AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಹಿಂಬಾಲಿಸಿದಕ್ಕೆ ತನ್ನ ಮೇಲೆ ದೂರು ನೀಡಿದ ಹುಡುಗಿಯ ಮನೆಯೊಳಗೆ ಹಾವು ಎಸೆದ ವ್ಯಕ್ತಿ

ತನ್ನ ಮೇಲೆ ದೂರು ನೀಡಿದ ವ್ಯಕ್ತಿಯ ಮೇಲೆ ಸೇಡು ತೀರಿಸಿಕೊಳ್ಳಲು ಹುಡುಗಿಯ ಮನೆಯೊಳಗೆ ವಿಷಕಾರಿ ಹಾವೊಂದನ್ನು ಎಸೆದಿರುವ ಘಟನೆ ಕೇರಳದ ತಿರುವನಂತಪುರಂ ಜಿಲ್ಲೆಯ ಕಟ್ಟಕಡದಲ್ಲಿ ನಡೆದಿದೆ.

ಕೇರಳ: ಹಿಂಬಾಲಿಸಿದಕ್ಕೆ ತನ್ನ ಮೇಲೆ ದೂರು ನೀಡಿದ ಹುಡುಗಿಯ ಮನೆಯೊಳಗೆ ಹಾವು ಎಸೆದ ವ್ಯಕ್ತಿ
ಸಾಂದರ್ಭಿಕ ಚಿತ್ರ Image Credit source: pexels
ಅಕ್ಷಯ್​ ಪಲ್ಲಮಜಲು​​
|

Updated on:Aug 08, 2023 | 12:46 PM

Share

ತಿರುವನಂತಪುರಂ, ಆ.8: ಮಗಳನ್ನು ಹಿಂಬಾಲಿಸಿದಕ್ಕೆ ತನ್ನ ಮೇಲೆ ದೂರು ನೀಡಿದ ವ್ಯಕ್ತಿಯ ಮೇಲೆ ಸೇಡು ತೀರಿಸಿಕೊಳ್ಳಲು ಹುಡುಗಿಯ ಮನೆಯೊಳಗೆ ವಿಷಕಾರಿ ಹಾವೊಂದನ್ನು ಎಸೆದಿರುವ ಘಟನೆ ಕೇರಳದ (kerala) ತಿರುವನಂತಪುರಂ ಜಿಲ್ಲೆಯ ಕಟ್ಟಕಡದಲ್ಲಿ ನಡೆದಿದೆ. ಇದೀಗ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಹಾವು ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಜೇಂದ್ರನ್ ಎಂಬುವವರ ಮನೆಯೊಳಗೆ ವಿಷಕಾರಿ ಹಾವನ್ನು ಎಸೆದು ದ್ವೇಷ ತೀರಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಕಿಚ್ಚು (30) ಎಂದು ಗುರುತಿಸಲಾಗಿದೆ.

ಪೊಲೀಸರ ವರದಿ ಪ್ರಕಾರ, ತಿರುವನಂತಪುರಂ ಜಿಲ್ಲೆಯ ಕಟ್ಟಕಡ ಮೂಲದ ರಾಜೇಂದ್ರನ್ ಎಂಬುವವರ ಮನೆಯೊಳಗೆ ಕಿಚ್ಚು ಎಂಬ ವ್ಯಕ್ತಿ ಹಾವನ್ನು ಎಸೆದಿದ್ದಾರೆ. ಈ ಹಿಂದೆ ರಾಜೇಂದ್ರನ್ ಅವರ ಮಗಳನ್ನು ಆತ ಪ್ರತಿದಿನ ಹಿಂಬಾಲಿಸುತ್ತಿದ್ದ ಎಂದು ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದರು, ಈ ಕಾರಣಕ್ಕೆ ಆತ ರಾಜೇಂದ್ರನ್ ಮೇಲೆ ಸೇಡು ತೀರಿಸಿಕೊಳ್ಳಲು ಈ ರೀತಿ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಭಾನುವಾರ ರಾತ್ರಿ ರಾಜೇಂದ್ರನ ಅವರು ಮಲಗಿರುವಾಗ ಅವರ ಕೈಗೆ ಏನೋ ಬಿದ್ದಂತಾಗಿದೆ. ಗಾಬರಿಗೊಂಡು ಎದ್ದು ನೋಡಿದಾಗ ನೆಲದ ಮೇಲೆ ವಿಷಕಾರಿ ಹಾವೊಂದು ಬಿದ್ದಿರುವುದನ್ನು ನೋಡಿ ತಕ್ಷಣ ರಾಜೇಂದ್ರನ್ ಅವರು ಮನೆಯ ಬಾಗಿಲ ಬಳಿ ನೋಡಿದಾಗ ಕಿಚ್ಚು ನಿಂತಿದ್ದಾನೆ. ರಾಜೇಂದ್ರನ್ ತನನ್ನು ನೋಡಿದ್ದಾರೆ ಎಂದು ಅರಿತು, ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ಆರೋಪಿಯಿಂದ ಹಣ ಪಡೆದ ಆರೋಪ, ಬೆಂಗಳೂರಿನ ಇನ್ಸ್​ಪೆಕ್ಟರ್ ಸಹಿತ ನಾಲ್ವರು ಸಸ್ಪೆಂಡ್

ಹಾವನ್ನು ಕಂಡ ಮನೆಯವರು ಗಾಬರಿಗೊಂಡು ಅದನ್ನು ಕೊಂದು ಹಾಕಿದ್ದಾರೆ. ಹಾವಿನ ಮೃತದೇಹವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದು ವಿಷಕಾರಿಯೇ ಎಂದು ಪರಿಶೀಲಿಸಲಾಗುತ್ತಿದೆ. ವರದಿಯ ಪ್ರಕಾರ, ಕಿಚ್ಚು ತಾನು ಮಾಡಿದ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಆತನಿಗೆ ಈ ಹಾವು ಹೇಗೆ ಸಿಕ್ಕಿದೆ ಎಂಬುದನ್ನು ಕೂಡ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Tue, 8 August 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ