾಖಲಿಸಿಕೊಂಡಿರುವ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕೊಲೆ ಆರೋಪಿ ಭರತ್ ಅನುಮಾನಿಸಿದಂತೆ ಗಂಗಾಧರ್, ಮೆಸೇಜ್ ಮಾಡಿದ್ದನಾ? ಆ ಮೆಸೇಜ್ ನಲ್ಲಿ ಏನಿತ್ತು? ಎನ್ನುವ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಪ್ರಾಣ ತೆಗೆದ ಆ ಮೆಸೇಜ್ ನಲ್ಲಿ ಏನಿತ್ತು? ಟೈಲರ್ ಸಾವಿನ ಹಿಂದಿನ ಅಸಲಿಯತ್ತೇನು? ಎನ್ನುವುದು ಹಂತಕರ ಬಂಧನದ ಬಳಿಕ  ಅಸಲಿ ಸತ್ಯ ಹೊರ ಬರಲಿದೆ..

Published On - 7:20 pm, Thu, 13 October 22

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ