AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಕೈಯಲ್ಲಿ ಮಚ್ಚು ಹಿಡಿದು ಯುವತಿಯನ್ನು ಅಟ್ಟಿಸಿಕೊಂಡು ಹೋಗಿ ಹಲ್ಲೆ ಮಾಡಿದ ವ್ಯಕ್ತಿ

ಮಚ್ಚು ಹಿಡಿದುಕೊಂಡು ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯ ಬೀದಿಯಲ್ಲಿ ನಡೆದಿದೆ. ಇದೀಗ ಈ ಬಗ್ಗೆ ಒಂದು ವೀಡಿಯೊ ವೈರಲ್​​ ಆಗಿದೆ.

Video Viral: ಕೈಯಲ್ಲಿ ಮಚ್ಚು ಹಿಡಿದು ಯುವತಿಯನ್ನು ಅಟ್ಟಿಸಿಕೊಂಡು ಹೋಗಿ ಹಲ್ಲೆ ಮಾಡಿದ ವ್ಯಕ್ತಿ
ವೈರಲ್​​ ವಿಡಿಯೋ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 27, 2023 | 8:34 PM

ಪುಣೆ: ಮಚ್ಚು ಹಿಡಿದುಕೊಂಡು ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇದೀಗ ಈ ಬಗ್ಗೆ ಒಂದು ವೀಡಿಯೊ ವೈರಲ್​​ ಆಗಿದೆ. ಈ ಘಟನೆಯನ್ನು ನೋಡಿದ ಸ್ಥಳೀಯರು ಹಲ್ಲೆ ಮಾಡಿದ ವ್ಯಕ್ತಿಯನ್ನು ತಡೆಯಲು ಮುಂದಾಗಿದ್ದಾರೆ, ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಸದಾಶಿವ ಪೇಠ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ವ್ಯಕ್ತಿಯನ್ನು ಶಾಂತನು ಲಕ್ಷ್ಮಣ್ ಜಾಧವ್ ಎಂದು ಗುರುತಿಸಲಾಗಿದೆ. 20 ವರ್ಷದ ಪ್ರೀತಿ ರಾಮಚಂದ್ರ ಎಂಬಾಕೆಗೆ ಹಲ್ಲೆ ಮಾಡಿದ್ದಾನೆ. ಯುವತಿಗೆ ಅಡ್ಡಗಟ್ಟಿದಾಗ ಆಕೆ ಸ್ಕೂಟರ್ ನಿಲ್ಲಿಸಿದ್ದಾಳೆ. ಆತನ ನೋಡು ನೋಡುತ್ತಿದ್ದಂತೆ ಆತ ಮಚ್ಚನ್ನು ತೆಗೆದು ಆಕೆಯ ಮೇಲೆ ದಾಳಿ ಮಾಡಲು ಪ್ರಾರಂಭಿಸಿದ್ದಾನೆ.

ಈ ಸಮಯದಲ್ಲಿ, ಯುವತಿ ಸ್ಕೂಟರ್​ ಬಿಟ್ಟು, ಸಲ್ವಾರ್ ಮತ್ತು ಬೆನ್ನಿನ ಮೇಲೆ ಬ್ಯಾಗ್​​ ಹಾಕಿಕೊಂಡು ಬೀದಿಯಲ್ಲಿ ಓಡಲು ಶುರು ಮಾಡಿದ್ದಾಳೆ. ಆತ ಆಕೆಯನ್ನು ರಸ್ತೆಯುದ್ದಕ್ಕೂ ಓಡಿಸಿಕೊಂಡು ಹೋಗಿದ್ದಾನೆ. ಈ ಬಗ್ಗೆ ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿದೆ. ಆಕೆಯ ಬೆನ್ನಿಗೆ ಮಚ್ಚಿನಿಂದ ಹೊಡೆಯುವುದನ್ನು ಈ ದೃಶ್ಯದಲ್ಲಿ ನೋಡಬಹುದು. ಸ್ವಲ್ಪ ದೂರು ಸಾಗಿದ ಯುವತಿ ರಸ್ತೆ ಮಧ್ಯ ಬಿದ್ದಿದ್ದಾಳೆ, ಈ ಸಮಯದಲ್ಲಿ ಆಕೆಯ ಮೇಲೆ  ಮಚ್ಚಿನಿಂದ  ದಾಳಿ ಮಾಡಿದ್ದಾನೆ..

ಇದನ್ನೂ ಓದಿ: Crime News: 70ರ ವೃದ್ಧನಿಗೆ ಬಂದೂಕು ತೋರಿಸಿ, 1 ಲಕ್ಷ ರೂ, ಹಣವನ್ನು ಕಸಿದುಕೊಂಡು ಪರಾರಿಯಾದ ದರೋಡೆಕೋರರು

ಸ್ಥಳೀಯರು ಆಕೆಯನ್ನು ಕಾಪಾಡಿ, ಆತನ ಕೈಯಿಂದ ಮಚ್ಚನ್ನು ಕಿತ್ತುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಕೊಲೆ ಯತ್ನದಡಿ (ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307) ಆರೋಪ ಹೊರಿಸಲಾಗಿದೆ ಎಂದು ಪುಣೆಯ ಉಪ ಪೊಲೀಸ್ ಆಯುಕ್ತ ಸಂದೀಪ್ ಸಿಂಗ್ ಗಿಲ್ ತಿಳಿಸಿದ್ದಾರೆ. ಈ ಬಗ್ಗೆ NCP ಪಕ್ಷದ ಸಂಸದೆ ಸುಪ್ರಿಯಾ ಸುಳೆ ಅವರು ಈ ಬಗ್ಗೆ ಒಂದು ಟ್ವಿಟ್​​ ಕೂಡ ಹಂಚಿಕೊಂಡಿದ್ದಾರೆ.

ಆತ ಈ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಎಂದು ಆಕೆಯ ತಾಯಿ ತಿಳಿಸಿದ್ದಾರೆ. ನಾವು ಆತನ ತಂದೆಗೆ ದೂರು ನೀಡಿದ್ದೇವೆ, ಅದರೂ ಅವನು ಇಂದು ನಮ್ಮ ಮಗಳನ್ನು ಕೊಲ್ಲಲು ಪ್ರಯತ್ನಿಸಿದನು ಎಂದು ಹೇಳಿದ್ದಾರೆ.

Published On - 7:37 pm, Tue, 27 June 23

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್