AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ರಾಡ್​ನಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ ಪತಿ; ರಕ್ತದ ಮಡುವಿನಲ್ಲಿ ಬಿದ್ದ ತಾಯಿ ಶವದ ಮುಂದೆ ಚಿಕ್ಕ ಮಕ್ಕಳ ಕಣ್ಣೀರು

ಮಕ್ಕಳ ಎದುರಿಗೇ ಮೆಹಬೂಬ್ ತನ್ನ ಪತ್ನಿಯನ್ನು ಹತ್ಯೆಗೈದಿದ್ದಾನೆ. ಹೆಂಡತಿಯನ್ನು ಕೊಲೆ ಮಾಡಿದ ಬಳಿಕ ಮಕ್ಕಳನ್ನು ಹೊರಬಿಡದೆ ಮನೆಯಲ್ಲೇ ಕೂಡಿ ಹಾಕಿದ್ದ. ರಕ್ತದಲ್ಲಿ ಬಿದ್ದ ತಾಯಿ ಶವದ ಮುಂದೆ ರಾತ್ರಿ ಮೂರು ಗಂಟೆವರೆಗೂ ಮಕ್ಕಳು ಕೂತಿದ್ದರು.

ಬಾಗಲಕೋಟೆಯಲ್ಲಿ ರಾಡ್​ನಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ ಪತಿ; ರಕ್ತದ ಮಡುವಿನಲ್ಲಿ ಬಿದ್ದ ತಾಯಿ ಶವದ ಮುಂದೆ ಚಿಕ್ಕ ಮಕ್ಕಳ ಕಣ್ಣೀರು
ಕಣ್ಣೀರು ಹಾಕುತ್ತಿರುವ ಸಂಬಂಧಿಕರು
TV9 Web
| Edited By: |

Updated on:Jan 03, 2022 | 10:46 AM

Share

ಬಾಗಲಕೋಟೆ: ಕೌಟುಂಬಿಕ ಕಲಹ ಹಿನ್ನೆಲೆ ರಾಡ್​ನಿಂದ ಹೊಡೆದು ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಕವಿಶೆಟ್ಟಿ ಓಣಿಯಲ್ಲಿ ಸಂಭವಿಸಿದೆ. 27 ವರ್ಷದ ಮದೀನಾ ಬಂಡಿ ಕೊಲೆಯಾದ ಗೃಹಿಣಿ. ಮದೀನಾ ಪತಿ ಮೆಹಬೂಬ್ ಬಂಡಿ ಕುಡಿದು ಪತ್ನಿ ಜೊತೆ ಜಗಳವಾಡಿದ್ದಾನೆ. ಜಗಳವಾಡುತ್ತಿದ್ದ ವೇಳೆ ಮೆಹಬೂಬ್ ರಾಡ್ನಿಂದ ಹೊಡೆದು ತನ್ನ ಪತ್ನಿಯನ್ನು ಕೊಲೆಗೈದಿದ್ದಾನೆ. ನಿನ್ನೆ (ಜ.2) ರಾತ್ರಿ 1 ಗಂಟೆಗೆ ಈ ಘಟನೆ ನಡೆದಿದೆ.

ಮಕ್ಕಳ ಎದುರಿಗೇ ಮೆಹಬೂಬ್ ತನ್ನ ಪತ್ನಿಯನ್ನು ಹತ್ಯೆಗೈದಿದ್ದಾನೆ. ಹೆಂಡತಿಯನ್ನು ಕೊಲೆ ಮಾಡಿದ ಬಳಿಕ ಮಕ್ಕಳನ್ನು ಹೊರಬಿಡದೆ ಮನೆಯಲ್ಲೇ ಕೂಡಿ ಹಾಕಿದ್ದ. ರಕ್ತದಲ್ಲಿ ಬಿದ್ದ ತಾಯಿ ಶವದ ಮುಂದೆ ರಾತ್ರಿ ಮೂರು ಗಂಟೆವರೆಗೂ ಮಕ್ಕಳು ಕೂತಿದ್ದರು. ತಂದೆ ನಿದ್ದೆಗೆ ಜಾರಿದಾಗ ಮಕ್ಕಳು ಹೊರಬಂದು ಪಕ್ಕದ ಮನೆಯವರಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಸದ್ಯ ಸ್ಥಳಕ್ಕೆ ಇಳಕಲ್ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮದೀನಾ ಟೈಲರ್ ಆಗಿ ಕೆಲಸ ಮಾಡುತ್ತಿದ್ದರು. ಮೆಹಬೂಬ್ ಪಾನಿಪುರಿ ಅಂಗಡಿ ಇಟ್ಟುಕೊಂಡಿದ್ದ. ಇವರಿಗೆ 9 ಹಾಗೂ 5 ವರ್ಷದ ಇಬ್ಬರು ಮಕ್ಕಳಿದ್ದಾರೆ. ತಾಯಿ ಕಳೆದುಕೊಂಡು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಕೊಲೆ ಆರೋಪಿ ಮೆಹಬೂಬ್ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕೊಪ್ಪಳದಲ್ಲಿ ಕೊಲೆಗೆ ಯತ್ನ ಆಸ್ತಿ ವಿಚಾರಕ್ಕೆ ತಂದೆ, ತಮ್ಮನಿಂದಲೇ ವ್ಯಕ್ತಿಯ ಕೊಲೆಗೆ ಯತ್ನ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ನೆಲಜೇರಿಯಲ್ಲಿ ಈ ಘಟನೆ ನಡೆದಿದೆ. ಅನಿಲ್‌ಕುಮಾರ್ ಮನೆಗೆ ಪೆಟ್ರೋಲ್ ಎರಚಿ ಕೊಲೆಗೆ ಯತ್ನಿಸಿದ್ದಾರೆ. ತಂದೆ ಚೆನ್ನಪ್ಪಗೌಡ, ತಮ್ಮ ವೆಂಕಟೇಶ್‌ ವಿರುದ್ಧ ಆರೋಪ ಕೇಳಿಬಂದಿದ್ದು, ಬೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಸತ್ಯಕ್ಕೆ ಸಮಾಧಿ ಕಟ್ಟಿ ʼಸುಳ್ಳಿನಯಾತ್ರೆʼಗೆ ಹೊರಟವರ ಜಾತಕ ಬೆತ್ತಲು ಮಾಡ್ತೀವಿ; ಸರಣಿ ಟ್ವೀಟ್ ಮೂಲಕ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ

ಹಿಂಸಾಚಾರಕ್ಕೆ ತಿರುಗಿದ ಉಷ್ಣ ವಿದ್ಯುತ್​ ಸ್ಥಾವರ ಕಾರ್ಮಿಕರ ಪ್ರತಿಭಟನೆ; 20 ಪೊಲೀಸರಿಗೆ ಗಾಯ, ವಾಹನಗಳೆಲ್ಲ ಧ್ವಂಸ

Published On - 10:41 am, Mon, 3 January 22

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ