AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ, ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ, ಇಲ್ಲಿದೆ ವಿವರ

ವೈಯಾಲಿಕಾವಲ್ ಪೊಲೀಸರು ಬೆಲ್ಟ್ ನಿಂದ ಹೊಡೆದು, ಬ್ಯಾಟ್​ನಿಂದ ಬಡಿದು ಶೂ ನಿಂದ ಒದ್ದಿದ್ದರು. ಇದರಿಂದ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆಗೆ ಡೆತ್ ನೋಟ್​ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಿದ್ದಾರೆ.

ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ, ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ, ಇಲ್ಲಿದೆ ವಿವರ
ಮೃತ ವ್ಯಕ್ತಿ
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 20, 2023 | 4:40 PM

Share

ಬೆಂಗಳೂರು, ಸೆ.20: ವೈಯಾಲಿ ಕಾವಲ್ ಠಾಣೆ(Vyalikaval Police Station) ಪೊಲೀಸರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಡೆತ್​ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗರಾಜ್(47) ಮೃತ ರ್ದುದೈವಿ. ಮೃತ ನಾಗರಾಜ್, ಸನಾವುಲ್ಲಾ ಒಡೆತನದ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಕಂಪನಿ ಹಣ ಪಡೆದು ವಂಚಿಸಲಾಗಿದೆ ಎಂದು ನಟರಾಜ್ ಎಂಬಾತ ವೈಯಾಲಿಕಾವಲ್ ಠಾಣೆಯಲ್ಲಿ ದೂರು ನೀಡಿದ್ದ. ಆದರೆ, ಹಲವು ಜನರಿಂದ ಹಣ ಪಡೆದು ವಂಚಿಸಿರುವ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್​ನನ್ನು ಕರೆದೊಯ್ದು ಪೊಲೀಸರು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾನೆ.

ಸಾವಿಗೂ ಮುನ್ನ 2 ಪುಟದ ಡೆತ್​ನೋಟ್ ಬರೆದಿರುವ ಮೃತ ನಾಗರಾಜ್

ಇನ್ನು ಮೃತ ನಾಗರಾಜ್ ಸಾವಿಗೂ ಮುನ್ನ 2 ಪುಟದ ಡೆತ್​ನೋಟ್ ಬರೆದಿದ್ದಾನೆ. ಡೆತ್​ನೋಟ್​ನಲ್ಲಿ ‘ವೈಯಾಲಿಕಾವಲ್ ಪೊಲೀಸರು ಬೆಲ್ಟ್ ನಿಂದ ಹೊಡೆದು, ಬ್ಯಾಟ್​ನಿಂದ ಬಡಿದು ಶೂ ನಿಂದ ಒದ್ದಿದ್ದರು. ಇದರಿಂದ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆಗೆ ಡೆತ್ ನೋಟ್​ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಿದ್ದಾರೆ. ಇನ್ನು ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಸೋಶಿಯಲ್ ಮೀಡಿಯಾ ಸ್ಟಾರ್​ನಿಂದ ವಂಚನೆ; ಸಹೋದರಿಯ ಆತ್ಮಹತ್ಯೆಗೆ ನ್ಯಾಯ ಕೊಡಿಸುವಂತೆ ಗೃಹ ಸಚಿವರಿಗೆ ಪತ್ರ

ವಿದ್ಯಾರ್ಥಿಗಳ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಮೈಸೂರು: ವಿದ್ಯಾರ್ಥಿಗಳ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಜೆ.ಪಿನಗರದ ಕಾಲೇಜು ಬಳಿ ನಡೆದಿದೆ. ಕೃಷ್ಣ(17) ಮೃತ ರ್ದುದೈವಿ. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿತ್ತು. ಈ ವೇಳೆ ಸ್ನೇಹಿತನೇ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಕುರಿತು ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ