AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ತಾಯಿಯ ಎದುರೇ ಅಪ್ರಾಪ್ತ ಮಗಳನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ

ತಾಯಿ ಎದುರೇ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ಬುಧವಾರ ಸಂಜೆ ತನ್ನ ತಾಯಿಯೊಂದಿಗೆ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಬಾಲಕಿಯ ತಾಯಿ ಸಹಾಯಕ್ಕಾಗಿ ಕಿರುಚುತ್ತಿದ್ದಂತೆ ವ್ಯಕ್ತಿಯೊಬ್ಬ ಬಾಲಕಿಯ ಮೇಲೆ ದಾಳಿ ಮಾಡಿ ಕನಿಷ್ಠ ಎಂಟು ಬಾರಿ ಇರಿದಿದ್ದಾನೆ.

ಮಹಾರಾಷ್ಟ್ರದಲ್ಲಿ ತಾಯಿಯ ಎದುರೇ ಅಪ್ರಾಪ್ತ ಮಗಳನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on:Aug 17, 2023 | 11:03 AM

Share

ತಾಯಿಯ ಎದುರೇ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ಬುಧವಾರ ಸಂಜೆ ತನ್ನ ತಾಯಿಯೊಂದಿಗೆ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಬಾಲಕಿಯ ತಾಯಿ ಸಹಾಯಕ್ಕಾಗಿ ಕಿರುಚುತ್ತಿದ್ದಂತೆ ವ್ಯಕ್ತಿಯೊಬ್ಬ ಬಾಲಕಿಯ ಮೇಲೆ ದಾಳಿ ಮಾಡಿ ಕನಿಷ್ಠ ಎಂಟು ಬಾರಿ ಇರಿದಿದ್ದಾನೆ.

ಸ್ಥಳೀಯರು ದಾಳಿಕೋರನನ್ನು ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಅಪರಾಧದ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ.

ಕಟ್ಟಡದ ಮೆಟ್ಟಿಲುಗಳ ಮೇಲೆ ರಕ್ತದ ಕಲೆಗಳಿದ್ದವು, ಅಪರಾಧಕ್ಕೆ ಬಳಸಿದ್ದ ಬಳಸಿದ್ದ ಚಾಕುವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ. ಬಾಲಕಿ ಟ್ಯೂಷನ್​ನಿಂದ ಮನೆಗೆ ತೆರಳುತ್ತಿದ್ದಳು, ಆರೋಪಿಯನ್ನು ಆದಿತ್ಯ ಕಾಂಬಳೆ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ಹೊರಬಂದ ಮೇಲೆ ಮಾಡಿದ್ದು ಮತ್ತದೇ ಹೇಯ ಕೃತ್ಯ

ಪೊಲೀಸರ ಮಾಹಿತಿ ಪ್ರಕಾರ ಸಂಜೆ ಏಳು ಗಂಟೆಯ ವೇಳೆ ಆರೋಪಿ ಆದಿತ್ಯ ದುರ್ಗಾ ದರ್ಶನ್ ಸೊಸೈಟಿಯ ಆವರಣದಲ್ಲಿ ಕಾಯುತ್ತಿದ್ದ, ಬಾಲಕಿ ಎಷ್ಟು ಗಂಟೆಗೆ ಬರುತ್ತಾಳೆ ಎಂದು ಎಲ್ಲರನ್ನೂ ಕೇಳುತ್ತಿದ್ದ.

ರಾತ್ರಿ 8 ಗಂಟೆ ಸುಮಾರಿಗೆ ಟ್ಯೂಷನ್​ನಿಂದ ವಾಪಸಾಗುತ್ತಿದ್ದಳು, ಆಕೆಯ ಮನೆಯ ಮೆಟ್ಟಿಲುಗಳ ಮೇಲೆ ಆರೋಪಿ ಕೂತಿದ್ದ, ಬಳಿಕ ಅವರು ಬರುವ ಸಂದರ್ಭ ನೋಡಿ ಮರೆಯಲ್ಲಿ ನಿಂತಿದ್ದ ಬಾಲಕಿ ಹಾಗೂ ತಾಯಿ ಮೆಟ್ಟಿಲುಗಳನ್ನು ಏರುತ್ತಿದ್ದಂತೆ ತಾಯಿಯನ್ನು ತಳ್ಳಿ ಮಗಳಿಗೆ ಚಾಕುವಿನಿಂದ 8 ಬಾರಿ ಇರಿದಿದ್ದಾನೆ, ತಕ್ಷಣವೇ ಬಾಲಕಿ ಅಲ್ಲೇ ಕುಸಿದುಬಿದ್ದಿದ್ದಾಳೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:02 am, Thu, 17 August 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ