AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಗೆಳತಿಗೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಯತ್ನಿಸಿದ ವಿವಾಹಿತ ವ್ಯಕ್ತಿ

38 ವರ್ಷದ ವಿವಾಹಿತ ವ್ಯಕ್ತಿಯೊಬ್ಬ ತನ್ನ ಗೆಳತಿಗೆ ಗುಂಡು ಹಾರಿಸಿರುವ ಘಟನೆ ದೆಹಲಿಯ ನರೇಲಾದ ಓಯೋ ಹೋಟೆಲ್‌ನಲ್ಲಿ ನಡೆದಿದೆ. ಓಯೋ ಹೋಟೆಲ್‌ ಕೋಣೆಯಲ್ಲಿ ಇಬ್ಬರ ನಡುವೆ ಜಗಳ ನಡೆದಿದೆ, ಕೋಪಗೊಂಡು ತನ್ನ ಗೆಳತಿಗೆ ಗುಂಡು ಹಾರಿಸಿದ್ದಾನೆ. ಆರೋಪಿಯನ್ನು ಪ್ರವೀಣ್ ಅಲಿಯಾಸ್ ಸಿತು ಎಂದು ಹೇಳಲಾಗಿದೆ.

Crime News: ಗೆಳತಿಗೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಯತ್ನಿಸಿದ ವಿವಾಹಿತ ವ್ಯಕ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 23, 2022 | 2:50 PM

Share

ದೆಹಲಿ: 38 ವರ್ಷದ ವಿವಾಹಿತ ವ್ಯಕ್ತಿಯೊಬ್ಬ ತನ್ನ ಗೆಳತಿಗೆ ಗುಂಡು ಹಾರಿಸಿರುವ ಘಟನೆ ದೆಹಲಿ(delhi) ನರೇಲಾದ ಓಯೋ (oyo) ಹೋಟೆಲ್‌ನಲ್ಲಿ ನಡೆದಿದೆ. ಓಯೋ ಹೋಟೆಲ್‌ ಕೋಣೆಯಲ್ಲಿ ಇಬ್ಬರ ನಡುವೆ ಜಗಳ ನಡೆದಿದೆ, ಕೋಪಗೊಂಡು ತನ್ನ ಗೆಳತಿಗೆ ಗುಂಡು ಹಾರಿಸಿದ್ದಾನೆ. ಆರೋಪಿಯನ್ನು ಪ್ರವೀಣ್ ಅಲಿಯಾಸ್ ಸಿತು ಎಂದು ಗುರುತಿಸಲಾಗಿದ್ದು, ಗೆಳತಿಗೆ ಗುಂಡು ಹಾರಿಸಿದ ನಂತರ ತನ್ನ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ. ಆದರೆ ಪ್ರವೀಣ್ ಬದುಕುಳಿದಿದ್ದಾನೆ, ಆತ ಈಗ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆರೋಪಿ ಮತ್ತು ಆತನ ಗೆಳತಿ ಗೀತಾ ಮಂಗಳವಾರ ಹೋಟೆಲ್​ನಲ್ಲಿ ಉಳಿದುಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೋಟೆಲ್ ಸಿಬ್ಬಂದಿ ಇಂಡಿಯಾ ಟುಡೇ ನೀಡಿದ ಮಾಹಿತಿ ಪ್ರಕಾರ, ಇವರಿಬ್ಬರು ತುಂಬಾ ಜಗಳ ಮಾಡಿಕೊಂಡಿದ್ದರೆ, ಪ್ರವೀಣ್ ಎಂಬ ವ್ಯಕ್ತಿ ಕೋಪದ ಭರದಲ್ಲಿ ತನ್ನ ಗೆಳತಿಯ ಎದೆಗೆ ಗುಂಡು ಹಾರಿಸಿದ್ದಾನೆ. ಆಕೆಯನ್ನು ಕೊಂದ ಬಳಿಕ ತಾನೂ ಕೂಡ ಗಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆರೋಪಿಯ ವಿರುದ್ಧ ಸೆಪ್ಟೆಂಬರ್ 21 ರಂದು ಮತ್ತೊಂದು ಕೊಲೆ ಪ್ರಕರಣದ ಆರೋಪ ಹೊರಿಸಲಾಯಿತು ಆದರೆ ನಂತರ ಜಾಮೀನು ನೀಡಲಾಯಿತು. ಗೌರವ್ ಎಂಬ ವ್ಯಕ್ತಿಗೆ ಗುಂಡು ಹಾರಿಸಿದ್ದು, ಆತನ ತಂದೆ ಪ್ರವೀಣ್ ವಿರುದ್ಧ ದೂರು ನೀಡಿದ ಕಾರಣ ಬಂಧಿಸಲಾಗಿತ್ತು.

ಇದನ್ನು ಓದಿ:ಮತ್ತೆ ಬೆಚ್ಚಿಬಿದ್ದ ದೆಹಲಿ, ಡ್ರಗ್ಸ್ ಸೇವಿಸಿ ತನ್ನ ಮನೆಯ 4 ಮಂದಿಯನ್ನು ಕೊಂದ ಯುವಕ

ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಪೊಲೀಸ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಬಂದಿದ್ದಾರೆ. ಗೀತಾಳನ್ನು ಆಸ್ಪತ್ರೆಗೆ ದಾಖಲಿಸಿದರು ಆಕೆಯನ್ನು ಬದುಕಿಸಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಪ್ರವೀಣ್‌ಗೆ ಸುಶೀಲ ಎಂಬ ಪತ್ನಿ ಇದ್ದು, ಹಳ್ಳಿಯೊಂದರಲ್ಲಿ ಮಕ್ಕಳೊಂದಿಗೆ ವಾಸವಾಗಿದ್ದಾಳೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ