AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಕಿತ್ತುಕೊಳ್ಳಲು ಬಂದವನನ್ನ ಕಲ್ಲಿನಿಂದ ಜಜ್ಜಿ ಕೊಂದ: ಕೊಲೆ ಆರೋಪಿ ಈಗ ಪೊಲೀಸರ ಅತಿಥಿ

ವ್ಯಕ್ತಿಯೋರ್ವ ಮೊಬೈಲ್ ಕದಿಯಲು ಬಂದವನನ್ನ ರೊಚ್ಚಿಗೆದ್ದು ಕಲ್ಲಿನಿಂದ ಜಜ್ಜಿ ಕೊಂದಿರುವ ಘಟನೆ ನಡೆದಿದೆ. ಕೊಲೆ ಆರೋಪಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಮೊಬೈಲ್ ಕಿತ್ತುಕೊಳ್ಳಲು ಬಂದವನನ್ನ ಕಲ್ಲಿನಿಂದ ಜಜ್ಜಿ ಕೊಂದ: ಕೊಲೆ ಆರೋಪಿ ಈಗ ಪೊಲೀಸರ ಅತಿಥಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 16, 2023 | 11:01 PM

Share

ಚಿಕ್ಕಮಗಳೂರು: ಒಂಟಿಯಾಗಿ ಓಡಾಡುವವರಿಂದ ಹಣ, ಆಭರಣ, ಮೊಬೈಲ್‌ ಫೋನ್‌( mobile) ದೋಚುವವರ ಹಾವಳಿ ಹೆಚ್ಚಾಗಿದೆ. ಅದರಂತೆ ಇಲ್ಲೋರ್ವ ವ್ಯಕ್ತಿ ಮೊಬೈಲ್ ಕಿತ್ತುಕೊಳ್ಳಲು ಹೋದವ ದುರಂತ ಅಂತ್ಯಕಂಡಿದ್ದಾನೆ. ಹೌದು..ವ್ಯಕ್ತಿಯೋರ್ವ ಮೊಬೈಲ್ ಕಿತ್ತುಕೊಳ್ಳಲು ಬಂದವನನ್ನ ರೊಚ್ಚಿಗೆದ್ದು ಕಲ್ಲಿನಿಂದ ಜಜ್ಜಿ ಕೊಂದಿರುವ ಘಟನೆ ಚಿಕ್ಕಮಗಳೂರಿನ ಕಡೂರು (kadur Chikkamagaluru )ಸಮೀಪದ ಮರವಂಜಿ ವೃತ್ತದ ಬಳಿ ನಡೆದಿದೆ.

ಇದನ್ನೂ ಓದಿ: ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್

ಕಡೂರು ತಾಲೂಕಿನ ಮಲ್ಲೇದೇವರಹಳ್ಳಿ ನಿವಾಸಿ ಮೋಹನ್(60) ವ್ಯಕ್ತಿಯೋರ್ವನ ಮೊಬೈಲ್ ಕಿತ್ತುಕೊಳ್ಳಲು ಹೋಗಿ ಕೊಲೆಯಾಗಿದ್ದಾನೆ. ಫೆಬ್ರವರಿ 14ರ ರಾತ್ರಿ ಮೋಹನ್ ಕೆಂಚಪ್ಪನ ಮೊಬೈಲ್ ಕಿತ್ತುಕೊಳ್ಳಲು ಬಂದಿದ್ದು, ಈ ವೇಳೆ ಕೆಂಚಪ್ಪ ಕಲ್ಲಿನಿಂದ ಹೊಡೆದು ಮೋಹನ್​ನನ್ನು ಹತ್ಯೆ ಮಾಡಿದ್ದಾನೆ. ಮೋಹನ್ ಎನ್ನುವಾತನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ ಕೆಂಚಪ್ಪನನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.

ಬ್ರಿಡ್ಜ್​ಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವು

ಕೊಪ್ಪಳ: ಸೇತುವೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಇಂದು( ಫೆಬ್ರವರಿ 16) ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರ ದುರ್ಮರಣ ಹೊಂದಿದ್ದಾರೆ. ವೆನಿಲ್ಲಾ(25), ರೂಪವತಿ(26), ಷಣ್ಮುಖ(28) ಮೃತ ದುರ್ದೈವಿಗಳು. ಮೃತರು ತೆಲಂಗಾಣ ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Published On - 10:59 pm, Thu, 16 February 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ